ತಾಪಮಾನ | ಬೆಂಗಳೂರಿನಲ್ಲಿ ಶೇ.74 ರಷ್ಟು ಜಲಮೂಲಗಳು ನಾಶ

Date:

ಅಕಾಲಿಕ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆ ಅರವರಿಸಿದೆ. ತಂಪಿನ ನಗರಿ ಎಂದು ಖ್ಯಾತಿ ಗಳಿಸಿದ್ದ ಬೆಂಗಳೂರು, ಈಗ ಬಿಸಿಲ ನಾಡಾಗಿ ಬದಲಾಗುತ್ತಿದೆ. ಈ ಬಿಸಿಲ ಝಳಕ್ಕೆ, ತಾಪಮಾನ ಹೆಚ್ಚಳಕ್ಕೆ ನಗರದ ಜನರು ಸುಸ್ತಾಗಿದ್ದಾರೆ. ಬೆಳಿಗ್ಗೆ 9ಗಂಟೆ ಬಳಕ ಮನೆಯಿಂದ ಹೊರಗೆ ಓಡಾಡುವುದೇ ಅಸಾಧ್ಯವೆಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ನಗರವು ಶೇ.66ರಷ್ಟು ತನ್ನ ಹಸಿರು ಹೊದಿಕೆಯನ್ನು ಕಳೆದುಕೊಂಡಿದೆ. ಅಲ್ಲದೇ, ಶೇ.74 ರಷ್ಟು ಜಲಮೂಲಗಳು ಕೂಡ ನಾಶವಾಗಿವೆ.

ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನಗಳ ಕೇಂದ್ರ (ಸಿಇಎಸ್‌) ಪ್ರಕಾರ, ನಗರವು ಶೇ.584ರಷ್ಟು ನಿರ್ಮಾಣ ಪ್ರದೇಶಗಳನ್ನು ಕಂಡಿದೆ. ಈ ಬೇಸಿಗೆಯಲ್ಲಿ ನಗರ ಎಲ್-ನಿನೊ ಪರಿಣಾಮಕ್ಕೆ ಸಿಲುಕಿಕೊಂಡಿದೆ ಎನ್ನುತ್ತಾರೆ ತಜ್ಞರು.

ಇದೇ ಪರಿಸ್ಥಿತಿ ಮುಂದುವರಿದರೆ ಬೆಂಗಳೂರಿನ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು. 2038ರ ವೇಳೆಗೆ, ಸಿಇಎಸ್‌ ಅರಣ್ಯಗಳು ಶೇ.0.65ಕ್ಕೆ (2022ರಲ್ಲಿ ನಡೆದಿದ್ದ ಕೊನೆಯ ಗಣತಿ ಪ್ರಕಾರ, ಇದು ಶೇ.3.32 ಇತ್ತು) ಕಡಿಮೆಯಾಗಬಹುದು ಎಂದು ಊಹಿಸಲಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ನಗರದಲ್ಲಿ 2038ರ ವೇಳೆಗೆ ಸುಸಜ್ಜಿತ ಪ್ರದೇಶಗಳು ನಿರ್ಮಾಣವಾಗಬಹುದು. ಆದರೆ, ಪರಿಸ್ಥಿತಿ ಉತ್ತಮವಾಗಿರುವುದಿಲ್ಲ ಎಂದು ಸಿಇಎಸ್ ಅಧ್ಯಯನ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಸಜ್ಜಿತ ಕಟ್ಟಡಗಳ ನಿರ್ಮಾಣ ಅಥವಾ ಸುಸಜ್ಜಿತ ಮೇಲ್ಮೈಗಳ ಹೆಚ್ಚಳ ಹಸಿರು ಸ್ಥಳಗಳಲ್ಲಿನ ಕಡಿತಕ್ಕೆ ಕಾರಣವಾಗುತ್ತದೆ. ಇದರಿಂದ ಬೆಂಗಳೂರಿನಲ್ಲಿ ಬಿಸಿಲಿನ ಶಾಖವು ಇನ್ನಷ್ಟು ಹೆಚ್ಚಳವಾಗಬಹುದು. ಈ ವರ್ಷ ಮಾರ್ಚ್‌ನಲ್ಲಿ 33.04 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನ ಈಗ 41.4 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ” ಎಂದು ಸಿಇಎಸ್‌ ಅಧಿಕಾರಿ ಪ್ರೊ. ಟಿ.ವಿ ರಾಮಚಂದ್ರ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಖಾಸಗಿ ಬಸ್ ಕಂಡಕ್ಟರ್​ಗಳ ಗಲಾಟೆ; ಪುರುಷ ನಿರ್ವಾಹಕನಿಗೆ ಚಪ್ಪಲಿ ತೋರಿಸಿದ ಲೇಡಿ ಕಂಡಕ್ಟರ್

“ನಗರದಲ್ಲಿರುವ ಕೆರೆಗಳು, ಹಸಿರು ಹೊದಿಕೆ ಕಡಿಮೆಯಾಗುತ್ತಿರುವುದು ವಾಯುಗುಣದ ಮೇಲೆ ಪರಿಣಾಮ ಬೀರಿದೆ. ಇದು ತಂಪಾದ ವಾತಾವರಣವನ್ನು ಕಡಿಮೆ ಮಾಡುತ್ತದೆ. ಬಿಸಿ ವಾತಾವರಣವನ್ನು ಹೆಚ್ಚಳ ಮಾಡುತ್ತದೆ. ನಗರ ಶಾಖ ಪರಿಣಾಮವು ಸುತ್ತುವರಿದ ತಾಪಮಾನ ಮತ್ತು ಆರ್ದ್ರತೆಯ ಮಟ್ಟವನ್ನು ಹೆಚ್ಚಿಸುತ್ತದೆ. ಪರಿಣಾಮ ಶಾಖದ ಒತ್ತಡ ಮತ್ತು ಶಾಖ-ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತವೆ” ಎಂದು ರಾಮಚಂದ್ರ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...