ಹೊಸ ಮಾರ್ಗಸೂಚಿ ಪ್ರಕಟವಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಸಚಿವ ಈಶ್ವರ್​ ಖಂಡ್ರೆ

Date:

ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಟಿಪ್ಪಣಿ ಹೊರಡಿಸಿರುವ ಸಚಿವರು, ಈ ಮೂಲಕ ಅನಧಿಕೃತ ಚಾರಣಕ್ಕೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

“ಆನ್​​ಲೈನ್​​ ಬುಕ್ಕಿಂಗ್​ ಇಲ್ಲದ ಚಾರಣ ​ಪಾಯಿಂಟ್​​​​ಗಳಿಗೆ ನಿಷೇಧಿಸಲಾಗಿದೆ. ಆನ್​​ಲೈನ್​​​​ ಬುಕ್ಕಿಂಗ್​ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಕಾರಣ ನಿಷೇಧಿಸಲಾಗಿದೆ. ಅರಣ್ಯ ವ್ಯಾಪ್ತಿಯ ಗಿರಿ ಶಿಬಿರಗಳಲ್ಲಿ ಚಾರಣ ಮಾಡುವರ ಹವ್ಯಾಸ ಏರಿಕೆಯಾಗಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ. ಅಲ್ಲದೆ, ಚಾರಣ ಹೋದವರು ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್​​, ಬಾಟಲಿ ಎಸೆಯುತ್ತಿದ್ದಾರೆ. ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಚಾರಣಕ್ಕೆ​ ನಿರ್ಬಂಧ ವಿಧಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

“ಗಣರಾಜ್ಯೋತ್ಸವದ ದಿನ ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ ಜೊತೆಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಬರುವವರನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ. ಜೊತೆಗೆ ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಪರಿಸರಕ್ಕೂ ಹಾಣಿಯಾಗುತ್ತಿದೆ. ಹೀಗಾಗಿ ಹೊಸ ಮಾರ್ಗಸೂಚಿ ಜಾರಿಯಾಗುವ ತನಕ ಬುಕ್ಕಿಂಗ್ ಇಲ್ಲದ ಚಾರಣವನ್ನು ಸರ್ಕಾರ ನಿಷೇಧಿಸಿದೆ” ಎಂದು ಸಚಿವರು ಟಿಪ್ಪಣಿಯಲ್ಲಿ ವಿವರಿಸಿದ್ದಾರೆ.

“ರಾಜ್ಯದ ಎಲ್ಲ ಚಾರಣ ತಾಣ (ಟ್ರಕ್ಕಿಂಗ್ ಪಾಯಿಂಟ್)ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯ ವಿಧಾನ (SOP) ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧಿಸುವಂತೆ ಸೂಚಿಸಿದೆ” ಎಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...