ಪಠ್ಯ ಪರಿಷ್ಕರಣೆ | ಸಭೆಗೆ ನುಗ್ಗಿ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ ಕಾರ್ಯಕರ್ತರ ಬಂಧನ

Date:

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ನುಗ್ಗಿ ಧಿಕ್ಕಾರ ಕೂಗಿದರು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪದ ಕುರಿತು ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಸಾರ್ವಜನಿಕರ ಸೋಗಿನಲ್ಲಿ ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶಿಸಿ ದಿಕ್ಕಾರ ಕೂಗಿದರು.

ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಹೆಡ್ಗೆವಾರ್ ಮತ್ತು ಸಾವರ್ಕರ್ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅವರ ಪರವಾಗಿ ಘೋಷಣೆ ಕೂಗಿ ಸಚಿವ ಮಧು ಬಂಗಾರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದಿಂದ ಹೊರದಬ್ಬಿದರು. ಬಳಿಕ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ? ನಕಲಿ ಪತ್ರ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ; ಎಸ್‌ಪಿಗೆ ದೂರು ಸಲ್ಲಿಸಿದ ಶಾಸಕ ಬಿ ಆರ್‌ ಪಾಟೀಲ್‌

ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಧಿಕ್ಕಾರ ಕೂಗಿರುವುದು ಗುಪ್ತಚರ ಇಲಾಖೆ ವೈಫಲ್ಯವಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಸಚಿವರ ವಿರುದ್ಧ ಪ್ರತಿಭಟನೆ ನಡೆಸುತ್ತಾರೆಂಬ ಮಾಹಿತಿ ಕಲೆಹಾಕಿ, ಅದನ್ನು ತಡೆಯುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ ಎನ್ನಲಾಗಿದೆ.

ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಪಠ್ಯ ಪುಸ್ತಕಗಳಲ್ಲಿ ಸೇರಿಸಿದ್ದ ಸಾವರ್ಕರ್ ಮತ್ತು ಹೆಡ್ಗೇವಾರ್ ಅವರ ಅಧ್ಯಾಯಗಳನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆದುಹಾಕಿದೆ. ಬಿ ಆರ್ ಅಂಬೇಡ್ಕರ್, ಜವಾಹರಲಾಲ್ ನೆಹರು ಮತ್ತು ಸಾವಿತ್ರಿಬಾಯಿ ಫುಲೆ ಅವರ ಪಾಠಗಳನ್ನು ಸರ್ಕಾರ ಸೇರಿಸಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ವಿವಾದಾತ್ಮಕ ವ್ಯಕ್ತಿಗಳ ಅಧ್ಯಾಯಗಳನ್ನು ತೆಗೆದುಹಾಕುವುದಾಗಿ ಭರವಸೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...