ಸಂಸತ್ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾರ

Date:

ಇಂದು ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ ವೈಫಲ್ಯವನ್ನು ಖಂಡಿಸಿ, ಕರ್ನಾಟಕ ವಿಧಾನಸಭೆ ಇಂದು ಸಂಜೆ ಘಟನೆಯನ್ನು ಖಂಡಿಸಿ, ಸದನದಲ್ಲಿ ಖಂಡನಾ ನಿರ್ಣಯ ಅಂಗೀಕರಿಸಿತು.

ಕಲಾಪ ಮಧ್ಯದಲ್ಲಿ ವಿಷಯ ಪ್ರಸ್ತಾಪಿಸಿದ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ, ಸಂಸತ್ತಿನಲ್ಲಿ ಇಂದು ಅಪರಿಚಿತ, ಆಂಗುತಕರು ಪ್ರವೇಶಿಸಿ, ಭಯ ಹುಟ್ಟಿಸಿರುವುದು ತೀವ್ರ ಖಂಡನೀಯವಾದದ್ದು. ಈ ಘಟನೆಯನ್ನು ಸದನವು ಖಂಡಿಸಿ ನಿರ್ಣಯ ಕೈಗೊಳ್ಳಬೇಕೆಂದು ವಿಷಯ ಪ್ರಸ್ತಾಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಸಂಸತ್ ಸದನ ಪ್ರವೇಶಿಸಿ ಭಯ ಹುಟ್ಟಿಸಿದ ಘಟನೆ ಅತ್ಯಂತ ಖಂಡನೀಯವಾದದ್ದು. ಇದನ್ನು ರಾಜ್ಯದ ಜನತೆಯ ಪರವಾಗಿ ಖಂಡಿಸಬೇಕು. ರಾಜ್ಯ ವಿಧಾನಮಂಡಲದ ಕಲಾಪಗಳಿಗೂ ಸುರಕ್ಷತೆಯ ದೃಷ್ಟಿಯಿಂದ ಇದು ಪಾಠವಾಗಬೇಕು. ಸದನ ಸದಸ್ಯರು ಪ್ರವೇಶ ಪತ್ರಗಳನ್ನು ನೀಡುವಾಗ ಎಚ್ಚರಿಕೆ ವಹಿಸಿ ಪೂರ್ವಾಪರ ವಿಚಾರಿಸಿ ಪರಿಚಯಸ್ಥರಿಗೆ ಮಾತ್ರ ನೀಡಬೇಕು. ತಪಾಸಣೆ ತೀವ್ರವಾಗಬೇಕು. ಭದ್ರತಾ ಲೋಪವಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು. ಈ ಕುರಿತು ತಮ್ಮ ಸಿಬ್ಬಂದಿಗಳಿಗೂ ಸೂಚನೆ ನೀಡಬೇಕೆಂದು ಸಭಾಧ್ಯಕ್ಷರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮಾತನಾಡಿ, ಘಟನೆಯನ್ನು ರಾಜ್ಯದ ಪರವಾಗಿ ಕಠಿಣವಾಗಿ ಖಂಡಿಸುತ್ತೇವೆ. ಇಂದು ಸದನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆಗುಂತಕರಿಗೆ ಕಠಿಣ ಕ್ರಮವಾಗಬೇಕು. ಸದನಗಳ ಪ್ರವೇಶಕ್ಕೆ ಪಾಸ್ ನೀಡುವಾಗ ಅವರ ಆಧಾರ್ ಕಾರ್ಡ್ ಪರಿಶೀಲಿಸಿ, ಸರಿಯಾದ ಪರಿಚಯ ನೋಡಿ ನೀಡಬೇಕು ಎಂದು ಹೇಳಿದರು.

ಘಟನೆಯನ್ನು ಖಂಡಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ವಿಪಕ್ಷ ನಾಯಕ ಆರ್. ಅಶೋಕ, ಶಾಸಕರಾದ ಸುರೇಶಕುಮಾರ್, ಅರಗ ಜ್ಞಾನೇಂದ್ರ ಸೇರಿದಂತೆ ಇತರರು ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...