ಟ್ಯಾಂಕರ್‌ಗಳ ಮೇಲೆ ಸ್ಟಿಕರ್ ಅಂಟಿಸದ ಅಧಿಕಾರಿಗಳ ಮೇಲೆ ಗರಂ ಆದ ಜಲಮಂಡಳಿ ಅಧ್ಯಕ್ಷ

Date:

  • ಹೆಚ್ಚಿನ ಪ್ರಮಾಣದ ಟ್ಯಾಂಕ್‌ಗಳನ್ನು ಅಳವಡಿಸಲು ಸೂಚನೆ
  • ಜನಸಾಂದ್ರತೆ ಆಧಾರದ ಮೇಲೆ ನೀರು ಸರಬರಾಜು ಮಾಡಿ

ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಹಾಗೂ ಪ್ರದೇಶಗಳಲ್ಲಿ ಇರುವಂತಹ ಜನಸಂಖ್ಯೆ ಆಧಾರದ ಮೇಲೆ ಅಗತ್ಯವಿರುವಷ್ಟು ನೀರನ್ನ ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇರುವಂತಹ ಬಂಡೆಪಾಳ್ಯ ಗ್ರಾಮಕ್ಕೆ ಮಾರ್ಚ್‌ 16ರಂದು ಭೇಟಿ ನೀಡಿ, ಉಚಿತವಾಗಿ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು.

ಗ್ರಾಮಸ್ಥರೊಂದಿಗೆ ಮಾತನಾಡಿದ ಅಧ್ಯಕ್ಷರು ನೀರಿನ ಸರಬರಾಜು ನೀರಿನ ಲಭ್ಯತೆ ನೀರಿನ ಗುಣಮಟ್ಟ ಎಲ್ಲದರ ಬಗ್ಗೆ ಮಹಿಳೆಯರಿಂದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ಯಾಂಕರ್‌ಗಳ ಮೇಲೆ ಸ್ಟಿಕರ್ ಅಂಟಿಸದ ಅಧಿಕಾರಿಗಳ ಮೇಲೆ ಗರಂ

ಬಂಡಿಪಾಳ್ಯದಲ್ಲಿ ನೀರಿನ ವಿತರಣೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಂತಹ ಸಂದರ್ಭದಲ್ಲಿ ಉಚಿತ ಟ್ಯಾಂಕರ್ ಮೇಲೆ ಸ್ಟಿಕ್ಕರ್ ಅಂಟಿಸದೆ ಇರುವಂತಹ ಅಧಿಕಾರಿಗಳ ಮೇಲೆ ಜಲಮಂಡಳಿಯ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಅವರು ಗರಂ ಆದರು.

ಜಲಮಂಡಳಿ ವತಿಯಿಂದ ಉಚಿತವಾಗಿ ನೀರು ಸರಬರಾಜು ಮಾಡುತ್ತಿರುವಂತಹ ಟ್ಯಾಂಕರ್‌ಗಳ ಮೇಲೆ ಉಚಿತ ಸ್ಟಿಕ್ಕರ್ ಅನ್ನು ಅಂಟಿಸುವುದು ಕಡ್ಡಾಯ. ಈ ಬಗ್ಗೆ ಅಧಿಕಾರಿಗಳಿಗೆ ಹಲವಾರು ಬಾರಿ ಸೂಚನೆ ನೀಡಲಾಗಿದೆ. ಆ ನೀರಿನ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಉಚಿತ ನೀರಿನ ಟ್ಯಾಂಕರ್‌ಗಳ ಮೇಲೆ ಸ್ಟಿಕರ್‌ಗಳನ್ನ ಅಳವಡಿಸಿರುವುದನ್ನ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಫ್ರೀಡಂ ಪಾರ್ಕ್ ಪಾರ್ಕಿಂಗ್ ಸೌಲಭ್ಯ ನಿರ್ವಹಣೆ ಗುತ್ತಿಗೆ ಪಡೆದ ಕೆಂಗೇರಿ ಸಂಸ್ಥೆ

ಹೆಚ್ಚಿನ ಪ್ರಮಾಣದ ಟ್ಯಾಂಕ್‌ಗಳನ್ನು ಅಳವಡಿಸಲು ಸೂಚನೆ

ನೀರಿನ ಲಭ್ಯತೆ ಮತ್ತು ಜನಸಂಖ್ಯೆಯ ಆಧಾರದ ಮೇಲೆ ಟ್ಯಾಂಕ್‌ಗಳನ್ನ ಅಳವಡಿಸುವುದು ಸೂಕ್ತ. ಬಂಡಿಪಾಳ್ಯದ ಗ್ರಾಮಸ್ಥರೊಂದಿಗೆ ಮಾತನಾಡಿದ ಜಲ ಮಂಡಳಿ ಅಧ್ಯಕ್ಷರು ನೀರಿನ ಪ್ರಮಾಣ ಹಾಗೂ ಲಭ್ಯತೆ ಬಗ್ಗೆ ಮಾಹಿತಿ ಪಡೆದರು.

ಕೆಲವು ಮಹಿಳೆಯರು ಇನ್ನಷ್ಟು ನೀರಿನ ವಿತರಣೆ ಮಾಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಅಧ್ಯಕ್ಷರು ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಟ್ಯಾಂಕ್‌ಗಳನ್ನು ಅಳವಡಿಸುವಂತೆ ಹಾಗೂ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಅವುಗಳನ್ನ ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...