ಬೆಂಗಳೂರು ನಗರದ ಜನ ನಾರಿಮನ್ ಅವರಿಗೆ ಸದಾ ಕೃತಜ್ಞರಾಗಿರುತ್ತಾರೆ: ಎಂ ಬಿ ಪಾಟೀಲ್

Date:

ಕಾವೇರಿ ಜಲ ವಿವಾದದಲ್ಲಿ ರಾಜ್ಯದ ಪರ ವಾದಿಸಿ, ನ್ಯಾಯ ಒದಗಿಸಿದ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ನಾರಿಮನ್ ಅವರು ಈ ದೇಶ ಕಂಡ ಅಪ್ರತಿಮ ನ್ಯಾಯವಾದಿಗಳಲ್ಲಿ ಒಬ್ಬರು. ವೃತ್ತಿಯಲ್ಲಿ ಮೌಲ್ಯಗಳನ್ನು ಪ್ರತಿನಿಧಿಸುತ್ತಿದ್ದ ಅವರು, ಉದಾರ ಮಾನವತಾವಾದಿ ಆಗಿದ್ದರು. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಕಾವೇರಿ ನೀರಿನ ಹಕ್ಕಿನ ವಿಚಾರವಾಗಿ ಮಾತನಾಡುವಾಗ ಇದು ಅನುಭವಕ್ಕೆ ಬಂದಿತ್ತು” ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

“ಕಾವೇರಿ ಜಲ ವಿವಾದ ಭುಗಿಲೆದ್ದಾಗ ನಾರಿಮನ್ ಅವರು ಕರ್ನಾಟಕದ ಹಕ್ಕನ್ನು ಸಮರ್ಥವಾಗಿ ಮಂಡಿಸಿದರು. ಅವರ ವಾದದಿಂದಾಗಿ ರಾಜ್ಯಕ್ಕೆ ಹೆಚ್ಚು ನೀರು ಸಿಕ್ಕಿತು. ನಮ್ಮ ಅಹವಾಲುಗಳನ್ನು ನಾರಿಮನ್ ಅವರು ಸದಾ ಸಹಾನುಭೂತಿಯಿಂದ ಆಲಿಸುತ್ತಿದ್ದರು” ಎಂದು ಅವರು ಸ್ಮರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾರಿಮನ್ ಅವರೊಂದಿಗೆ ನನಗೆ ವೈಯಕ್ತಿಕವಾಗಿ ಗಾಢ ಸಂಬಂಧವಿತ್ತು. ಕಾವೇರಿ ನದಿಯ ವಿಚಾರದಲ್ಲಿ ಪ್ರತಿಯೊಂದು ವಿವರ ಮತ್ತು ಅಂಕಿಅಂಶಗಳನ್ನೆಲ್ಲ ಅವರು ಕರತಲಾಮಲಕ ಮಾಡಿಕೊಂಡಿದ್ದರು. ಎಷ್ಟೋ ಸಂದರ್ಭಗಳಲ್ಲಿ ಅವರು ನಮ್ಮನ್ನೆಲ್ಲ ಉದ್ದೇಶಿಸಿ, ಸಚಿವರಾದವರು ಯಾವುದೇ ವಿಚಾರದ ಬಗ್ಗೆ ಸೂಕ್ತ ತಿಳಿವಳಿಕೆ ಹೊಂದಿರಬೇಕು ಎಂದು ಹೇಳುತ್ತಿದ್ದರು. ಅವರ ಇಂತಹ ಮಾತುಗಳು ನಮ್ಮ ಆತ್ಮಸಾಕ್ಷಿಯನ್ನು ಜಾಗೃತಗೊಳಿಸುತ್ತಿದ್ದವು” ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಒಂದು ಹಂತದಲ್ಲಿ ನಾರಿಮನ್ ಅವರಿಗೆ ಅನಗತ್ಯವಾಗಿ ಅತ್ಯಧಿಕ ಶುಲ್ಕ ಪಾವತಿ ಮಾಡಲಾಗುತ್ತಿದೆ ಎನ್ನುವ ಅನಪೇಕ್ಷಿತ ಮಾತುಗಳು ಕೇಳಿಬಂದವು. ಆಗ ನೊಂದುಕೊಂಡ ನಾರಿಮನ್ ಅವರು ತಾವು ಹಿಂದೆ ಸರಿಯುವುದಾಗಿ ಹೇಳಿದರು. ಆ ಸಂದರ್ಭದಲ್ಲಿ ನಾನು ಅವರನ್ನು ಮನವೊಲಿಸಿ, ಪುನಃ ರಾಜ್ಯದ ಪರವಾಗಿ ವಾದಿಸುವಂತೆ ಮಾಡಿದೆ. ಅಂತಿಮವಾಗಿ ಅವರು ತಾವು ಕೊಟ್ಟ ಮಾತಿನಂತೆ ಕರ್ನಾಟಕಕ್ಕೆ ನ್ಯಾಯ ಒದಗಿಸಿ ಕೊಟ್ಟರು” ಎಂದು ಅವರು ವಿವರಿಸಿದ್ದಾರೆ.

“ಕಾವೇರಿ ನದಿ ನೀರಿನ ವಿಚಾರದಲ್ಲಿ ತಮಿಳುನಾಡು ಅವಾಸ್ತವಿಕವಾಗಿ ಮಾತನಾಡುತ್ತಿತ್ತು. ಆಗ ನಾರಿಮನ್ ಅವರು ಚೆನ್ನೈ ನಗರದ ಕುಡಿಯುವ ನೀರಿನ ಅಗತ್ಯಕ್ಕೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ತಮ್ಮ ಪಾಲಿನ ತಲಾ 5 ಟಿಎಂಸಿ ಅಡಿ ನೀರನ್ನು ಉದಾರವಾಗಿ ಬಿಟ್ಟು ಕೊಟ್ಟಿರುವುದನ್ನು ನ್ಯಾಯ ಮಂಡಲಿಯ ಗಮನಕ್ಕೆ ತಂದರು. ಈ ಮೂಲಕ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 4.75 ಟಿಎಂಸಿ ಅಡಿ ನೀರು ಸಿಗುವಂತೆ ನೋಡಿಕೊಂಡರು. ಇದಕ್ಕಾಗಿ ಬೆಂಗಳೂರು ನಗರದ ಜನ ನಾರಿಮನ್ ಅವರಿಗೆ ಸದಾ ಕೃತಜ್ಞರಾಗಿರುತ್ತಾರೆ” ಎಂದು ಅವರು ಹೇಳಿದ್ದಾರೆ.

“ಭಗವಂತನು ನಾರಿಮನ್ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕರುಣಿಸಲಿ” ಎಂದು ಸಚಿವರು ಪ್ರಾರ್ಥಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...