ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲು ಮುಂದಾದ ಸಾರಿಗೆ ಇಲಾಖೆ

Date:

2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಅಳವಡಿಸುವಂತೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಅಂತ್ಯವಾಗಲಿದೆ. ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು ಆಸಕ್ತಿ ತೋರದ ಹಿನ್ನೆಲೆ, ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಸಾರಿಗೆ ಇಲಾಖೆ ಫೆ.17 ರಿಂದ ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲು ಮುಂದಾಗಿದೆ.

2019ರ ಏಪ್ರಿಲ್‌ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲೀಕರು ಆನ್‌ಲೈನ್ ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಾಯಿಸಿ ಆನ್‌ಲೈನ್ ಮೂಲಕವೇ ಹೆಚ್‌ಎಸ್‌ಆರ್‌ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ತಿಳಿಸಿತ್ತು.

ಎಚ್‌ಎಸ್‌ಆರ್‌ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ದೊರೆಯಲಿದೆ. ಜತೆಗೆ, ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ, ರಾಜ್ಯ ಸಾರಿಗೆ ಇಲಾಖೆ ಎಚ್ಎಸ್ಆರ್​ಪಿ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಕೊನೆಯ ದಿನಾಂಕ ನಿಗದಿ ಮಾಡಿದೆ. ಎಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2023ರ ನ.17ರ ಗಡುವು ವಿಧಿಸಿತ್ತು. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆ 2024ರ ಫೆ.17ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈಗಾಗಲೇ ಎರಡು ಬಾರಿ ಅವಧಿ ವಿಸ್ತರಣೆ ಮಾಡಿರುವ ಇಲಾಖೆ ಇದೀಗ ಫೆ.17 ಕೊನೆಯ ದಿನಾಂಕವಾಗಿದೆ.

ಜನರು ಯಾರು ಕೂಡ ಹೊಸ ನಂಬರ್ ಪ್ಲೇಟ್‌ ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ಹಿನ್ನೆಲೆ, ಸಾರಿಗೆ ಇಲಾಖೆ ದಂಡ ಪ್ರಯೋಗಕ್ಕೆ ಮುಂದಾಗಿದ್ದು, ಫೆ.17 ರಿಂದ ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ ₹1 ಸಾವಿರ, ಎರಡನೇ ಬಾರಿ ಸಿಕ್ಕಿಬಿದ್ದರೆ ₹2 ಸಾವಿರ ದಂಡ ವಿಧಿಸುತ್ತದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಶವಾಗಾರ ಕಟ್ಟಡ ನಿರ್ಮಾಣಕ್ಕಾಗಿ 70 ಮರ ಕಡಿಯಲು ಮುಂದಾದ ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು

ಫೆ.17 ಎಚ್‌ಎಸ್‌ಆರ್‌ಪಿ ಹಾಕಿಸಲು ಕೊನೆಯ ದಿನಾಂಕವಾಗಿದ್ದು, ಇನ್ನು ಗಡುವು ಅಂತ್ಯವಾಗಲು 16 ದಿನಗಳು ಬಾಕಿ ಉಳಿದಿವೆ. ಆರ್​ಟಿಓ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೆಯ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಲೆಕ್ಕ ತೆಗೆದುಕೊಂಡರೆ ಅಂದಾಜು 1.70 ಕೋಟಿ ವಾಹನಗಳಿವೆ. ಆದರೆ, ಇಲ್ಲಿಯವರೆಗೂ ₹10 ಲಕ್ಷ ವಾಹನಗಳಷ್ಟೇ ಎಚ್‌ಎಸ್‌ಆರ್‌ಪಿ ಹಾಕಿಸಿಕೊಂಡಿವೆ ಎಂದು ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಗಡುವು ಮುಗಿಯುವಷ್ಟರಲ್ಲಿ ಎಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳದಿದ್ದರೆ ಅಂತಹವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಹಾಗೂ ಆರ್‌ಟಿಓ ಅಧಿಕಾರಿಗಳು ಜಂಟಿಯಾಗಿ ದಂಡಾಸ್ತ್ರ ಪ್ರಯೋಗ ಆರಂಭ ಮಾಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...