ಕುಲಪತಿ ಹುದ್ದೆಗೆ ಅಸ್ಸಾದಿ ಹೆಸರು ಆಯ್ಕೆ ಮಾಡದಂತೆ ಗವರ್ನರ್ ಮೇಲೆ ಒತ್ತಡವಿತ್ತು: ಅಮೀನ್‌ಮಟ್ಟು

Date:

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಕುಲಪತಿಯಾಗಲು ಪ್ರೊ.ಮುಜಾಫರ್ ಅಸ್ಸಾದಿ ಬಯಸಿದ್ದರು. ಅವರ ಹೆಸರನ್ನು ಸರ್ಕಾರ ಶಿಫಾರಸ್ಸು ಮಾಡಿತ್ತು. ಆದರೆ ಅವರನ್ನು ಆಯ್ಕೆ ಮಾಡದಂತೆ ರಾಜ್ಯಪಾಲರ ಮೇಲೆ ಒತ್ತಡವಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು.

ಬೆಂಗಳೂರಿನ ಮೋದಿ ಮಸೀದಿ ಬಳಿಯ ಸಾಲಾರ್ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಚಿಂತಕ ಮುಜಾಫರ್ ಅಸ್ಸಾದಿಯವರ ಸ್ಮರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಲ ಅವರನ್ನು ಕುಲಪತಿ ಮಾಡಲು ಸರ್ಕಾರ ಮುಂದಾಗಿದ್ದು ನಿಜ. ಇದೊಂದು ಹೆಸರು ಬಿಟ್ಟುಬಿಡಿ, ನನ್ನ ಮೇಲೆ ಒತ್ತಡ ಇದೆ ಎಂದು ಗವರ್ನರ್ ಹೇಳಿದ್ದರು. ಮಂಗಳೂರು ವಿವಿಗೆ ಅಲ್ಲವಾದರೂ ಶಿವಮೊಗ್ಗ ವಿಶ್ವವಿದ್ಯಾಲಯಕ್ಕಾದರೂ ಅವರನ್ನು ಕುಲಪತಿ ಮಾಡಲು ಪ್ರಯತ್ನಿಸಲಾಗಿತ್ತು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಲಪತಿಯಾಗುವ ಆಸೆಯನ್ನು ಅವರಲ್ಲಿ ತುಂಬುತ್ತಿರುವ ಕೆಲವರು, ತಪ್ಪು ದಾರಿಗೆ ಎಳೆಯುತ್ತಾರೆ ಅನಿಸುತ್ತಿತ್ತು. ಇಂದಿನ ಸ್ಥಿತಿಯಲ್ಲಿ ಕುಲಪತಿಯಾಗಿ ಏನು ತಾನೇ ಮಾಡಲು ಸಾಧ್ಯ? ಅವರು ವಿಸಿಯಾಗಿದ್ದರೆ ಈ ಪುಸ್ತಕಗಳನ್ನು ಬರೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

ಅಸ್ಸಾದಿಯವರು ಬೀದಿಯಲ್ಲಿಯೂ ತರಗತಿಯಲ್ಲಿಯೂ ನಿಂತು ಮಾತನಾಡುತ್ತಿದ್ದರು. ನಮ್ಮಲ್ಲಿ ಬಹಳಷ್ಟು ಬುದ್ಧಿಜೀವಿಗಳಿದ್ದಾರೆ. ಆದರೆ ಸತ್ಯ ಹೇಳುವ ಧೈರ್ಯ ಅನೇಕರಿಗೆ ಇಲ್ಲ. ಅಸ್ಸಾದಿಯಂಥವರು ಮಾತ್ರ ಸಮಾಜವನ್ನು ಮುನ್ನಡೆಸಬಲ್ಲರು ಎಂದರು.

ಬಹುತೇಕ ಯುನಿವರ್ಸಿಟಿ ಪ್ರೊಫೆಸರ್‌ಗಳು ತರಗತಿಗಳಿಗೆ ಮಾತ್ರ ಸೀಮಿತ. ಪಾಠ ಮಾಡುತ್ತಾರೋ ಎಂಬುದೂ ಅನುಮಾನ. ಆದರೆ ಅಸ್ಸಾದಿಯವರಿಗೆ ಚಡಪಡಿಕೆ ಇತ್ತು. ಅವರು ಬೀದಿಯಲ್ಲೂ ಕಾಣಿಸಿಕೊಳ್ಳುತ್ತಿದ್ದರು. ಅಂತಹ ಧೈರ್ಯ ಮತ್ತು ಮಾನಸಿಕವಾದ ಶಕ್ತಿ ಅವರಿಗೆ ಇತ್ತು. ಅಸ್ಸಾದಿಯವರು ಮುಸ್ಲಿಮರಲ್ಲಿನ ಜಾತಿ ವ್ಯವಸ್ಥೆಯ ಕುರಿತು ಪುಸ್ತಕ ಬರೆದರು. ಅವರು ಬೀಸು ಹೇಳಿಕೆಗಳನ್ನು ಕೊಡುತ್ತಿರಲಿಲ್ಲ. ವಿದ್ವಾಂಸತನದಿಂದ ಮಾತಾಡುತ್ತಿದ್ದರು ಎಂದು ಸ್ಮರಿಸಿದರು.

Assadi 2

ಲೇಖಕಿ ಪ್ರೊ. ಶಕೀರಾ ಖಾನಮ್ ಮಾತನಾಡಿ, “ಷೇಕ್ ಅಲಿ, ಮುಜಾಫರ್ ಅಸ್ಸಾದಿ ಅಂಥವರು ಸಮುದಾಯದ ಮುಕುಟ ಮಣಿಗಳು. ಅಸ್ಸಾದಿಯವರು ಅಜಾತಶತ್ರುವಾಗಿದ್ದರು. ಅವರು ಕೋಪಗೊಂಡಾಗ ನೊಂದುಕೊಳ್ಳುತ್ತಿದ್ದರು. ಆದರೆ ಅವರು ನೊಂದುಕೊಂಡೇ ಹೊರಟು ಹೋದರು. ಅವರನ್ನು ಕುಲಪತಿ ಮಾಡದೆ ಇದ್ದದ್ದು ಇಡೀ ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: ಆಶಾ ಕಾರ್ಯಕರ್ತೆಯರಿಗೆ ಗ್ಯಾರಂಟಿ ನೀಡಿದ ಸಿಎಂ; ಮುಷ್ಕರ ಹಿಂಪಡೆದ ಹೋರಾಟಗಾರರು!

ಕಲ್ಬುರ್ಗಿ ಕೇಂದ್ರಿಯ ವಿವಿಯ ಪ್ರಾಧ್ಯಾಪಕ ಕಿರಣ್ ಎಂ.ಗಾಜನೂರು ಮಾತನಾಡಿ, “ನಾನು ಅವರಿಗೆ ವಿದ್ಯಾರ್ಥಿ ಸ್ನೇಹಿತನಾಗಿದ್ದೆ. ಅಸ್ಸಾದಿಯವರು ವಿದ್ಯಾರ್ಥಿಗಳನ್ನು ಸ್ನೇಹಿತರಂತೆ ನೋಡುತ್ತಿದ್ದರು. ಈ ದೇಶದಲ್ಲಿ ಇಬ್ಬರು ಮೇಷ್ಟ್ರುಗಳು- ಮುಸ್ಲಿಮರ ಬಗ್ಗೆ ಮಹತ್ವದ ಚಿಂತನೆಗಳನ್ನು ನಡೆಸಿದ್ದಾರೆ. ಒಬ್ಬರು- ಜೋಯಾ ಹಸನ್,  ಇಬ್ಬೊಬ್ಬರು ಅಸ್ಸಾದಿ. ಅಸ್ಸಾದಿಯವರು ಮಾಡಿರುವ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ” ಎಂದು ಆಶಿಸಿದರು.

ಪತ್ರಕರ್ತ ವಿಖಾರ್ ಅಹಮ್ಮದ್ ಅವರು ಅಸ್ಸಾದಿಯವರ ಚಿಂತನೆಗಳ ಕುರಿತು ವಿಸ್ತೃತವಾಗಿ ಮಾತನಾಡಿದರು. ನ್ಯೂಸ್ 18 ಸಂಪಾದಕ ಹರಿಪ್ರಸಾದ್, ಬೆಂಗಳೂರು ವಿವಿಯ ಪ್ರೊ.ಎಸ್.ವೈ.ಸುರೇಂದ್ರಕುಮಾರ್, ಚಿಂತಕ ಶಿವಸುಂದರ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...