ಚಾರಣ ದುರಂತ | 9 ಮೃತದೇಹ ಬೆಂಗಳೂರಿಗೆ ರವಾನಿಸಲು ಯೋಜನೆ: ಕೃಷ್ಣಬೈರೇಗೌಡ

Date:

ಉತ್ತರಾಖಂಡದಲ್ಲಿ ಮೃತಪಟ್ಟಿರುವ 9 ಚಾರಣಿಗರ ದೇಹಗಳನ್ನು ಎಂಬಾಮಿಂಗ್‌ಗಾಗಿ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ನಾಳೆ ಬೆಳಿಗ್ಗೆ ದೆಹಲಿ-ಬೆಂಗಳೂರು ವಿಮಾನಗಳಲ್ಲಿ ಮೃತದೇಹಗಳನ್ನು ರವಾನಿಸಲು ಸ್ಥಳವನ್ನು ಕಾಯ್ದಿರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, “ಎಂಬಾಮಿಂಗ್ ನಂತರ ಮೃತದೇಹಗಳನ್ನು ಆಂಬುಲೆನ್ಸ್‌ಗಳ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಗುತ್ತದೆ. ಗುರುವಾರ ಸಂಜೆ 5.50ರ ವಿಮಾನದಲ್ಲಿ ಬದುಕುಳಿದ ಎಲ್ಲ 13 ಜನ ಚಾರಣಿಗರು ಬೆಂಗಳೂರಿಗೆ ಹಿಂತಿರುಗಲು ಟಿಕೆಟ್ ಕಾಯ್ದಿರಿಸಲಾಗಿದೆ” ಎಂದಿದ್ದಾರೆ.

ಮಧ್ಯಾಹ್ನ 2.30ಕ್ಕೆ ಮೃತದೇಹಗಳ ಹೊತ್ತ ಹೆಲಿಕಾಫ್ಟರ್ ಡೆಹ್ರಾಡೂನ್ ತಲುಪಿದೆ. ಕಾನೂನಾತ್ಮಕ ಪ್ರಕ್ರಿಯೆಗಳ ಕಾರಣದಿಂದಾಗಿ ಏರ್ ಲಿಫ್ಟ್ ನಲ್ಲಿ ವಿಳಂಬವಾಗಲಿದೆ. ಅಲ್ಲದೆ ಚಾರ್ಟರ್ಡ್ ಫ್ಲೈಟ್ ಲಭ್ಯವಾಗದ ಕಾರಣ ಇಂದು ಡೆಹ್ರಾಡೂನ್ ನಿಂದ ಬೆಂಗಳೂರಿಗೆ ಏರ್ ಕ್ರಾಫ್ಟ್ ಮೂಲಕ ಮೃತದೇಹಗಳ ಸ್ಥಳಾಂತರ ಇಲ್ಲ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೂಗಲ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಶಿರಸಿ ಯುವತಿ ಸಾವು

ಉತ್ತರಾಖಂಡದ ಸಹಸ್ತ್ರತಲ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟ ಕರ್ನಾಟಕದ ಚಾರಣಿಗರ ಪೈಕಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಯುವತಿ ಪದ್ಮಿನಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪದ್ಮಿನಿ ಸಾವಿನ ಬಗ್ಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಾಹಿತಿ ಸಿಕ್ಕಿದೆ.

ಶಿರಸಿ ತಾಲೂಕಿನ ಜಾಗನಹಳ್ಳಿ ನಿವಾಸಿ ಪದ್ಮಿನಿ ಹೆಗಡೆ(35) ಮೃತ ದುರ್ದೈವಿ. ಬೆಂಗಳೂರಿನಲ್ಲಿ ಗೂಗಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪದ್ಮಿನಿ ಮೇ 9ರಿಂದ ಜೂನ್ 7ರವರೆಗೆ ಟ್ರೆಕ್ಕಿಂಗ್‌ಗೆ ಅನುಮತಿ ಪಡೆದಿದ್ದರು. ಜೂ.4ರಂದು ಮುಂಬೈನಲ್ಲಿರುವ ತಾಯಿ ಜೊತೆ ಮಾತನಾಡಿದ್ದರು. ಕುಟುಂಬಕ್ಕೆ ಯುವತಿ ನಾಪತ್ತೆಯ ಮಾಹಿತಿಯಷ್ಟೇ ನೀಡಲಾಗಿದ್ದು ಇನ್ನೂ ಸಾವಿನ ವಿಚಾರ ತಿಳಿಸಿಲ್ಲ.

ಮೃತಪಟ್ಟವರ ಹೆಸರು

1. ಸಿಂಧು ವಕೆಲಂ
2. ಆಶಾ ಸುಧಾಕರ್
3. ಸುಜಾತಾ ಮುಂಗುರವಾಡಿ
4. ವಿನಾಯಕ್‌ ಮುಂಗುರವಾಡಿ
5. ಚಿತ್ರಾ ಪ್ರಣೀತ್
6. ಪದ್ಮನಾಭ ಕೆ.ಪಿ
7. ವೆಂಕಟೇಶ್ ಪ್ರಸಾದ್ ಕೆ
8. ಅನಿತಾ ರಂಗಪ್ಪ
9. ಪದ್ಮಿನಿ ಹೆಗ್ಡೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...