ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ‘ಏಕರೂಪದ ದರ’ ನಿಗದಿಪಡಿಸಿದ ಸಾರಿಗೆ ಇಲಾಖೆ

Date:

ಪ್ರಯಾಣದರ ಹೆಚ್ಚಿಸಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿರುವ ಹಿನ್ನೆಲೆ, ಬೆಂಗಳೂರು ಸೇರಿ ರಾಜ್ಯಾದ್ಯಂತ ಇರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನಾ ಮಾದರಿಯ ಟ್ಯಾಕ್ಸಿ ಪ್ರಯಾಣ ದರ ಮತ್ತು ಸಾಗಾಣಿಕ ದರ ಏಕರೂಪಗೊಳಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆ ಮೇರೆಗೆ ಏಕರೂಪ ಪ್ರಯಾಣ ದರ ನಿಗದಿಪಡಿಸಿ ತಕ್ಷಣದಲ್ಲೇ ಅನ್ವಯವಾಗುವಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ಅವರು ಆದೇಶ ಹೊರಡಿಸಿದ್ದಾರೆ.

2021ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರ ವಾಹನಗಳ ಮೌಲ್ಯ ಆಧರಿಸಿ ದರ ನಿಗದಿ ಮಾಡಿತ್ತು. ಸಿಟಿ ಟ್ಯಾಕ್ಸಿ ಸೇವೆ ಎ, ಬಿ, ಸಿ, ಡಿ ಎಂದು ವರ್ಗೀಕರಿಸಿ 2021ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ‌ ನಿಗದಿ ಮಾಡಿತ್ತು. ಆದರೆ ಪ್ರಾಧಿಕಾರ ನಿಗದಿಪಡಿಸಿರುವ ದರಕ್ಕಿಂತ 3-4 ಪಟ್ಟು ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಸಿಟಿ ಟ್ಯಾಕ್ಸಿ ಸೇವೆಯಲ್ಲಿ ನಡೆಯುತ್ತಿರುವ ಹಗಲು ದರೋಡೆ ಸಂಬಂಧ ಜನರಿಂದ ವ್ಯಾಪಕ ದೂರುಗಳು ಬಂದಿವೆ. ಹೀಗಾಗಿ, ಅಗ್ರಿಗೇಟರ್‌ ಕಂಪನಿ ಹಾಗೂ ಇತರೆ ಟ್ಯಾಕ್ಸಿ ಚಾಲಕರ ಆಟಾಟೋಪಕ್ಕೆ ಬ್ರೇಕ್‌ ಹಾಕಲು ಏಕರೂಪದ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಏಕರೂಪ ದರ ನಿಗದಿ ಪಡಿಸಿದ ಸರ್ಕಾರದ ನಿರ್ಧಾರವನ್ನು ಚಾಲಕರು ಸ್ವಾಗತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಎರಡು ಪ್ರತ್ಯೇಕ ಅಪಘಾತ: ಐದು ಮಂದಿ ಸಾವು

  • 10 ಲಕ್ಷಕ್ಕಿಂತ ಕಡಿಮೆ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ₹100 ನಿಗದಿ ಮಾಡಲಾಗಿದೆ. 4 ಕಿಮೀ ನಂತರ ಪ್ರತಿ ಕಿಮೀಗೆ ಹೆಚ್ಚುವರಿ ₹24 ನಿಗದಿ ಮಾಡಲಾಗಿದೆ.
  •  ₹10 ಲಕ್ಷದಿಂದ ₹15 ಲಕ್ಷ ವರೆಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ₹115 ನಿಗದಿ, 4 ಕಿಮೀ ನಂತರ ಪ್ರತಿ 1 ಕಿಮೀಗೆ ಹೆಚ್ಚುವರಿ ₹28 ನಿಗದಿ ಮಾಡಲಾಗಿದೆ.
  • ₹15 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ₹130 ನಿಗದಿಯಾಗಿದ್ದು, 4 ಕಿಮೀ ನಂತರ ಪ್ರತಿ ಕಿಲೋ ಮೀಟರ್‌ಗೆ ಹೆಚ್ಚುವರಿ ₹32 ನಿಗದಿ ಮಾಡಲಾಗಿದೆ.
  • ಬೆಳಗಿನ ಜಾವ 6 ಗಂಟೆ ವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ 10% ಹೆಚ್ಚುವರಿ ದರ ವಿಧಿಸಲು ಅವಕಾಶ ನೀಡಲಾಗಿದೆ.
  • ಲಗೇಜ್ ದರಗಳು ಮೊದಲಿನ 120 ಕೆ.ಜಿ. ವರೆಗೆ ಉಚಿತ (ಸೂಟ್ ಕೇಸ್, ಬೆನ್ನಿಂಗ್ ಇತ್ಯಾದಿ ವೈಯಕ್ತಿಕ ಲಗೇಜುಗಳು) ನಂತರದ ಪ್ರತಿ 30 ಕಿ.ಗ್ರಾಂಗೆ ಅಥವಾ ಅದರ ಭಾಗಕ್ಕೆ ₹7 ನಿಗದಿ ಪಡಿಸಲಾಗಿದೆ.
  • ಕಾಯುವಿಕೆಯ ದರಗಳು ಮೊದಲ 5 ನಿಮಿಷಗಳವರೆಗೆ ಉಚಿತ. ನಂತರದ ಪ್ರತಿ 1 ನಿಮಿಷಕ್ಕೆ ₹1 ಇದೆ.
  • ರಾತ್ರಿ 12 ಗಂಟೆಯಿಂದ ಬೆಳಗಿನ 6 ಗಂಟೆಯವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ ಪ್ರಯಾಣ ದರದ ಮೇಲೆ ಶೇ.10 ರಷ್ಟು ಹೆಚ್ಚುವರಿ ದರ ಇದೆ.
  • ಸಿಟಿ ಟ್ಯಾಕ್ಸಿಯವರು / ಪ್ರವರ್ತಕರು, ಅಗ್ರಿಗೇಟರ್‌ಗಳು ಅನ್ವಯಿಸುವಂತಹ ಜಿ.ಎಸ್.ಟಿ. ಮತ್ತು ಟೋಲ್ ಶುಲ್ಕವನ್ನು ಪ್ರಯಾಣಿಕರಿಂದ ವಸೂಲಿ ಮಾಡಬಹುದಾಗಿದೆ.
  • ಸಮಯದ ಆಧಾರದಲ್ಲಿ ದರಗಳನ್ನು ವಸೂಲಿ ಮಾಡಬಾರದು. ಸರ್ಕಾರದಿಂದ ಕಿ.ಮೀ. ಆಧಾರದಲ್ಲಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರಗಳನ್ನು ಮಾತ್ರ ಪ್ರಯಾಣಿಕರಿಂದ ವಸೂಲಿ ಮಾಡುವುದು.
  • ಸರ್ಕಾರದಿಂದ ಕಿ.ಮೀ. ಆಧಾರದಲ್ಲಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರಗಳನ್ನು ಹೊರತುಪಡಿಸಿ ಅನಧಿಕೃತವಾಗಿ ಯಾವುದೇ ದರಗಳನ್ನು ಪ್ರಯಾಣಿಕರಿಂದ ಪಡೆಯತಕ್ಕದ್ದಲ್ಲ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...