ಏಪ್ರಿಲ್‌ 1ರಿಂದ ಹೋಟೇಲ್‌ಗಳಿಗೆ ರಿಯಾಯತಿ ದರದಲ್ಲಿ ಸಂಸ್ಕರಿಸಿದ ನೀರು ಸರಬರಾಜು: ಜಲಮಂಡಳಿ ಅಧ್ಯಕ್ಷ

Date:

  • ಇನ್ನಿತರೆ ಉದ್ದೇಶಗಳಿಗೆ ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಳ ಮಾಡಿ
  • ವಾಣಿಜ್ಯ ಉದ್ದೇಶದ ಹೋಳಿ ಹಬ್ಬಕ್ಕೆ ಕಾವೇರಿ/ಬೋರ್‌ವೆಲ್‌ ನೀರು ಬಳಸಬೇಡಿ

ಹೆಚ್ಚು ನೀರು ಬಳಕೆ ಮಾಡುವ ಹಾಗೂ ಜನಸಂದಣಿ ಹೆಚ್ಚಾಗಿರುವ ಹೋಟೇಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ನೀರಿನ ಉಳಿತಾಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ನಲ್ಲಿಗಳಿಗೆ ಏರಿಯೇಟರ್‌ ಅಳವಡಿಕೆ ಹಾಗೂ ಇನ್ನಿತರೆ ಉದ್ದೇಶಗಳಿಗಾಗಿ ಸಂಸ್ಕರಿಸಿದ ನೀರನ್ನ ಬಳಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ ನೀಡಿದರು.

ಮಾರ್ಚ್‌ 21ರಂದು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಹೊಟೇಲ್‌ ಮಾಲೀಕರು ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. “ನಗರಕ್ಕೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ನೀರಿನ ಲಭ್ಯತೆಯಿದೆ. ನೀರಿನ ಉಳಿತಾಯದಿಂದ ನಿಮ್ಮ ನೀರಿನ ಬಿಲ್‌ ಕೂಡಾ ಉಳಿತಾಯವಾಗುತ್ತದೆ. ನೀರು ಉಚಿತ ಎನ್ನುವ ಭಾವನೆಯಿಂದ ಜನರು ಅಮೂಲ್ಯ ಸಂಪತ್ತನ್ನ ಅನಗತ್ಯವಾಗಿ ಪೋಲು ಮಾಡುತ್ತಿದ್ದಾರೆ. ಇದನ್ನ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವಿದೆ” ಎಂದು ಹೇಳಿದರು.

“ಕುಡಿಯುವ ಉದ್ದೇಶಕ್ಕೆ ಹೊರತುಪಡಿಸಿ ಸಂಸ್ಕರಿಸಿದ ನೀರನ್ನ ಬಹಳಷ್ಟು ಇತರ ಉದ್ದೇಶಗಳಿಗಾಗಿ ಬಳಸಿಕೊಳ್ಳಬಹುದಾಗಿದೆ. ಇದಕ್ಕಾಗಿ ಬೆಂಗಳೂರು ಜಲಮಂಡಳಿ ಹೊಟೇಲ್‌ ಮತ್ತು ರೆಸ್ಟೋರೆಂಟ್‌ಗಳ ಕೈಜೋಡಿಸಲು ಸಿದ್ದವಿದೆ. ಅಗತ್ಯವಿರುವ ಹೋಟೇಲ್‌ಗಳಿಗೆ ರಿಯಾಯಿತಿ ದರದಲ್ಲಿ ಸಂಸ್ಕರಿಸಿದ ನೀರನ್ನ ನಿಮ್ಮ ಬಾಗಿಲಿಗೆ ಕೊಡುವ ವ್ಯವಸ್ಥೆ ಮಾಡುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜುಲೈ 1ರ ಒಳಗೆ ಬೆಂಗಳೂರಿನ ನೀರಿನ ಕೊರತೆ ನೀಗಲಿದೆ: ಜಲಮಂಡಳಿ ಅಧ್ಯಕ್ಷ

ನೀರು ಉಳಿಸುವ ಹೋಟೇಲ್‌ ಗಳಿಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌

“ನೀರು ಉಳಿತಾಯ, ಮರುಬಳಕೆ ಹಾಗೂ ಅಂತರ್ಜಲ ಅಭಿವೃದ್ದಿಗೆ ಕೊಡುಗೆ ನೀಡುವಂತಹ ಹೋಟೇಲ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌ ನೀಡಲಾಗುವುದು. ಈಗಾಗಲೇ ಮಂಡಳಿಯ ಬಳಿ ನೀರು ಬಳಕೆಯ ಬಗ್ಗೆ ಸಾಕಷ್ಟು ಮಾಹಿತಿಯಿದೆ. ಮುಂದಿನ ತಿಂಗಳುಗಳಲ್ಲಿ ಉಳಿತಾಯದ ಮಾಹಿತಿ ಪಡೆದುಕೊಂಡು ಸ್ಟಾರ್‌ ರೇಟಿಂಗ್‌ ನೀಡಲಾಗುವುದು” ಎಂದರು.

ಹೋಳಿ ಹಬ್ಬದ ಆಚರಣೆಗೆ ಸ್ವಾಗತ – ರೈನ್‌ ಡ್ಯಾನ್ಸ್‌ & ಪೂಲ್‌ ಡ್ಯಾನ್ಸ್‌ ನಿಷೇಧ

“ಈಗಾಗಲೇ ಸೂಚನೆ ನೀಡಿರುವಂತೆ ರೈನ್‌ ಡ್ಯಾನ್ಸ್‌, ಪೂಲ್‌ ಡ್ಯಾನ್ಸ್‌ ನಂತರ ವಾಣಿಜ್ಯ ಉದ್ದೇಶದ ಹೋಳಿ ಆಚರಣೆಗೆ ಕಾವೇರಿ ನೀರು ಹಾಗೂ ಕೊಳವೆ ಬಾವಿಗಳ ನೀರು ಬಳಸುವುದನ್ನ ನಿಷೇಧಿಸಲಾಗಿದೆ” ಎಂದು ಹೇಳಿದರು.

ಸಭೆಯಲ್ಲಿ ಸೌತ್‌ ಇಂಡಿಯಾ ಹೋಟೇಲ್‌ ಮತ್ತು ರೆಸ್ಟೊರೆಂಟ್‌ ಅಸೋಷಿಯೇಷನ್‌ ಅಧ್ಯಕ್ಷ ಚಾಮರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...