ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

Date:

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ ನಾನಾ ರೀತಿಯಲ್ಲಿ ಮುಂದುವರೆದಿದೆ. ಏಟು-ತಿರುಗೇಟುಗಳ ಮೂಲಕ ಸುದ್ದಿಯಲ್ಲಿರುವ ದರ್ಶನ್, ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ‘ಗೌಡತಿ ಸೇನೆ’ ಎಂಬ ಸಂಘಟನೆಯ ಮುಖಂಡೆಯರು ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ಗುರುವಾರ ದೂರು ನೀಡಿದ್ದರು. ಇದೀಗ, ಶುಕ್ರವಾರ ಮತ್ತೆರಡು ದೂರುಗಳು ದಾಖಲಾಗಿವೆ.

‘ಇವತ್ತು ಒಬ್ಬಳು, ನಾಳೆ ಮತ್ತೊಬ್ಬಳು’ ಎಂಬ ಹೇಳಿಕೆ ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ಸಿಲುಕಿರುವ ನಟ ದರ್ಶನ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ದೂರು ದಾಖಲಾಗಿದೆ. ಮಾತ್ರವಲ್ಲದೆ, ಆರ್.ಆರ್ ನಗರ ಠಾಣೆಯಲ್ಲಿ ಗಣೇಶ್ ಗೌಡ ಎಂಬವರು ಮತ್ತು ಚಂದ್ರಲೇಔಟ್ ಠಾಣೆಯಲ್ಲಿ ಜಗದೀಶ್ ಎಂಬವವರು ದರ್ಶನ್ ವಿರುದ್ಧ ದೂರು ದಾಖಲಿಸಿದ್ದಾರೆ.

“ಪ್ರಭಾವಿ ಸಮುದಾಯದ ನಾಯಕರು ಮತ್ತು ಹೆಣ್ಣು ಮಕ್ಕಳ ಬಗ್ಗೆ ನಟ ದರ್ಶನ್ ತುಚ್ಛವಾಗಿ ಮಾತನಾಡಿದ್ದಾರೆ. ಹೆಣ್ಣು ಮಕ್ಕಳನ್ನು ಆಟಿಕೆಯ ವಸ್ತುಗಳ ರೀತಿ ಬಳಸಿ ಬಿಸಾಡುವಂತಹ ಅರ್ಥದಲ್ಲಿ ದರ್ಶನ್ ಮಾತನಾಡಿದ್ದಾರೆ. ಅವರ ಮಾತು ಮಹಿಳಾ ಕುಲಕ್ಕೆ ಅಪಮಾನ ಮಾಡಿದೆ. ಅಲ್ಲದೆ, ಒಕ್ಕಲಿಗ ನಾಯಕರ ವಿರುದ್ಧ ಅಪಹಾಸ್ಯ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ದೂರು ಹಿಂಪಡೆದು ಕ್ಷಮೆ ಕೇಳಿದ ದೂರುದಾರ

ನಿರ್ಮಾಪಕ ಉಮಾಪತಿ ಅವರನ್ನು ದರ್ಶನ್ ನಿಂದಿಸಿದ್ದಾರೆ ಎಂದು ಆರೋಪಿಸಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎಂಬವರು ಇದೀಗ ಉಲ್ಟಾ ಹೊಡೆದಿದ್ದಾರೆ. ತಾವು ನೀಡಿರುವ ದೂರನ್ನು ಹಿಂಪಡೆಯುವುದಾಗಿ ಹೇಳಿರುವ ಅವರು ದರ್ಶನ್ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧುರಂಧರ್ 2 ನೋಡಿ, ಹಣ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ; ನಟಿ ರಮ್ಯಾ ಖಡಕ್ ಹೇಳಿಕೆ

ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಹಾಗೂ ಆದಿತ್ಯ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

‘ಬೋಳು ತಲೆಯೇ ನನ್ನ ಬಲ, ಎಷ್ಟೇ ಹಣ ಕೊಟ್ಟರೂ ಕೂದಲು ನಾಟಿ ಬೇಡ’: ನಟ ಅನುಪಮ್ ಖೇರ್

'ನಾನು ಪ್ರತಿಯೊಂದು ಕೂದಲು ನಾಟಿ ಮಾಡುವ ಕಂಪನಿ ಮತ್ತು ವೈದ್ಯರ ಪಾಲಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...