ಕತ್ತೆಗಳ ಮೂಲಕ ಕಾರನ್ನು ಶೋರೂಮ್‌ಗೆ ಎಳೆದು ತಂದ ಮಾಲಕ! ಕಾರಣವೇನು ಗೊತ್ತಾ?

Date:

ನೂತನವಾಗಿ ಖರೀದಿಸಿದ ಕಾರು ಪದೇ ಪದೇ  ʻಬ್ರೇಕ್‌ ಡೌನ್‌ʼ ಆದ ಕಾರಣ, ತಾಳ್ಮೆ ಕಳೆದುಕೊಂಡ ಗ್ರಾಹಕರೊಬ್ಬರು ತನ್ನ ಕಾರನ್ನು ಎರಡು ಕತ್ತೆಗಳ ಸಹಾಯದಿಂದ ಶೋರೋಮ್‌ಗೆ ಎಳೆತಂದ ಘಟನೆ ರಾಜಸ್ಥಾನದ ಉದಯ್‌ಪುರ್‌ನಲ್ಲಿ ನಡೆದಿದೆ.

ಉದಯಪುರದ ಸುಂದರವಾಸ್ ಪ್ರದೇಶದ ನಿವಾಸಿ ಶಂಕರಲಾಲ್ ಎಂಬುವವರು ಮಾದ್ರಿ ಕೈಗಾರಿಕಾ ಪ್ರದೇಶದಲ್ಲಿರವ ಹ್ಯೂಂಡೈ ಶೋರೂಮ್‌ನಿಂದ 17.50 ಲಕ್ಷ ರೂಪಾಯಿ ಮೌಲ್ಯದ ಕ್ರೆಟಾ ಮಾಡೆಲ್‌ ಹೊಸ ಕಾರನ್ನು ಖರೀದಿಸಿದ್ದರು.

ಆದರೆ ಆರಂಭದಲ್ಲೇ ಕಾರಿನಲ್ಲಿ ತಾಂತ್ರಿಕ ದೋಷಗಳು ಕಾಣಿಸಿಕೊಳ್ಳಲು ಆರಂಭವಾಗಿತ್ತು.  ಈ ಕುರಿತು ಕಾರಿನ ಮಾಲೀಕರು ಅಧಿಕೃತ ಸೇವಾ ಕೇಂದ್ರದ ಪ್ರತಿನಿಧಿಗಳ ಗಮನಕ್ಕೆ ತಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಸ್ಯೆ ಸರಿಪಡಿಸಲು ವಿತರಕರನ್ನು ಹಲವು ಬಾರಿ ಸಂಪರ್ಕಿಸಲಾಯಿತಾದರೂ ಸಹ, ತೃಪ್ತಿಕರವಾದ ಪರಿಹಾರ ದೊರೆಯಲಿಲ್ಲ. ಎರಡು ದಿನಗಳ ಹಿಂದೆ ಕೌಟುಂಬಿಕ ಕಾರ್ಯಕ್ರಮದ ವೇಳೆ ಕಾರನ್ನು ಸ್ಟಾರ್ಟ್ ಮಾಡಲು ಹಲವು ಬಾರಿ ತಳ್ಳಬೇಕಾಯಿತು ಎಂದು ಶಂಕರಲಾಲ್ ಹೇಳಿದ್ದಾರೆ.

ʻಬ್ಯಾಟರಿ ಕಡಿಮೆಯಾದ ಕಾರಣ ಸಮಸ್ಯೆಯಾಗಿದೆʼ ಎಂದು ಉತ್ತರಿಸಿದ್ದ ಶೋರೋಮ್‌ ಪ್ರತಿನಿಧಿ, ಬ್ಯಾಟರಿ ಚಾರ್ಜ್ ಆಗಲು ಸ್ವಲ್ಪ ದೂರದವರೆಗೆ ಕಾರನ್ನು ಓಡಿಸಲು ಸಲಹೆ ನೀಡಿದ್ದರು. ಆದರೆ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಸಮಸ್ಯೆ ಮುಂದುವರೆದಿತ್ತು.

ಇದರಿಂದ ಹತಾಶೆಗೆ ಒಳಗಾದ ಶಂಕರಲಾಲ್, ಬ್ಯಾಂಡ್ ತಂಡದವರನ್ನು ಕರೆಸಿ ತಮ್ಮ ವಾಹನವನ್ನು ಎರಡು ಕತ್ತೆಗಳ ಸಹಾಯದಿಂದ ಡೀಲರ್‌ ಬಳಿಗೆ ಎಳೆದೊಯ್ದಿದ್ದಾರೆ. ಸದ್ಯ ಕಾರು ಶೋರೂಂನಲ್ಲಿದ್ದು, ಸಮಸ್ಯೆ ಇರುವ ಕಾರನ್ನು ಬದಲಾಯಿಸಿ ಹೊಸ ಕಾರನ್ನು ನೀಡುವಂತೆ ಮಾಲೀಕ ಶಂಕರಲಾಲ್ ಒತ್ತಾಯಿಸಿದ್ದಾರೆ.

ಕತ್ತೆಗಳು ಕಾರನ್ನು  ಎಳೆದೊಯ್ಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...