ಉಗಾಂಡ ಮಗು ದತ್ತು | ಭಾರತೀಯ ದಂಪತಿಗೆ ಮಾನ್ಯತೆ ನೀಡಲು ಹೈಕೋರ್ಟ್‌ ಸೂಚನೆ

Date:

‘ಹೇಗ್‌ ದತ್ತು ಒಪ್ಪಂದ’ಕ್ಕೆ ಉಗಾಂಡ ದೇಶ ಸಹಿ ಹಾಕದ ಹೊರತಾಗಿಯೂ ಉಗಾಂಡದ ಮಗುವನ್ನು ಭಾರತೀಯ ದಂಪತಿ ದತ್ತು ಪಡೆದಿರುವುದನ್ನು ಮಾನ್ಯಗೊಳಿಸಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ.

ದತ್ತು ಸ್ವೀಕಾರಕ್ಕೆ ಎನ್‌ಒಸಿ ನೀಡಲು ಕೀನ್ಯಾ ಮೂಲದ ಭಾರತೀಯ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸುವಂತೆ ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರಕ್ಕೆ (ಸಿಎಆರ್‌ಎ) ಕರ್ನಾಟಕ ಹೈಕೋರ್ಟ್  ನಿರ್ದೇಶನ ನೀಡಿದೆ.

ದಂಪತಿಗಳು ಪ್ರಸ್ತುತ ನೈರೋಬಿಯಲ್ಲಿ ವಾಸಿಸುತ್ತಿದ್ದು, ಇಬ್ಬರು ಒಂದೊಂದು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೂಡ ಅವರು ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದು, ಭಾರತೀಯ ಪೌರತ್ವವನ್ನು ತ್ಯಜಿಸಿಲ್ಲ. ಅವರು 2011ರಿಂದ 2018ರವರೆಗೆ ಉಗಾಂಡಾದಲ್ಲಿ ವಾಸಿಸುತ್ತಿದ್ದರು. 2019ರಲ್ಲಿ ಕೀನ್ಯಾಗೆ ತೆರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014ರ ಆಗಸ್ಟ್ 12ರಂದು ಅವರು ಒಂದು ಮಗುವನ್ನು ದತ್ತು ಪಡೆದಿದ್ದಾರೆ. ಉಗಾಂಡಾದ ರಾಜಧಾನಿ ಕಂಪಾಲಾದಲ್ಲಿರುವ ಕುಟುಂಬ ಮತ್ತು ಮಕ್ಕಳ ನ್ಯಾಯಾಲಯದಲ್ಲಿ ಅವರು ಉಗಾಂಡಾ ಕಾನೂನುಗಳ ಅಡಿಯಲ್ಲಿ ಪೋಷಕತ್ವ ಆದೇಶ ನೀಡುವಂತೆ ದಂಪತಿ ಅರ್ಜಿ ಸಲ್ಲಿಸಿದ್ದರು.

2015ರ ಜುಲೈ 20ರಂದು ಉಗಾಂಡಾದ ಹೈಕೋರ್ಟ್ ಅವರಿಗೆ ಮಗುವಿನ ಪಾಲಕತ್ವವನ್ನು ನೀಡಿದೆ. ಅವರನ್ನು ದತ್ತು ಪಡೆದ ಪೋಷಕರೆಂದು ಘೋಷಿಸಿ, ಅವರಿಗೆ ಪೋಷಕತ್ವದ ಎಲ್ಲ ಹಕ್ಕುಗಳನ್ನು ನೀಡಿದೆ.

ದಂಪತಿ 2023ರ ಜೂನ್ 8ರಂದು ಭಾರತ ಸರ್ಕಾರದ ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರಕ್ಕೆ (ಸಿಎಆರ್‌ಎ)ಗೆ ಇಮೇಲ್ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರೂ ಭಾರತೀಯ ಪ್ರಜೆಗಳಾಗಿರುವುದರಿಂದ ದತ್ತು ಪಡೆದಿರುವುದಕ್ಕೆ ಕಾನೂನು ಮಾನ್ಯತೆ ಕೋರಿದ್ದಾರೆ. ಆದರೆ, ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆಸ್ತಿಯಲ್ಲಿ ಪಾಲು ಕೇಳಿದ ಮಗನ ಮೇಲೆ ಆ್ಯಸಿಡ್ ಎರಚಿದ ತಂದೆ

ದಂಪತಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, “ಉಗಾಂಡದ ಮಗುವನ್ನು ದತ್ತು ಪಡೆಯುವುದಕ್ಕೆ ದಂಪತಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಬೇಕು” ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಹೇಗ್‌ ದತ್ತು ಒಪ್ಪಂದ’ಕ್ಕೆ ಉಗಾಂಡ ಸಹಿ ಹಾಕದಿರುವುದು ಭಾರತೀಯ ದಂಪತಿಯ ಮಗುವಿನ ಹಕ್ಕು ಕಸಿಯಲು ಕಾರಣವಾಗಬಾರದು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ಹೇಳಿದೆ.

“ಹಿಂದೂ ದತ್ತು ಮತ್ತು ನಿರ್ವಹಣಾ ಕಾಯಿದೆ ಅಡಿ ದತ್ತು ಪ್ರಕ್ರಿಯೆ ನಡೆಯದೇ ಇದ್ದರೂ ಹಾಗೂ ಹೇಗ್‌ ಒಪ್ಪಂದಕ್ಕೆ ಸಹಿ ಹಾಕದೇ ಇದ್ದರೂ ದತ್ತು ತೆಗೆದುಕೊಳ್ಳಲಾಗಿದೆ. ಹೀಗಾಗಿ, ದತ್ತು ತೆಗೆದುಕೊಂಡಿರುವ ಭಾರತೀಯ ದಂಪತಿಯ ಮಗುವಿನ ಹಕ್ಕುಗಳನ್ನು ಅತಂತ್ರಗೊಳಿಸಲಾಗದು” ಎಂದು ನ್ಯಾಯಾಲಯ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...