ಬೆಂಗಳೂರು | ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಕೆ

Date:

ರಾಜ್ಯದಲ್ಲಿ ಕೊರೋನಾ ಬಳಿಕ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. ಅಲ್ಲದೇ, ಸಡನ್‌ ಆಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಕ್ಯಾನ್ಸರ್, ಬ್ರೈನ್ ಸ್ಟ್ರೋಕ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳು ರಾಜ್ಯದಲ್ಲಿ ಏರಿಕೆ ಕಾಣುತ್ತಿವೆ. ಖಾಯಿಲೆ ಕೊನೆಯ ಹಂತದಲ್ಲಿ ಕಂಡು ಬರುವುದು ಜನರ ಸಾವಿಗೆ ಕಾರಣವಾಗುತ್ತಿದೆ. ಹೀಗಾಗಿ, ಆರೋಗ್ಯ ಇಲಾಖೆ ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆಗಳ ಪತ್ತೆಗೆ ಎಐ (AI) ತಂತ್ರಜ್ಞಾನ ಬಳಕೆ ಮಾಡಲಿದೆ.

ತುರ್ತು ಖಾಯಿಲೆ ಪತ್ತೆ ಮಾಡಲು ಹಾಗೂ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲು ಎಐ ತಂತ್ರಜ್ಞಾನ ಅನುಕೂಲವಾಗಲಿದೆ. ಇದು ಲಂಗ್ಸ್, ಟಿಬಿ, ಕ್ಯಾನ್ಸರ್, ಶ್ವಾಸಕೋಶ ಸಂಬಂಧಿ, ಗ್ಯಾಸ್ಟ್ರಿಕ್, ಹೃದಯ ಸಂಬಂಧಿ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ಅದನ್ನು ಪತ್ತೆ ಮಾಡುತ್ತದೆ. ಇದರಿಂದ ವೈದ್ಯರಿಗೆ ಮುನ್ಸೂಚನೆ ಸಿಗಲಿದೆ.

ಪರೀಕ್ಷೆ ವೇಗ ಹೆಚ್ಚಿಸುವ ಉದ್ದೇಶದಿಂದ ಅಸ್ಟ್ರಾಜೆನೆಕಾ ಇಂಡಿಯಾ ಹಾಗೂ ರಾಜ್ಯ ಸರ್ಕಾರ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕ್ಯಾನ್ಸರ್​ಗೆ ತುತ್ತಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆ ಸೇರಿದಂತೆ 29 ಜಿಲ್ಲಾ ಆಸ್ಪತ್ರೆಗಳಲ್ಲಿ ಎಐ ಬಳಕೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಎಐ ಕೃತಕ ಬುದ್ಧಿಮತ್ತೆಯಿಂದ ಶ್ವಾಸಕೋಶ ಕ್ಯಾನ್ಸರ್ ತಪಾಸಣೆ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಿದ್ದು, ಆರಂಭಿಕ ಹಂತದಲ್ಲೇ ಶ್ವಾಸಕೋಶ ಕ್ಯಾನ್ಸರ್ ಪತ್ತೆಗೆ ಇದು ಅನುಕೂಲವಾಗಲಿದೆ. ಕ್ಯಾನ್ಸರ್‌ನ್ನು ಆರಂಭಿಕವಾಗಿ ಪತ್ತೆ ಹಚ್ಚಲಿದೆ.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಕೆ.ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ: ದೂರು ದಾಖಲು

ಕೆಲಸ ಆರಂಭಿಸಿದ ಎಐ

ರಾಜ್ಯದಲ್ಲಿ ಮೊದಲ ಬಾರಿಗೆ ಕೆಸಿ ಜನರಲ್ ಸರ್ಕಾರಿ ಆಸ್ಪತ್ರೆಯಲ್ಲಿ ಎಐ ಕೆಲಸ ಆರಂಭಿಸಿದೆ. 2,148 ರೋಗಿಗಳ ಸ್ಕ್ಯಾನಿಂಗ್ ಪೈಕಿ 909 ಅಸಹಜ ಲಕ್ಷಣ ಸಮಸ್ಯೆ ಹೊಂದಿರುವವರನ್ನು ಇದು ಗುರುತು ಮಾಡಿದೆ. 328 ರೋಗಿಗಳಲ್ಲಿ ಟಿಬಿ ಲಕ್ಷಣ ಚಿಕಿತ್ಸೆಯ ಅವಶ್ಯಕತೆಯನ್ನು ಗುರುತು ಮಾಡಿದೆ.

ಎಐ ಕೃತಕ ಬುದ್ಧಿಮತ್ತೆಯಿಂದ ಶ್ವಾಸಕೋಶ ಕ್ಯಾನ್ಸರ್ ತಪಾಸಣೆ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಿದ್ದು, ಆರಂಭಿಕ ಹಂತದಲ್ಲೇ ಶ್ವಾಸಕೋಶ ಕ್ಯಾನ್ಸರ್ ಪತ್ತೆಗೆ ಇದು ಅನುಕೂಲವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...