ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

Date:

ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ‘ ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರು ಭಾಜನರಾಗಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, “ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ’ಗೆ ಆಯ್ಕೆ ಮಾಡಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳ ಪ್ರಕಟಣೆ ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ ‘ವಡ್ಡರ್ಸೆ ರಘುರಾಮಶೆಟ್ಟಿ’ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ.ಉಮಾಪತಿ ಅವರ ಪರಿಚಯ

ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ.ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಮೂಲಕ ಪಡೆದಿದ್ದಾರೆ.

ಇಂಟರ್ನ್‌ಶಿಪ್‌ಗಾಗಿ ಕನ್ನಡಪ್ರಭಕ್ಕೆ ಹೋದವರಿಗೆ, ಅವರ ಪ್ರತಿಭೆ ಹಾಗೂ ಸಾಮರ್ಥ್ಯದ ಕಾರಣಕ್ಕೆ ಕೆಲಸವೇ ಸಿಕ್ಕಿತು. ‘ನ್ಯೂ ಇಂಡಿಯನ್ ಎಕ್ಸಪ್ರೆಸ್’ ಸಮೂಹ ಸಂಸ್ಥೆಯ ‘ಕನ್ನಡ ಪ್ರಭ’ದಲ್ಲಿ ಪತ್ರಕರ್ತರಾಗಿ ಕೆಲಸ ಆರಂಭಿಸಿದರು. ನಂತರ ದೆಹಲಿಗೆ ತೆರಳಿ ಕನ್ನಡ ಪ್ರಭ, ವಿಜಯ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಗಳಿಗೆ ದೆಹಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು, ಸುಪ್ರೀಂ ಕೋರ್ಟುಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು ಹಾಗೂ ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ಡಿ. ಉಮಾಪತಿ ಅವರು ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಆಂದೋಲನ , ರೈತ ಚಳವಳಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ’ನ್ಯಾಯಪಥ‘ (ಗೌರಿ ಮಿಡಿಯಾ) ಮತ್ತು ’ಈ ದಿನ.ಕಾಮ್‌’ ಮಾಧ್ಯಮ ಸಂಸ್ಥೆಯ ಕನ್ಸಲ್ಟಿಂಗ್ ಎಡಿಟರ್‌ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ದೆಹಲಿ ನೋಟ’, ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

ವಡ್ಡರೆ
ವಡ್ಡರ್ಸೆ ರಘುರಾಮಶೆಟ್ಟಿ

ಓದುಗರ ಸಂಪಾದಕ ವಡ್ಡರ್ಸೆ ರಘುರಾಮಶೆಟ್ಟಿ

ಓದುಗರ ಸಂಪಾದಕ ಎಂದೇ ದಿ. ವಡ್ಡರ್ಸೆ ರಘುರಾಮಶೆಟ್ಟಿ ಅವರು ಹೆಸರಾಗಿದ್ದರು. 1960ರ ದಶಕದಿಂದ ಸುಮಾರು ನಾಲ್ಕು ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಮಹತ್ವದ ಸೇವೆಗೈದಿದ್ದಾರೆ. ಮಾಧ್ಯಮವು ವಾಣಿಜ್ಯೋದ್ಯಮಿಗಳ ಹಾಗೂ ಈ ರಂಗದ ಪರಿಚಯವಿಲ್ಲದವರ ಆಡುಂಬೊಲವಾಗಬಾರದು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದರು. ಸಮಾಜದ ವಂಚನೆಯ ಜಾಲಗಳನ್ನು ಬಯಲಿಗೆಳೆಯುವ ಉದ್ದೇಶದಿಂದ 1984 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ‘ಮುಂಗಾರು’ ದಿನಪತ್ರಿಕೆಯನ್ನು ಪ್ರಾರಂಭಿಸಿ, ನಿರ್ಭೀತ ಬರಹಗಳ ಮೂಲಕ ಪತ್ರಿಕಾ ವೃತ್ತಿಯಲ್ಲಿ ಬದಲಾವಣೆಯನ್ನು ತಂದವರು. ಕನ್ನಡ ಪತ್ರಿಕೋದ್ಯಮದಲ್ಲಿ ದೀನದಲಿತರ ಹಾಗೂ ದುರ್ಬಲ ವರ್ಗದವರ ಪರವಾಗಿ ಧ್ವನಿಯೆತ್ತುವ, ದನಿಯಿಲ್ಲದವರ ದನಿಯಾಗಿದ್ದರು. ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತವನ್ನು ಉತ್ತೇಜಿಸಲು ಮತ್ತು ಸಾಮಾಜಿಕ ಬದಲಾವಣೆಯನ್ನು ತರಲು ಶ್ರಮಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...