ಸಂತ್ರಸ್ತೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಬೆನ್ನಲ್ಲೆ ಎಸ್‌ಐಟಿ ಮುಂದೆ ಭವಾನಿ ರೇವಣ್ಣ ಪ್ರತ್ಯಕ್ಷ

Date:

ನಾಪತ್ತೆಯಾಗಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೆ, ಜೂನ್ 7ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

ವಕೀಲರ ಜತೆಗೆ ಸಿಐಡಿ ಕಚೇರಿಗೆ ತೆರಳಿರುವ ಭವಾನಿ ರೇವಣ್ಣ ಅವರನ್ನು ಸದ್ಯ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ವಿಚಾರಣೆಗಾಗಿ ಭವಾನಿ ರೇವಣ್ಣಗೆ ಮೂರು ಬಾರಿ ನೋಟಿಸ್ ನೀಡಿದ್ದರು. ಆದರೂ, ಸಹ ಪ್ರತಿಕ್ರಿಯೆ ನೀಡಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹದಿನೈದು ದಿನಗಳಿಂದ ತಲೆಮರೆಸಿಕೊಂಡಿರುವ ಭವಾನಿಯವರನ್ನು ಬಂಧಿಸಲು ಎಸ್‌ಐಟಿ ಪೊಲೀಸ್ ತಂಡಗಳನ್ನು ರಚನೆ ಮಾಡಿತ್ತು. ಬೆಂಗಳೂರಿಗೆ ಹಿಂದಿರುಗುವ ಮೊದಲು ಎಸ್‌ಐಟಿ ಇತ್ತೀಚೆಗೆ ಹೊಳೆನರಸೀಪುರದ ಅವರ ನಿವಾಸದಲ್ಲಿ ಭವಾನಿಗಾಗಿ ಕನಿಷ್ಠ ಏಳು ಗಂಟೆಗಳ ಕಾಲ ಕಾದು ವಾಪಸಾಗಿತ್ತು.

ಮೈಸೂರು ಜಿಲ್ಲೆಯ ಕೆ.ಆರ್.ನಗರ ಪೊಲೀಸರು ಮಹಿಳೆಯ ಅಪಹರಣ ಮತ್ತು ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ಬೇಕಾಗಿರುವ ಭವಾನಿ ರೇವಣ್ಣ ವಿರುದ್ಧ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಪ್ರಕರಣದಲ್ಲಿ ಭವಾನಿ ಭಾಗಿಯಾಗಿರುವ ಬಗ್ಗೆ ಎಸ್‌ಐಟಿ ವಿವರವಾದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ಎಸ್‌ಐಟಿ ಕೈಗೆ ಇಷ್ಟು ದಿನ ಸಿಗದೇ ತಲೆಮರೆಸಿಕೊಂಡಿದ್ದರು. ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಗುಡುಗು ಸಿಡಿಲಿನ ಜತೆಗೆ ಮುಂದುವರೆದ ಮಳೆ

ಹೈಕೋರ್ಟ್‌ ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಇದರೊಂದಿಗೆ ಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ವಿಚಾರಣೆ ಹಾಜರಾಗಬೇಕು, ಎಸ್‌ಐಟಿ ಅಧಿಕಾರಿಗಳ ತನಿಖೆ, ವಿಚಾರಣೆಗೆ ಸಹಕರಿಸಬೇಕು ಎಂದು ಸೂಚನೆ ನೀಡಿದೆ. ಅಲ್ಲದೆ, ಭವಾನಿ ರೇವಣ್ಣ ಅವರು ಕೆ.ಆರ್.ನಗರ ಹಾಗೂ ಹಾಸನಕ್ಕೆ ಕಾಲಿಡುವಂತಿಲ್ಲ ಎಂದು ಹೈಕೊರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...