ಲೀಲಾವತಿ ಪ್ರತಿಮೆ ಅವರ ಆಸ್ಪತ್ರೆ ಮುಂದೆ ನಿರ್ಮಿಸುತ್ತೇವೆ: ಡಿ ಕೆ ಶಿವಕುಮಾರ್

Date:

  • ಹಿರಿಯ ನಟಿ ಲೀಲಾವತಿ ನಿಧನಕ್ಕೆ ವಿಧಾನಸಭೆ ಸಂತಾಪ
  • ಆಡಳಿತ ಮತ್ತು ಪ್ರತಿಪಕ್ಷ ನಾಯಕರಿಂದ ಸಂತಾಪ ನುಡಿ

ಬೆಳಗಾವಿ ಚಳಿಗಾಲದ ಅಧಿವೇಶನದ ಸೋಮವಾರದ ವಿಧಾನಸಭೆ ಕಲಾಪದಲ್ಲಿ ಹಿರಿಯ ಚಲಚಿತ್ರ ನಟಿ ಡಾ.ಲೀಲಾವತಿ ನಿಧನಕ್ಕೆ ಸಂತಾಪ ಸೂಚಿಸಿ ಒಂದು ನಿಮಿಷದ ಮೌನಾಚರಣೆ ಮಾಡಲಾಯಿತು.

ಸಭಾಧ್ಯಕ್ಷ ಯು ಟಿ ಖಾದರ್ ಸಂತಾಪ ಸೂಚನೆ ನಿರ್ಣಯ ಮಂಡಿಸಿ, “ಡಾ.ಲೀಲಾವತಿ ನಾಯಕಿಯಾಗಿ, ಪೋಷಕ ನಟಿಯಾಗಿ ವಿಭಿನ್ನ ಹಾಗೂ ವೈವಿಧ್ಯಮಯ ಪಾತ್ರಗಳಲ್ಲಿ ಕಪ್ಪು-ಬಿಳುಪು ಕಾಲದಿಂದ ಕಲರ್ ಸಿನಿಮಾ ಸ್ಕೋಪ್‍ವರೆಗೆ ಎಲ್ಲಾ ಪ್ರಸಿದ್ಧ ನಾಯಕ ನಟರೊಂದಿಗೆ ನಟಿಸಿ ಜನಪ್ರಿಯರಾಗಿದ್ದರು. ಕಾಲೇಜ್ ಹಿರೋ ಚಿತ್ರ ನಿರ್ಮಿಸಿದ್ದ ಅವರು ಕನ್ನಡದ ಕಂದ ಚಲನಚಿತ್ರಕ್ಕೆ ಚಿತ್ರಕಥೆ ಬರೆದಿದ್ದರು. ಡಾ.ರಾಜಕುಮಾರ್ ಹಾಗೂ ಫಿಲಂ ಫೇರ್ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು” ಎಂದರು.

ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, “ಡಾ.ಲೀಲಾವತಿ ಅತಿ ವಿರಳ ಹಾಗೂ ಅಪರೂಪದ ತಾರೆಯಾಗಿದ್ದರು. ತಮ್ಮ ಸ್ವಂತ ಹಣದಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ಪಶುಚಿಕಿತ್ಸಾಲಯ ಕಟ್ಟಿಸಿ ಸಮಾಜ ಸೇವೆಯನ್ನು ಮಾಡಿದ್ದಾರೆ. ಅವರ ಪಾತ್ರಗಳು ಸಾಮಾಜಿಕ ಬದಲಾವಣೆಗೆ ಕಾರಣವಾಗಿವೆ. ಅವರ ಅಗಲಿಕೆ ಚಿತ್ರ ಪ್ರೇಮಿಗಳು ಹಾಗೂ ಎಲ್ಲಾ ಪ್ರಾಣಿಪ್ರಿಯರಿಗೂ ತುಂಬಲಾರದ ನಷ್ಟವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, “ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಅಭಿನಯಸಿ ಡಾ.ಲೀಲಾವತಿಯವರು ತಮ್ಮ ಪ್ರೌಢಿಮೆಯನ್ನು ಮೆರೆದಿದ್ದಾರೆ. ಸಮಾಜ ನನಗೇನು ಕೊಟ್ಟಿದೆ ಎಂದು ಯೋಚಿಸುವವರ ಮಧ್ಯೆ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಧೀಮಂತ ವ್ಯಕ್ತಿತ್ವ ಅವರದು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಆಸ್ಪತ್ರೆ ಕಟ್ಟಲು ಅನುಮತಿ ಕೊಡಿಸುವಂತೆ ನನ್ನ ಬಳಿ ಬಂದಿದ್ದರು. ಡಾ.ಲೀಲಾವತಿ ಅವರು ಸ್ವಂತ ಖರ್ಚಿನಲ್ಲಿ ನಿರ್ಮಿಸಿದ ಆಸ್ಪತ್ರೆಯಲ್ಲಿ ಅವರ ಪ್ರತಿಮೆಯನ್ನು ನಿರ್ಮಿಸುವಂತೆ ಸರ್ಕಾರಕ್ಕೆ ಕೋರಿದರು” ಎಂದು ಹೇಳಿದರು.

ಜೆ.ಡಿ.ಎಸ್.ಶಾಸಕ ಬಾಲಕೃಷ್ಣ ಮಾತನಾಡಿ, “42 ಚಿತ್ರಗಳಲ್ಲಿ ಡಾ.ರಾಜ್‍ಕುಮಾರ್ ಅವರೊಂದಿಗೆ ಅಭಿನಯಸಿದ್ದ ಡಾ.ಲೀಲಾವತಿಯವರು ಆರಂಭದಲ್ಲಿ ತುಂಬಾ ಸಂಕಷ್ಟ ಅನುಭವಿಸಿ ಚಿತ್ರರಂಗಕ್ಕೆ ಆಗಮಿಸಿದ್ದರು. ಮಗ ವಿನೋದ್‍ಕುಮಾರ್ ಅವರೊಂದಿಗಿನ ಅವರ ಬಾಂಧವ್ಯ ಎಲ್ಲರಿಗೂ ಪ್ರೇರಣೆಯಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ” ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, “ಡಾ.ಲೀಲಾವತಿ ಅವರು ಅಜಾತಶತ್ರುವಾಗಿದ್ದರು. ಸುಮಾರು 32 ವರ್ಷಗಳಿಂದ ವೈಯಕ್ತಿಕವಾಗಿ ಪರಿಚಯವಿದ್ದರು. ಕಳೆದ 20 ದಿನಗಳ ಹಿಂದೆ ನನ್ನ ಮನೆಗೆ ಆಗಮಿಸಿ ನೂತನವಾಗಿ ನಿರ್ಮಿಸಿದ್ದ ಪಶು ಆಸ್ಪತ್ರೆ ಉದ್ಘಾಟನೆ ಮಾಡುವಂತೆ ನನ್ನನ್ನು ಆಹ್ವಾನಿಸಿದ್ದರು. ಅವರ ಆಹ್ವಾನದ ಮೇರೆಗೆ ಹೋಗಿ ಪಶು ಆಸ್ಪತ್ರೆ ಉದ್ಘಾಟಿಸಿ, ಅಗತ್ಯ ಇರುವ ಸಿಬ್ಬಂದಿ ನೇಮಿಸಿ ಆಸ್ಪತ್ರೆ ಕಾರ್ಯಾರಂಭ ಮಾಡಲು ಅನುವು ಮಾಡಿಕೊಟ್ಟಿದ್ದೆ. ವಿರೋಧ ಪಕ್ಷದ ನಾಯಕರ ಸಲಹೆಯಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆಸ್ಪತ್ರೆ ಬಳಿ ಡಾ.ಲೀಲಾವತಿ ಅವರ ಪ್ರತಿಮೆ ನಿರ್ಮಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...