ಬಂಗಾಳ ಕೊಲ್ಲಿಯಲ್ಲಿ ರೂಪಗೊಂಡಿರುವ ಮೋಂತಾ ಚಂಡಮಾರುತದಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮೋಂತಾ ಚಂಡಮಾರುತ ನಾಳೆ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕಾಕಿನಾಡ ಬಾಳಿ ಭೂಮಿಗೆ ಅಪ್ಪಳಿಸುವ ನಿರೀಕ್ಷೆ ಇದೆ.
ಇಂದು (ಅಕ್ಟೋಬರ್ 27) ಮುಂದಿನ 12 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ. ಈ ವಾರದುದ್ದಕ್ಕೂ ನಗರದಲ್ಲಿ ಇಂತಹ ಮಳೆ ಮುಂದುವರಿಯಲಿದೆ. ಅಕ್ಟೋಬರ್ 28ಕ್ಕೆ ಕರ್ನಾಟಕದ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?
ಕರಾವಳಿ ಪ್ರದೇಶಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ನಿವಾಸಿಗಳು ಮುಂದಿನ ದಿನಗಳಲ್ಲಿ ಮಳೆಯ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರಬೇಕು ಮತ್ತು ಅನಗತ್ಯ ಪ್ರಯಾಣ ತಪ್ಪಿಸಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.
ಚಂಡಮಾರುತ ಮೊಂತಾ ಆಂಧ್ರಪ್ರದೇಶದ ಕಾಕಿನಾಡ ಬಳಿ ಅಕ್ಟೋಬರ್ 28 ರ ಸಂಜೆ ಅಥವಾ ರಾತ್ರಿ ಭಾರಿ ಮಳೆಯಾಗಲಿದೆ. ಆಗ ಗಾಳಿಯ ವೇಗ 90-100 ಕಿಮೀ/ಗಂಟೆಯಿಂದ 110 ಕಿಮೀ/ಗಂಟೆಯವರೆಗೆ ಇರಬಹುದು. ಕಾಕಿನಾಡ, ಕೊನಸೀಮ, ಪಶ್ಚಿಮ ಗೋದಾವರಿ, ಕೃಷ್ಣ, ಬಾಪಟ್ಲ, ಪ್ರಕಾಶಂ ಮತ್ತು ನೆಲ್ಲೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.





