ಮೇಲ್ಮಟ್ಟದ ಮಹಿಳಾ ರಾಜಕೀಯ ಪ್ರಾತಿನಿಧ್ಯ ಕರ್ನಾಟಕದ ಮಾದರಿಯಾಗಲಿ: ಡಾ.ಸಬೀಹಾ ಭೂಮಿಗೌಡ

Date:

“ಶಾಸನಸಭೆಗಳಲ್ಲಿ ರಾಜಕೀಯ ಪ್ರಾತಿನಿಧ್ಯವನ್ನು ಮಹಿಳೆಯರಿಗೆ ದೊರಕಿಸಿಕೊಡುವ ಕರ್ನಾಟಕ ಮಾದರಿ ಅಗತ್ಯವಿದೆ” ಎಂದು ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸಬೀಹಾ ಭೂಮಿಗೌಡ ಹೇಳಿದರು.

‘ಜಾಗೃತ ಕರ್ನಾಟಕ’ ವತಿಯಿಂದ ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ’ನಮ್ಮ ಕರ್ನಾಟಕ ನಮ್ಮ ಮಾದರಿ- ಚಿಂತನಾ ಸಮಾವೇಶ’ದ ಉದ್ಘಾಟನಾ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಂಚಾಯತ್‌ ರಾಜ್ ವ್ಯವಸ್ಥೆಯಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿಯನ್ನು ಕರ್ನಾಟಕದಲ್ಲಿ ಜಾರಿಗೆ ತರಲಾಯಿತು. ಅದರಿಂದ ಶೇ. 52ರಷ್ಟು ಹೆಣ್ಣುಮಕ್ಕಳು ಗ್ರಾಮ ಮಟ್ಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿದೆ. ಆದರೆ, ಶಾಸನಸಭೆಗಳಲ್ಲಿ ಇದು ಮರೀಚಿಕೆಯಾಗಿದೆ. ಮೇಲ್ಮಟ್ಟದಲ್ಲಿ ಹೆಣ್ಣುಮಕ್ಕಳಿಗೆ ಪ್ರಾತಿನಿಧ್ಯ ದೊರಕಿಸಲು ಚಳವಳಿಗಳಾಗಬೇಕು. ಸಮ ಸಮಾಜ ಸಾಧ್ಯವಾಗಬೇಕೆಂದರೆ ಮೇಲ್ಮಟ್ಟದ ರಾಜಕೀಯದಲ್ಲಿ ಮಹಿಳೆಯರು ಇರಬೇಕಾಗುತ್ತದೆ. ಕರ್ನಾಟಕದಿಂದಲೇ ಅದು ಸಾಧ್ಯವಾಗಬೇಕಿದೆ” ಎಂದು ಅವರು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರ ಆರ್ಥಿಕತೆ, ರಾಜಕೀಯ ಪ್ರಾತಿನಿಧ್ಯ ತುಂಬಾ ಕೆಳಗಿದೆ. ಮೇಲ್ಮುಖ ಚಲನೆಗೆ ರಾಜಕೀಯ ಪ್ರಾತಿನಿಧ್ಯ ಸಿಗಬೇಕಿದೆ. ಉದ್ಯೋಗದ ಅವಕಾಶಗಳನ್ನು ಹೆಚ್ಚಿಸಬೇಕಾಗಿದೆ. ಕರ್ನಾಟಕ ಮಾದರಿಯನ್ನು ರೂಪಿಸುವಾಗ ಈ ಕುರಿತು ಚಿಂತಿಸಬೇಕಿದೆ” ಎಂದು ತಿಳಿಸಿದರು.

“ಜಂಡರ್‌ ಬಜೆಟಿಂಗ್‌ ಆದರೂ ಮಹಿಳೆಯರು ಫಲಾನುಭವಿಗಳಾಗುತ್ತಿಲ್ಲ. ಕಾರಣ ನಿಯಮಾವಳಿಗಳು ತೊಡಕಾಗಿವೆ. ಮನೆ, ಆಸ್ತಿಪಾಸ್ತಿಯ ಒಡೆತನದ ಅರ್ಹತೆಯನ್ನು ನಿಯಮವಾಗಿಸಲಾಗಿದೆ. ಫಲಾನುಭವಿಯಾಗಬೇಕಾದರೆ ಆಸ್ತಿಯ ಒಡೆತನ ಇರಬೇಕೆಂದರೆ ಹೇಗೆ ಸಾಧ್ಯ? ಈ ಕಾರಣ ನೀಡಿ ಮಹಿಳಾ ಫಲಾನುಭವಿಗಳು ಇಲ್ಲವೆಂದು ಅನುದಾನವನ್ನು ಹಿಂತಿರುಗಿಸಲಾಗುತ್ತಿದೆ. ನಿಯಮಗಳನ್ನು ಮಹಿಳಾಸ್ನೇಹಿಯಾಗಿ ರೂಪಿಸಬೇಕು. ಒಡೆತನದ ಪ್ರಶ್ನೆ ಮಹಿಳೆಯರಿಗೆ ಎಷ್ಟಿದೆ ಎಂಬುದನ್ನು ತಿಳಿಯದೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ತೊಂದರೆಯಾಗುತ್ತದೆ” ಎಂದು ಜಂಡರ್‌ ಬಜೆಟಿಂಗ್‌ನಲ್ಲಿನ ಲೋಪದೋಷಗಳನ್ನು ಎತ್ತಿಹಿಡಿದರು.

“ಉಳುವವನೇ ಭೂಮಿಯ ಒಡೆಯ ಎನ್ನುವ ನೀತಿ ತುಂಬಾ ಮುಖ್ಯವಾದದ್ದು. ಭೂರಹಿತರಿಗೆ ಭೂಮಿ ಸಿಕ್ಕಿದ್ದು ಮುಖ್ಯವಾದ ಸಂಗತಿ. ಜೊತೆಗೆ ಸ್ವಾಮಿನಾಥನ್ ವರದಿಯ ಶಿಫಾರಸ್ಸಿನಂತೆ ಹೆಣ್ಣಮಕ್ಕಳಿಗೆ ಆಸ್ತಿಯ ವಿಚಾರದಲ್ಲಿ ಜಂಟಿ ಪಟ್ಟಾ (Joint Patta) ಅವಕಾಶ ದೊರಕಬೇಕು. ಆಗ ಹೆಣ್ಣು ಮಕ್ಕಳು ಫಲಾನುಭವಿಗಳಾಗಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ: ದೇವರಾಜ ಅರಸು ನನ್ನ ಹೃದಯವನ್ನು ಗಾಢವಾಗಿ ತಟ್ಟಿದ ನಾಯಕ – ಪ್ರೊ. ಜೇಮ್ಸ್ ಮ್ಯಾನರ್, ಲಂಡನ್

“ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಕಲ್ಪಿಸುವ ಶಕ್ತಿ ಯೋಜನೆಗೆ ಬಂದ ಪ್ರತಿಕ್ರಿಯೆಗಳು ಪುರುಷ ಪ್ರಧಾನ ವ್ಯವಸ್ಥೆಯ ದಿಗಿಲನ್ನು ತೋರುತ್ತವೆ. ಕಲ್ಯಾಣ ಕಾರ್ಯಕ್ರಮಗಳಿಂದ ಆಗಿರುವ ಪ್ರಯೋಜನಗಳ ಕುರಿತು ಲೇಖನಗಳು ಬಂದಿವೆ. ಆದರೆ ಅವು ಈ ಜನರಿಗೆ ತಿಳಿದಿಲ್ಲ. ಹೆಂಗಸರು ತಮ್ಮ ಕಪಿಮುಷ್ಟಿಯಿಂದ ತಪ್ಪಿಸಿಕೊಳ್ಳುತ್ತಾರೆಂಬ ಭಯ ಗಂಡಸರಲ್ಲಿದೆ” ಎಂದು ಅವರು ಹೇಳಿದರು.

“ರೇಷನ್ ಕಾರ್ಡ್‌ನಲ್ಲಿ ಮನೆಯ ಯಜಮಾನಿ ಎಂದು ಗುರುತಿಸುವ ಪ್ರಯತ್ನವು ಪುಳಕ ತಂದಿದೆ” ಎಂದ ಅವರು, “ಯೋಜನೆಗಳು ಲೈಂಗಿಕ ಅಲ್ಪಸಂಖ್ಯಾತರನ್ನೂ ಒಳಗೊಳ್ಳುತ್ತಿರುವುದು ಮೆಚ್ಚುವಂತಹದ್ದು. ಇದರ ಜೊತೆಗೆ ಈ ಹಿಂದೆ ಸಿದ್ದರಾಮಯ್ಯನವರ ಅವಧಿಯಲ್ಲಿಯೇ ಲೈಂಗಿಕ ಅಲ್ಪಸಂಖ್ಯಾತರ ಕುರಿತು ಅಧ್ಯಯನವಾಗಿದೆ. ಆ ವರದಿಯ ಶಿಫಾರಸ್ಸುಗಳನ್ನು ಸರ್ಕಾರ ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

“ಪರಿಶಿಷ್ಟ ಸಮುದಾಯಗಳಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ರೂಪಿಸಿ ಅನುದಾನವನ್ನು ಮೀಸಲಿಟ್ಟಂತೆ ಮಹಿಳೆಯರ ಉನ್ನತಿಗಾಗಿ ಬಜೆಟ್‌ನಲ್ಲಿ ನಿರ್ದಿಷ್ಟ ಹಣವನ್ನು ಮೀಸಲಿಡುವ ಕಾಯ್ದೆಯನ್ನು ಜಾರಿಗೆ ತರಬೇಕು” ಎಂದು ಅವರು ಒತ್ತಾಯಿಸಿದರು.

“ಜನಸಂಖ್ಯಾ ಆಧಾರಿತ ಮಹಿಳಾ ಪ್ರಾತಿನಿಧ್ಯ ಬರಬೇಕು. ನಿಗಮ ಮಂಡಳಿಗಳಲ್ಲಿ ಶೇ.33ರಷ್ಟು ಸ್ಥಾನಗಳನ್ನು (ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಒಳಗೊಂಡಂತೆ) ಮಹಿಳೆಯರಿಗೆ ನೀಡಬೇಕು. ಪುರುಷರ ಮನೋಧರ್ಮವನ್ನು ಬದಲಿಸುವಂತಹ, ಲಿಂಗತ್ವ ಸೂಕ್ಷ್ಮಗಳನ್ನು ಬೆಳೆಸುವ ತರಬೇತಿಗಳನ್ನು ರೂಪಿಸಬೇಕು. ಶಿಕ್ಷಣ, ಉದ್ಯೋಗ, ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆಯರು ಸಮಾನರು ಎಂಬುದನ್ನು ತರಬೇತಿಗಳ ಮೂಲಕ ಬೆಳೆಸಬೇಕಿದೆ. ಲಿಂಗತ್ವ ಸಮಾನತೆಯ ಆಶಯವನ್ನು ಕರ್ನಾಟಕದಿಂದಲೇ ಆರಂಭಿಸುವ ಮಾದರಿ ಬೇಕಿದೆ” ಎಂದು ಅವರು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ: ಆರ್ಥಿಕ ಶಕ್ತಿ ಬೆಳೆಸುವುದರ ಜೊತೆಗೆ ಸಂಪತ್ತಿನ ಮರುಹಂಚಿಕೆ ಮಾಡುವುದೇ ಕರ್ನಾಟಕ ಮಾದರಿ: ಡಾ.ಎ.ನಾರಾಯಣ

ಕಾರ್ಯಕ್ರಮದಲ್ಲಿ ಕಡಿಮೆ ಸಂಖ್ಯೆಯಲ್ಲಿ ಮಹಿಳೆಯರ ಹಾಜರಿ ಇರುವುದನ್ನು ಉದ್ದೇಶಿಸಿ ಮಾತನಾಡಿದ ಅವರು, “ಇಂತಹದ್ದೊಂದು ಮಹತ್ವದ ಚರ್ಚೆಯನ್ನು ಮಾಡುವ ಸಂದರ್ಭದಲ್ಲಿ ಹೆಣ್ಣುಮಕ್ಕಳ ಪಾಲ್ಗೊಳ್ಳುವಿಕೆ ಕಡಿಮೆ ಇದೆ. ಹೆಣ್ಣುಮಕ್ಕಳು ಕಾರ್ಯಕ್ರಮಗಳಿಗೆ ಬರುವುದಿಲ್ಲ ಎಂಬ ಸಬೂಬು ನೀಡುವುದಕ್ಕಿಂತ, ಇಲ್ಲಿಗೆ ಬಂದಿರುವ ಒಬ್ಬೊಬ್ಬರು ತಮ್ಮ ಮನೆಯಿಂದ ಒಬ್ಬ ಮಹಿಳೆಯನ್ನು ಕರೆತಂದಿದ್ದರೂ ಚಿತ್ರಣ ಬದಲಾಗುತ್ತಿತ್ತು” ಎಂದು ಕುಟುಕಿದರು.

ಲಂಡನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೇಮ್ಸ್‌ ಮ್ಯಾನರ್‌ ಆನ್‌ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಜೀಂ ಪ್ರೇಂಜಿ ವಿವಿಯ ಪ್ರಾಧ್ಯಾಪಕ ಡಾ.ಎ.ನಾರಾಯಣ ದಿಕ್ಸೂಚಿ ಭಾಷಣ ಮಾಡಿದರು. ಬಯಲು ಸೀಮೆ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆಂಜನೇಯ ರೆಡ್ಡಿಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಅಸ್ಸಾಂ ಅಖಾಡ: ಬಿಜೆಪಿ ಮಿತ್ರಪಕ್ಷ ಎಜಿಪಿಯಿಂದ ಶೇ. 50 ಮುಸ್ಲಿಂ ಅಭ್ಯರ್ಥಿಗಳು; ಏನಿದು ‘ಕಮಲ’ದ ಹೊಸ ರಣತಂತ್ರ?

ತಾನು ತನ್ನ ಸೈದ್ಧಾಂತಿಕ ನಿಲುವಿನಂತೆ ಮುಸ್ಲಿಮರಿಗೆ ಟಿಕೆಟ್ ನಿರಾಕರಿಸಿದರೂ, ಅಧಿಕಾರ ಹಿಡಿಯುವ...

ಬಿಜೆಪಿ ಅಸ್ತ್ರಕ್ಕೆ ಟಿಎಂಸಿ ಪ್ರತ್ಯಸ್ತ್ರ; ಸುವೇಂದು ಎದುರು ಸ್ಪರ್ಧಿಸಿರುವ ‘ಪಬಿತ್ರ ಕರ್’ ಯಾರು ಗೊತ್ತೆ?

2021ರ ಆ ನಿರ್ಣಾಯಕ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸುವಲ್ಲಿ ಸುವೇಂದು...

ಅಸ್ಸಾಂ ಚುನಾವಣೆ: ಬಿಜೆಪಿಯ ಹತಾಶ ‘ಆಪರೇಷನ್’ ತಂತ್ರ, ಪುಟಿದೇಳಲು ಕಾಂಗ್ರೆಸ್‌ಗೆ ಸುವರ್ಣಾವಕಾಶ

ಬಿಜೆಪಿಯ ಎಲ್ಲಾ ರಾಜಕೀಯ ಮೇಲಾಟಗಳನ್ನು ಅಸ್ಸಾಂನ ಮತದಾರರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ....