ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂಬ ಆರೋಪಕ್ಕೆ ಯತ್ನಾಳ್ ಸಾಕ್ಷಿ ಒದಗಿಸಿದ್ದಾರೆ:‌ ಸಿದ್ದರಾಮಯ್ಯ

Date:

  • ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಟ್ ಎಂಡ್ ರನ್ ಮಾಡಬಾರದು: ಸಿದ್ದರಾಮಯ್ಯ
  • ತಮ್ಮ ಬಳಿ ಇರುವ ಮಾಹಿತಿಯನ್ನು ನಾಗಮೋಹನ್ ದಾಸ್ ತನಿಖಾ ಆಯೋಗಕ್ಕೆ ಒಪ್ಪಿಸಬೇಕು

ಕೊರೋನಾ ಕಾಲದಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, “ಕೊರೋನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ” ಎಂದು ಪ್ರಶ್ನಿಸಿದ್ದಾರೆ.

“ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಟ್ ಎಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೋನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು” ಎಂದು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ಬಿಜೆಪಿ ಶಾಸಕ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ” ಎಂದಿದ್ದಾರೆ.

“ತನ್ನನ್ನು ದೇಶದ ‘ಚೌಕಿದಾರ’ ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು ‘ನ ಖಾವೂಂಗಾ ನಾ ಖಾನೆ ದೂಂಗಾ’ ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ?” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...