ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-2: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ

Date:

ಕರ್ನಾಟಕ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಅತೀ ದೊಡ್ಡ ಸಮೀಕ್ಷೆಯನ್ನು ಈದಿನ.ಕಾಮ್ ಮಾಡಿದೆ. ರಾಜ್ಯದ ವಿವಿಧ ಭಾಗಗಳ ನಾನಾ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆ ಇದೆಯೇ ಎಂಬುದನ್ನು ಅರಿಯಲು ಜನರು ನೀಡಿರುವ ಉತ್ತರಗಳು ಸ್ಪಷ್ಟ ಚಿತ್ರಣ ನೀಡಿವೆ.

ಮೊದಲಿಗೆ ಈ ಸಮೀಕ್ಷೆ ಏನೆಂದು ಅರಿಯಲು ಓದಿ: ಚುನಾವಣೆ 2023: ‘ಈ ದಿನ.ಕಾಮ್‌’ನ ಕರ್ನಾಟಕ ವಿಧಾನಸಭಾ ಚುನಾವಣೆಯ ಅತಿ ದೊಡ್ಡ ಸಮೀಕ್ಷೆ

ಮೇಲಿನ ಲಿಂಕಿನ ಮೂಲಕ ನೀವು ಈದಿನ.ಕಾಮ್‌ನ ಸಮೀಕ್ಷೆಯ ಸ್ವರೂಪ, ವಿಧಾನ, ಗಾತ್ರದ ಕುರಿತ ವಿವರಗಳನ್ನು ತಿಳಿಯಬಹುದು. ಈಗ ಸಮೀಕ್ಷೆಯ ಮೊಟ್ಟಮೊದಲ ಅಂಶವನ್ನು ಗಮನಿಸೋಣ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಸಮೀಕ್ಷೆಯಲ್ಲಿ ಕೇಳಲಾದ ಪ್ರಶ್ನೆ ಹೀಗಿತ್ತು: ಬಸವರಾಜ ಬೊಮ್ಮಾಯಿ ನೇತೃತ್ವದ ಈಗಿನ ಸರ್ಕಾರಕ್ಕೆ ಆಡಳಿತ ನಡೆಸಲು ಮತ್ತೊಂದು ಅವಕಾಶ ಸಿಗಬೇಕು ಎಂದು ನೀವು ಭಾವಿಸುತ್ತೀರಾ? 

  • 2/3ರಷ್ಟು ಮತದಾರರು ಬಿಜೆಪಿ ಸರ್ಕಾರ ಹೋಗಬೇಕೆಂದು ಬಯಸುತ್ತಿದ್ದಾರೆ.
  • ಬಿಜೆಪಿಯ 1/4ರಷ್ಟು ಬೆಂಬಲಿಗರು ಈ ಸರ್ಕಾರದ ಬಗ್ಗೆ ಸಂತುಷ್ಟರಾಗಿಲ್ಲ.
  • ಸರ್ಕಾರದ ವಿರುದ್ಧದ ಅಸಂತುಷ್ಟಿಯು ವಿರೋಧಿ ಮತವಾಗಿಯೂ ಪರಿವರ್ತನೆಯಾಗಿದೆಯೇ ಎಂಬುದು ಈ ಸರಣಿಯ ಕಡೆಯಲ್ಲಿ ತಿಳಿಯುತ್ತದೆ.

ಕರ್ನಾಟಕದಾದ್ಯಂತ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಬೀಸುತ್ತಿರುವುದು ಸಮೀಕ್ಷೆಯಲ್ಲಿ ಸ್ಪಷ್ಟವಾಗಿದೆ. ನಮ್ಮ ಸಮೀಕ್ಷೆಯಲ್ಲಿ ‘ಬಸವರಾಜ ಬೊಮ್ಮಾಯಿಯವರ ನೇತೃತ್ವದ ಈ ಸರ್ಕಾರಕ್ಕೆ ಇನ್ನೊಂದು ಅವಕಾಶ ನೀಡಬೇಕೆಂದು ನೀವು ಭಾವಿಸುತ್ತೀರಾ?ʼ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಹೌದು ಅಥವಾ ಇಲ್ಲ ಎಂದು ಉತ್ತರಿಸಿದವರಲ್ಲಿ ಶೇ.67ರಷ್ಟು ಮತದಾರರು ಬಸವರಾಜ ಬೊಮ್ಮಾಯಿಯವರ ಸರ್ಕಾರಕ್ಕೆ ಇನ್ನೊಂದು ಅವಕಾಶ ಕೊಡಬಾರದು ಎಂದು ಉತ್ತರಿಸಿದ್ದಾರೆ. ಶೇ.33ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಅವಕಾಶ ಸಿಗಬೇಕು ಎಂದು ಉತ್ತರಿಸಿದ್ದಾರೆ. (ಯಾವ ಅಭಿಪ್ರಾಯವನ್ನೂ ಹೊಂದಿಲ್ಲ ಅಥವಾ ಹೇಳಬಯಸುವುದಿಲ್ಲ ಎಂದು ಹೇಳಿದ ಶೇ.32ರಷ್ಟು ಮತದಾರರು ಹೇಳಿದ್ದಾರೆ).

ಉತ್ತರ ನೀಡುವ ಪ್ರತಿಯೊಬ್ಬ ಮತದಾರರ ವೈಯಕ್ತಿಕ ವಿವರಗಳನ್ನು – ಅಂದರೆ ಅವರ ವಯಸ್ಸು, ಜಾತಿ, ಆರ್ಥಿಕ ಸ್ಥಿತಿಗತಿ ಇತ್ಯಾದಿ – ಸಹಾ ಸಂಗ್ರಹಿಸಲಾಗುತ್ತದೆ. ಹಾಗೆ ಕೇಳುವಾಗ ಒಂದಷ್ಟು ಜನರು ಆ ವಿವರಗಳನ್ನು ನೀಡಲು ನಿರಾಕರಿಸುವ ಸಾಧ್ಯತೆಯೂ ಇದೆ. ಅವೆಲ್ಲವನ್ನೂ ಮೊದಲ ಭಾಗದಲ್ಲಿ ವಿವರಿಸಿರುವುದನ್ನು ನೀವು ಗಮನಿಸಿರಬಹುದು. ಅದೇ ರೀತಿ ಅವರು ಯಾವ ಪಕ್ಷಕ್ಕೆ ಅಂತಿಮವಾಗಿ ಮತ ನೀಡುತ್ತಾರೆ ಎಂಬುದನ್ನೂ ಕೇಳಲಾಗುತ್ತದೆ. ಅದರ ಆಧಾರದಲ್ಲಿ ಯಾವ ಪಕ್ಷದ ಬೆಂಬಲಿಗರು ಎಂಬುದನ್ನು ಗುರುತಿಸಲಾಗುತ್ತದೆ.

ವಿಶೇಷವೆಂದರೆ,

ಬಿಜೆಪಿಯ ಬೆಂಬಲಿಗರಲ್ಲಿ ನಾಲ್ಕನೇ ಒಂದು ಭಾಗದಷ್ಟು (27%) ಮತದಾರರೂ ಸಹಾ ಬೊಮ್ಮಾಯಿಯವರಿಗೆ ಇನ್ನೊಂದು ಅವಕಾಶ ನೀಡಬೇಕೇ ಎಂದಾಗ, ಇಲ್ಲ ಎಂದಿದ್ದಾರೆ. ನಿರೀಕ್ಷೆಯಂತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲಿಗರಲ್ಲಿ ಹೆಚ್ಚಿನವರು ಈ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಕಾಂಗ್ರೆಸ್‌ ಬೆಂಬಲಿಗರ ಪೈಕಿ ಶೇ.87ರಷ್ಟು ಮತ್ತು ಜೆಡಿಎಸ್‌ ಬೆಂಬಲಿಗರಲ್ಲಿ ಶೇ.88ರಷ್ಟು ಮತದಾರರು ಈ ಸರ್ಕಾರಕ್ಕೆ ಇನ್ನೊಂದು ಅವಕಾಶ ನೀಡಬಾರದು ಎಂದಿದ್ದಾರೆ. (ಜನರ ಅಭಿಪ್ರಾಯ ಮತ್ತು ಅಂತಿಮವಾಗಿ ಮತ ಯಾರಿಗೆ ಹಾಕುತ್ತಾರೆ ಎಂಬುದು ಭಿನ್ನ ಭಿನ್ನವಾಗಿರಲು ಸಾಧ್ಯ – Public opinion & Voting Behaviour can be different – ಅಂದರೆ ಅಂತಿಮವಾಗಿ ಅದೇ ಪಕ್ಷಕ್ಕೆ ಮತ ಹಾಕಿದರೂ, ಈ ಸರ್ಕಾರ ಸರಿಯಿಲ್ಲ ಎಂಬ ಅಭಿಪ್ರಾಯ ಹೊಂದಿರಲು ಸಾಧ್ಯ ಎಂಬುದನ್ನು ಗಮನಿಸಬೇಕು).

1831 1

ಜಾತಿ-ಸಮುದಾಯಗಳ ಲೆಕ್ಕ ನೋಡಿದರೆ, ಈ ಸರ್ಕಾರವೇ ಬರಲಿ ಎಂದು ಮೇಲ್ಜಾತಿ (ಬ್ರಾಹ್ಮಣರು, ವೈಶ್ಯರು ಇತ್ಯಾದಿ)ಯ ಜನರು ಹೆಚ್ಚಿನ ಒಲವು ತೋರಿದ್ದಾರೆ (ಸರ್ಕಾರದ ಪರ ಶೇ.57, ಸರ್ಕಾರದ ವಿರುದ್ಧ ಶೇ.43). ಮಿಕ್ಕೆಲ್ಲಾ ಸಮುದಾಯಗಳು ಸರ್ಕಾರದ ವಿರುದ್ಧ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಈ ವಿಚಾರದಲ್ಲಿ ಲಿಂಗಾಯಿತರು ಎರಡೂ ಕಡೆಗೆ ಹೆಚ್ಚು ಕಡಿಮೆ ಸಮಾನವಾಗಿ ಹಂಚಿಹೋಗಿದ್ದಾರೆ (ಸರ್ಕಾರದ ಪರ ಶೇ.53, ಸರ್ಕಾರದ ವಿರುದ್ಧ ಶೇ.47). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮುಸ್ಲಿಮರು, ಒಕ್ಕಲಿಗರು ಮತ್ತು ಕುರುಬರು ಈ ಸರ್ಕಾರ ಮುಂದುವರೆಯುವುದರ ವಿರುದ್ಧ ಹೆಚ್ಚಿನ ಪ್ರಮಾಣದಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಸಮಾಜದ ಶ್ರೇಣೀಕರಣದಲ್ಲಿ ತಳಸಮುದಾಯಗಳು ಹೆಚ್ಚೆಚ್ಚು ಪ್ರಮಾಣದಲ್ಲಿ ಈ ಸರ್ಕಾರದ ವಿರುದ್ಧ ಅಭಿಪ್ರಾಯವನ್ನು ಹೊಂದಿರುವುದು, ಜಾತಿ ಶ್ರೇಣೀಕರಣದಲ್ಲಿ ಮೇಲೆ ಇರುವವರು ಸಾಪೇಕ್ಷವಾಗಿ ಸರ್ಕಾರದ ಪರ ನಿಲುವನ್ನು ಹೊಂದಿರುವುದು ಎದ್ದು ಕಾಣುತ್ತದೆ. ಆದರೆ, ಮುಸ್ಲಿಮರನ್ನು ಹೊರತುಪಡಿಸಿದರೆ ಒಕ್ಕಲಿಗ ಸಮುದಾಯವು ಅತ್ಯಂತ ಹೆಚ್ಚು ಈ ಸರ್ಕಾರದ ವಿರುದ್ಧ ಇದ್ದಾರೆ.

1830 3
1

ಚುನಾವಣೆ ಸಮೀಕ್ಷೆಯ ಮುಂದಿನ ಭಾಗ ಓದಿ: ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-3: ಭ್ರಷ್ಟಾಚಾರ, ಅಸಮರ್ಥತೆಯೇ ತಿರಸ್ಕಾರಕ್ಕೆ ಪ್ರಧಾನ ಕಾರಣ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...