ಈದಿನ.ಕಾಮ್ ಸಮೀಕ್ಷೆ-5: ಸರ್ಕಾರದ ಯೋಜನೆಗಳ ʼಫಲʼ ಬಿಜೆಪಿಗೆ ಸಿಗದು; ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಇನ್ನೂ ಇಲ್ಲ ಗ್ಯಾರಂಟಿ

Date:

ಹಲವು ಚುನಾವಣೆಗಳಲ್ಲಿ ಬಿಜೆಪಿಗೆ ಫಲ ನೀಡಿದ್ದ ‘ಫಲಾನುಭವಿ’ಗಳ ದಾಳ ಕರ್ನಾಟಕದಲ್ಲಿ ಯಶಸ್ಸು ನೀಡುವ ಸಾಧ್ಯತೆ ಕಡಿಮೆ. ಇನ್ನೊಂದೆಡೆ, ಕಾಂಗ್ರೆಸ್‌ ಸಹಾ ತನ್ನ ‘ಗ್ಯಾರಂಟಿ’ ಬಗ್ಗೆ ಜನರಲ್ಲಿ ಪೂರ್ಣ ವಿಶ್ವಾಸ ಮೂಡಿಸುವ ಕೆಲಸ ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಮೊದಲಿಗೆ ಈ ಸಮೀಕ್ಷೆ ಏನೆಂದು ಅರಿಯಲು ಈ ವರದಿ ಓದಿ: ಚುನಾವಣೆ 2023: ಕರ್ನಾಟಕ ವಿಧಾನಸಭಾ ಚುನಾವಣೆಯ ಅತಿ ದೊಡ್ಡ ಸಮೀಕ್ಷೆ ‘ಈ ದಿನ.ಕಾಮ್‌’ನ ಸಮೀಕ್ಷೆ

ದೇಶದ ಕೆಲವು ರಾಜ್ಯಗಳಲ್ಲಿ ಬಿಜೆಪಿಯು ಆಡಳಿತ ವಿರೋಧಿ ಅಲೆಯನ್ನು ಸರ್ಕಾರದ ಕೆಲವು ಜನಪ್ರಿಯ ಯೋಜನೆಗಳಿಂದ ಪ್ರಯೋಜನ ಪಡೆದ ‘ಫಲಾನುಭವಿಗಳಿಗೆʼ ಅದನ್ನು ಮತ್ತೆ ಮತ್ತೆ ನೆನಪಿಸುವ ಮೂಲಕ ನಿವಾರಿಸಿಕೊಂಡಿತ್ತು. ಎರಡು ಕಾರಣಗಳಿಂದ ಇದು ಕರ್ನಾಟಕದಲ್ಲಿ ಫಲ ನೀಡುವ ಸಾಧ್ಯತೆ ಕಡಿಮೆ ಎಂದು ತೋರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎ) ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆದಿದ್ದೀರಾ ಎಂಬ ಪ್ರಶ್ನೆಗೆ 35% ಜನರು ಯಾವುದೇ ಯೋಜನೆ ತಮಗೆ ತಲುಪಿಲ್ಲ ಎಂದಿದ್ದಾರೆ. ಪಿಎಂ ಕಿಸಾನ್‌ ಯೋಜನೆ, ಆಯುಷ್ಮಾನ್‌ ಭಾರತ್‌ ಮತ್ತು ಉಜ್ವಲ ಗ್ಯಾಸ್‌ ಯೋಜನೆಗಳಿಂದ ಲಾಭ ಪಡೆದವರು (ಪ್ರತಿಕ್ರಿಯೆ ನೀಡಿದವರಲ್ಲಿ) ಕ್ರಮವಾಗಿ 21%, 21% ಮತ್ತು 23% ಮಾತ್ರ.

table 1

ಅದಕ್ಕಿಂತ ಮುಖ್ಯವಾಗಿ, ಸದರಿ ಯೋಜನೆಗಳ ಫಲಾನುಭವಿಗಳಾಗಬಹುದಾಗಿದ್ದ ಜನರಲ್ಲಿ ಈ ಯೋಜನೆಗಳಿಂದ ಅನುಕೂಲ ಪಡೆದವರ ಸಂಖ್ಯೆ ಬಹಳ ಕಡಿಮೆಯಿದೆ. ಉದಾಹರಣೆಗೆ ಪಿಎಂ ಕಿಸಾನ್‌ ಯೋಜನೆಯ ಅನುಕೂಲ ಪಡೆದಿದ್ದೇವೆ ಎಂದು ಹೇಳಿದ ರೈತರು 33% ಮಾತ್ರ ಆಗಿದ್ದಾರೆ.

table 2

ಈ ಸಮೀಕ್ಷಾ ವರದಿಯನ್ನೂ ಓದಿ: ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-3: ಭ್ರಷ್ಟಾಚಾರ, ಅಸಮರ್ಥತೆಯೇ ತಿರಸ್ಕಾರಕ್ಕೆ ಪ್ರಧಾನ ಕಾರಣ

ಬಿ) ರಾಜ್ಯ ಸರ್ಕಾರದ ಯೋಜನೆಗಳ ವಿಷಯಕ್ಕೆ ಬಂದರೆ, ಪ್ರಸ್ತುತ ಬಿಜೆಪಿ ಸರ್ಕಾರ ಪ್ರಾರಂಭಿಸಿದ ಯಾವುದೇ ಯೋಜನೆಯನ್ನು ಹೆಸರಿಸಲೂ ಮತದಾರರಿಗೆ ಸಾಧ್ಯವಾಗಲಿಲ್ಲ.

table 3

ಕಾಂಗ್ರೆಸ್‌ ಗ್ಯಾರಂಟಿಯೂ ಪೂರ್ಣ ಮತ ತಂದುಕೊಡುವ ಗ್ಯಾರಂಟಿಯಿಲ್ಲ.

ಮತದಾರರಿಗೆ ನಾಲ್ಕು ದೊಡ್ಡ ‘ಗ್ಯಾರಂಟಿ’ಗಳನ್ನು (ಭರವಸೆ) ನೀಡುವ ಮೂಲಕ ಕಾಂಗ್ರೆಸ್ ಈ ನಿರ್ವಾತದ ಲಾಭವನ್ನು ಪಡೆಯಲು ಪ್ರಯತ್ನಿಸುತ್ತಿದೆ. ಪ್ರಸ್ತುತ ಸಮೀಕ್ಷೆಯು ಈ ನಾಲ್ಕರ ಪೈಕಿ ಎರಡು ಗ್ಯಾರಂಟಿಗಳಿಗೆ ಮತದಾರರ ಪ್ರತಿಕ್ರಿಯೆಯೇನು ಎಂಬುದನ್ನು ಪರಿಶೀಲಿಸಿತು. ಇಲ್ಲಿ ಕಾಂಗ್ರೆಸ್‌ನ ಎರಡು ಸಮಸ್ಯೆಗಳು ಸಮೀಕ್ಷೆಯಲ್ಲಿ ಗಮನಕ್ಕೆ ಬಂದವು.

ಎ) ಸುಮಾರು ಮೂರನೇ ಒಂದು ಭಾಗದಷ್ಟು ಮತದಾರರಿಗೆ, ವಿಶೇಷವಾಗಿ ಯಾರನ್ನು ಉದ್ದೇಶಿಸಿ ಈ ಘೋಷಣೆಗಳನ್ನು ಮಾಡಲಾಗಿದೆಯೋ ಆ ಸಮುದಾಯಗಳ ಮತದಾರರಲ್ಲಿ ಗಣನೀಯ ಪ್ರಮಾಣದ ಜನರಿಗೆ ಈ ಘೋಷಣೆಗಳ ಬಗ್ಗೆ ಮಾಹಿತಿಯೇ ಇಲ್ಲ.

ಬಿ) ಯೋಜನೆಗಳ ಬಗ್ಗೆ ಮಾಹಿತಿ ಇರುವವರ ಪೈಕಿ ಅರ್ಧದಷ್ಟು ಮಂದಿಯು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ ಭರವಸೆಗಳನ್ನು ಕಾರ್ಯಗತಗೊಳಿಸುತ್ತದೆ ಎಂದು ನಂಬಿಲ್ಲ. ಅಂದರೆ ತನ್ನ ಸಂಭಾವ್ಯ ಮತದಾರರ ಮನವೊಲಿಸುವ ಸವಾಲನ್ನು ಕಾಂಗ್ರೆಸ್ ಎದುರಿಸುತ್ತಿದೆ.

table 4
table 5

ಈ ಸಮೀಕ್ಷಾ ವರದಿಯನ್ನೂ ಓದಿ: ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-4: ಭ್ರಷ್ಟಾಚಾರವೇ ಚುನಾವಣೆಯ ಪ್ರಧಾನ ಸಂಗತಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಮೋದಿ 5,000 ರೂ. ಕೊಡುತ್ತಾರೆಂಬ ವದಂತಿ; ಗ್ಯಾಸ್ ಕಚೇರಿ ಎದುರು ಜಮಾಯಿಸಿದ ಜನ

ಉಜ್ವಲ ಯೋಜನೆಯಡಿ ಪ್ರಧಾನಿ ಮೋದಿ ಅವರು 5,000 ರೂ. ಕೊಡುತ್ತಾರೆಂಬ ವದಂತಿ...

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...