ಚಂದ್ರಯಾನ -3 : ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರ್ಪಡೆ

Date:

ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ.

ಬೆಂಗಳೂರಿನ ಐಎಸ್‌ಟಿಆರ್‌ಎಸಿಯ ಮಿಷನ್ ಆಪರೇಷನ್ ಕಾಂಪ್ಲೆಕ್ಸ್‌ನಿಂದ (ಎಂಓಎಕ್ಸ್) ಚಂದ್ರನಿಗೆ ಅತಿ ಸಮೀಪದ ಕಕ್ಷೆಯ ಭಾಗವಾದ ಪೆರಿಲೂನ್‌ನಿಂದ ರೆಟ್ರೋ ಬರ್ನಿಂಗ್ (ರಾಕೆಟ್‌ಗಳನ್ನು ಉಡಾವಣೆ ಮಾಡಿದ ದಿಕ್ಕಿನ ವಿರುದ್ಧ ಭಾಗದಿಂದ ರಾಕೆಟ್‌ ಉರಿಸುವುದು) ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಇಸ್ರೋ ಹೇಳಿದೆ.

ಲೂನಾರ್ ಆರ್ಬಿಟ್ ಇನ್ಸರ್ಷನ್ (ಎಲ್‌ಒಐ) ಅಥವಾ ಚಂದ್ರನ ಕಕ್ಷೆ ಸೇರ್ಪಡೆ ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರಯಾನದ ಎಲ್ಲ ವ್ಯವಸ್ಥೆಗಳು ಉತ್ತಮವಾಗಿವೆ ಎಂಬ ಸುದ್ದಿಯನ್ನು ಇಸ್ರೋ ಹಂಚಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತದ ಐತಿಹಾಸಿಕ ‘ಚಂದ್ರಯಾನ 3’ ಯಶಸ್ವಿ ಉಡಾವಣೆ; 20 ವರ್ಷದ ಹಿಂದೆ ಆರಂಭವಾದ ಯೋಜನೆ ಸಾಗಿದ್ದು ಹೇಗೆ?

ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆಯನ್ನು ಆಗಸ್ಟ್ 6ರ ಭಾನುವಾರ ರಾತ್ರಿ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಮಾಹಿತಿ ನೀಡಿದೆ.

ಆಗಸ್ಟ್ ಮೊದಲ ವಾರದಲ್ಲಿ ನೌಕೆಯು ಚಂದ್ರನ ಸುತ್ತ 5- 6 ಕಕ್ಷೆಯ ಪಥವನ್ನು ಪೂರ್ಣಗೊಳಿಸಲು ತಯಾರಿ ನಡೆಸಿದೆ. ಕ್ರಮೇಣ ಅದು 100 ಕಿಮೀ ಕಕ್ಷೆಯ ವರ್ತುಲಕ್ಕೆ ಪರಿವರ್ತನೆಯಾಗಲಿದೆ.

ಮುಂದಿನ ಹತ್ತು ದಿನಗಳಲ್ಲಿ ಚಂದ್ರನ ದಕ್ಷಿಣ ಧ್ರುವದ ಪ್ರದೇಶದ ಒಳಗೆ ಇಳಿಯಲು ಸೂಕ್ತವಾದ ಜಾಗವನ್ನು ನಿರ್ಧರಿಸಲಾಗುತ್ತದೆ. ಆಗಸ್ಟ್ 23ರ ಸಂಜೆ 5.47ರ ಸುಮಾರಿಗೆ ಚಂದ್ರಯಾನ ನೌಕೆಯ ಲ್ಯಾಂಡರ್ ಕಕ್ಷೆಯಿಂದ ಹೊರಬರುತ್ತದೆ ಮತ್ತು ಸುಗಮ ಲ್ಯಾಂಡಿಂಗ್‌ಗೆ ಪ್ರಯತ್ನ ಆರಂಭಿಸುತ್ತದೆ.

40 ದಿನಗಳ ಪಯಣದ ಬಳಿಕ ಬಾಹ್ಯಾಕಾಶ ನೌಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ನಿರೀಕ್ಷೆ ಇದೆ. ಇದು ಯಶಸ್ವಿಯಾದಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯುವ ನಾಲ್ಕನೇ ದೇಶವಾಗಿ ಭಾರತ ದಾಖಲೆಗೆ ಸೇರಲಿದೆ ಹಾಗೂ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಮೊಟ್ಟಮೊದಲ ದೇಶವಾಗಲಿದೆ.

ಚಂದ್ರನ ಮೇಲೆ ಸೂರ್ಯ ಕಿರಣಗಳು ಬೀಳುವಂತಹ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಚಂದ್ರನ ಲ್ಯಾಂಡಿಂಗ್ ಸಮಯದ ಮೇಲೆ ಇಸ್ರೋ ಗಮನ ಹರಿಸಿದೆ. ಅಗತ್ಯವಿದ್ದರೆ ಲ್ಯಾಂಡಿಂಗ್ ಅನ್ನು ಸೆಪ್ಟೆಂಬರ್‌ಗೆ ಮುಂದೂಡುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್ಯಾಪ್ ಎನ್‌ಕ್ರಿಪ್ಶನ್ ಎಂಬ ಭ್ರಮೆ; ಗೌಪ್ಯತೆಯ ಸೋಗಿನಲ್ಲಿ 85 ಕೋಟಿ ಭಾರತೀಯರ ಡೇಟಾ ಮಾರಾಟ?

ಭಾರತವು ವಾಟ್ಸ್ಯಾಪ್ ಗೆ ವಿಶ್ವದಲ್ಲೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ಸುಮಾರು 50...

ವಾಟ್ಸಾಪ್‌ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್‌’ ಸುರಕ್ಷತೆ ಕೇವಲ ನಾಟಕವೇ? ಮೆಟಾ ವಿರುದ್ಧ ಗಂಭೀರ ಆರೋಪ

ವಿಶ್ವದಾದ್ಯಂತ ಕೋಟ್ಯಂತರ ಜನರು ನಂಬಿ ಬಳಸುತ್ತಿರುವ ವಾಟ್ಸಾಪ್‌ನ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್’ ಸುರಕ್ಷತಾ...

ಆಂಧ್ರಪ್ರದೇಶ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಸರ್ಕಾರ ಚಿಂತನೆ​

ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ...

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಮಹಾ ಆಘಾತ: ಡಾರ್ಕ್ ವೆಬ್‌ನಲ್ಲಿ 1.75 ಕೋಟಿ ಜನರ ಖಾಸಗಿ ಮಾಹಿತಿ ಬಹಿರಂಗ?

ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರನ್ನು ಹೊಂದಿರುವ, ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣ...