‘ಮೆಟಾ’ ವೇದಿಕೆಗಳಲ್ಲಿ ಕನ್ನಡ ಸ್ವಯಂ ಅನುವಾದದ ವೇಳೆ ಭಾರೀ ಲೋಪ ಹಾಗೂ ನೈಜ ಅರ್ಥವೇ ನಾಶವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಫೇಸ್ಬುಕ್ ಮಾತೃ ಸಂಸ್ಥೆ ಮೆಟಾ ಕ್ಷಮೆಯಾಚಿಸಿದೆ. ಅನುವಾದದಲ್ಲಿ ಕೆಲಕಾಲ ದೋಷ ಕಂಡುಬರಲು ಕಾರಣವಾಗಿದ್ದ ಅಂಶಗಳನ್ನು ನಾವು ಸರಿಪಡಿಸಿದ್ದೇವೆ. ಇಂಥ ಘಟನೆ ನಡೆದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಮೆಟಾ ಹೇಳಿದೆ.
ಮೆಟಾ ಪ್ಲಾಟ್ಫಾರ್ಮ್ಗಳಲ್ಲಿ ಅನುವಾದ ದೋಷದ ಬಗ್ಗೆ ಸಿಎಂ ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ಕನ್ನಡದ ವಿಷಯಗಳ ದೋಷಪೂರಿತ ಅನುವಾದವು ಸತ್ಯಾಂಶಗಳನ್ನೇ ನಾಶಪಡುತ್ತಿದೆ. ಈ ವೇದಿಕೆಯ ಬಳಕೆದಾರರನ್ನು ತಪ್ಪುಗ್ರಹಿಕೆಗೆ ಕಾರಣವಾಗುತ್ತಿದೆ. ಇದು ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಅಸಮಾಧಾನ ಹೊರಹಾಕಿದ್ದರು.
ಇದನ್ನು ಓದಿದ್ದೀರಾ? ಒಲಿಂಪಿಕ್ಸ್ನಲ್ಲಿ ಕ್ರಿಕೆಟ್; ಟೂರ್ನಿಯ ವೇಳಾಪಟ್ಟಿ ಬಿಡುಗಡೆ
ಕನ್ನಡ ಅನುದಾದದಲ್ಲಿ ಆಗುತ್ತಿರುವ ಲೋಪ ತಕ್ಷಣವೇ ಸರಿಪಡಿಸುವಂತೆ ಒತ್ತಾಯಿಸಿ ನನ್ನ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮೆಟಾಗೆ ಔಪಚಾರಿಕವಾಗಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದರು. ಇತ್ತೀಚೆಗೆ ನಿಧನರಾದ ಹಿರಿಯ ನಟಿ ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ ಅಂತಿಮ ದರ್ಶನ ಪಡೆದ ವಿಚಾರವು ‘ಮೆಟಾ’ದಲ್ಲಿ ಇಂಗ್ಲಿಷ್ನಿಂದ ಕನ್ನಡಕ್ಕೆ ಆದ ಸ್ವಯಂ ಅನುವಾದ ಬಹಳ ಕೆಟ್ಟದಾಗಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದರು. ಅನುವಾದದ ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಮೆಟಾ ತಿಳಿಸಿದೆ.
ಫೇಸ್ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ‘ಸಿಎಂ ಕಚೇರಿಗೆ ಇಂಗ್ಲಿಷ್ ಅಧ್ಯಾಪಕರ ಅಗತ್ಯವಿದೆ’ ಎಂದಿತ್ತು. ಇದರೊಂದಿಗೆ ಲಗತ್ತಿಸಲಾದ ಸಿಎಂ ಖಾತೆಯ ಪೋಸ್ಟ್ ಸ್ಕ್ರೀನ್ ಶಾಟ್ ನಲ್ಲಿ “ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ನಿಧನರಾದರು. ಬಹುಭಾಷಾ ತಾರೆ, ಹಿರಿಯ ನಟಿ ಬಿ. ಸರೋಜಾದೇವಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು”ಎಂದಿತ್ತು.
Faulty auto-translation of Kannada content on @Meta platforms is distorting facts & misleading users. This is especially dangerous when it comes to official communications.
— CM of Karnataka (@CMofKarnataka) July 17, 2025
My Media Advisor Shri K V Prabhakar has formally written to Meta urging immediate correction.
Social… pic.twitter.com/fiCopgvt2C





