ಚಂದ್ರಗ್ರಹಣ |ಪ್ರಗತಿಪರ ಚಿಂತಕರಿಂದ ಬಾಗೇಪಲ್ಲಿಯಲ್ಲಿ ಊಟ ಮಾಡಿ ಮೌಢ್ಯತೆಗೆ ಸೆಡ್ಡು

Date:

ಬಾಗೇಪಲ್ಲಿ:-ಗ್ರಹಣ ಕಾಲದಲ್ಲಿ ಊಟ ಮಾಡಬಾರದು ಅನಿಷ್ಟ ಅನ್ನೋದು ಕೆಲವರ ನಂಬಿಕೆ. ಆದ್ರೆ, ಇದು ಮೂಢನಂಬಿಕೆ ಅನ್ನೋದು ಕೆಲವರ ವಾದ. ಹೀಗಾಗಿ ಬಾಗೇಪಲ್ಲಿ ಪಟ್ಟಣದಲ್ಲಿ ಚಂದ್ರ ಗ್ರಹಣ ವೇಳೆ ಚಿಕನ್ ಕಬಾಬ್ ತಿಂದು ಮೂಢನಂಬಿಕೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ಖಗ್ರಾಸ ಚಂದ್ರಗ್ರಹಣದ ಸಮಯದಲ್ಲಿ ಊಟ ಮಾಡಬಾರದು ಅನ್ನೋದು ಕೆಲವರ ನಂಬಿಕೆ. ಆದ್ರೆ, ಇದು ಮೌಢ್ಯ ಆಚರಣೆ ಅನ್ನೋದು ಕೆಲವು ಪ್ರಗತಿಪರರ ವಾದ. ಹೀಗಾಗಿ ಗೂಳೂರು ವೃತ್ತದಲ್ಲಿ ಬಳಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 100ಕ್ಕೂ ಹೆಚ್ಚು ಮಂದಿ ಪ್ರಗತಿಪರರು ಬಗೆ ಬಗೆಯ ಆಹಾರವನ್ನ ಸೇವಿಸಿ ಜಾಗೃತಿಯನ್ನ ಮೂಡಿಸಿದರು. ಚಂದ್ರ ಗ್ರಹಣ ವೇಳೆಯಲ್ಲಿಊಟ ತಿನ್ನಿಸುತ್ತಾ ಮೌಢ್ಯಗಳ ವಿರುದ್ಧ ಸೆಡ್ಡು ಹೊಡೆದರು.

ಈ ಸಂದರ್ಭದಲ್ಲಿ ಎ.ಜಿ.ಸುಧಾಕರ್ ಮಾತನಾಡಿ ತಡರಾತ್ರಿ ವಿಶ್ವಾದ್ಯಂತ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ದೇಶದಲ್ಲಿ ಪೂರ್ಣ ಚಂದ್ರ ರಕ್ತವರ್ಣಕ್ಕೆ ತಿರುಗಿ ಗೋಚರಿಸಿದ್ದಾನೆ. ಇದ್ರ ಮಧ್ಯೆ ಗ್ರಹಣ ಕಾಲದಲ್ಲಿ ಊಟ ಮಾಡಬಾರದು ಅನ್ನೋದು ಕೆಲವರ ನಂಬಿಕೆ. ಆದ್ರೆ, ಇದು ಮೂಢನಂಬಿಕೆ ಅನ್ನೋದು ಕೆಲವರ ವಾದ. ಹೀಗಾಗಿ ಊಟ ಸೇವಿಸುವ ಮೂಲಕ ಮೂಢನಂಬಿಕೆ ಬಗ್ಗೆ ಜಾಗೃತಿ ಮೂಡಿಸಿದ್ದೆವೆ ಎಂದು ಹೇಳಿದರು.

ಸಿಪಿಐಎಂ ಪಕ್ಷದ ಮುಖಂಡ ಚನ್ನರಾಯಪ್ಪ ಗ್ರಹಣ ಅನ್ನೋದು ಖಗೋಳದಲ್ಲಿ ನಡೆಯುವ ಅಪರೂಪದ ವಿಸ್ಮಯ. ನಭೋ ಮಂಡಲದಲ್ಲಿ ನಡೆಯುವ ನೆರಳಿನಾಟ. ಆದ್ರೆ, ವೈಜ್ಞಾನಿಕತೆಯ ಕಾಲದಲ್ಲೂ ಅವೈಜ್ಞಾನಿಕ ಆಚರಣೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಖಗ್ರಾಸ ಚಂದ್ರಗ್ರಹಣದ ವೇಳೆ ಕೆಲವು ಮೌಢ್ಯ ಆಚರಿಸೋದು ಸರ್ವೇಸಾಮಾನ್ಯ. ಇಂಥಹ ಮೌಢ್ಯತೆಯ ವಿರುದ್ಧ ಪ್ರಗತಿಪರರು ಕಬಾಬ್ ತಿನ್ನುವ ಮೂಲಕ ಸೆಡ್ಡು ಹೊಡೆದಿದೇವೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಬಾಗೇಪಲ್ಲಿ | ಕ್ರೀಡೆಗಳಲ್ಲಿ ಭಾಗವಹಿಸುವವರ ಜೀವನ ಹೆಚ್ಚು ಕ್ರಿಯಾಶೀಲವಾಗಿರುತ್ತದೆ: ಬಿಇಒ ವೆಂಕಟೇಶಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಬಾಬ್ ನೋಡಿದರೆ ನಾಲಿಗೆ ನೀರೂರಿಸುವಂತ ರುಚಿಕರ ಆಹಾರಗಳು. ಇದು ಗ್ರಹಣ ಕಾಲದಲ್ಲಿ ಪಟ್ಟಣದ ಗೂಳೂರು ವೃತ್ತದಲ್ಲಿ ಮುಂಭಾಗ ಕಂಡುಬಂದ ದೃಶ್ಯ.

ಈ ಸಂದರ್ಭದಲ್ಲಿ ವಾಲ್ಮೀಕಿ ಅಶ್ವತ್ಥಪ್ಪ,ನರಸಿಂಹ ಮೂರ್ತಿ,ಕೃಷ್ಣಪ್ಪ, ಮುಸ್ತಫಾ,ಮುನಿಸ್ವಾಮಿ ಡಿ.ಟಿ.ಮುನಿಸ್ವಾಮಿ,ಚಿನ್ನ ಕೈವಾರಮಯ್ಯ ಹಾಗೂ ದಲಿತ ಮುಖಂಡರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...