ದಾವಣಗೆರೆ | ಅನಾಮಧೇಯ ವಯೋವೃದ್ಧರನ್ನು ಆರೈಕೆ ಮಾಡಿ ಕುಟುಂಬಕ್ಕೆ ಒಪ್ಪಿಸಿದ ಪೊಲೀಸ್ ಸಿಬ್ಬಂದಿ

Date:

ದಾವಣಗೆರೆ ನಗರದ ಕೈಗಾರಿಕಾ ಪ್ರದೇಶದ ಬೂತಪ್ಪನ ದೇವಸ್ಥಾನದ ಬಳಿ ಕಳೆದ ಮೂರು ದಿನಗಳಿಂದ ಅನಾಥರಂತೆ ತಂಗಿದ್ದ ಅನಾಮಧೇಯ ಸುಮಾರು 76 ವರ್ಷದ ವಯೋವೃದ್ಧ,ನನ್ನು ಆರೈಕೆ ಮಾಡಿ, ಸಂಬಂಧಿಗಳನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ಅವರ ಕುಟುಂಬಕ್ಕೆ ಒಪ್ಪಿಸಿದ ಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮಾರ್ಚ್ 2 ರಂದು ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬಂದ ದೂರಿನ ಮೇರೆಗೆ 112 ಸಿಬ್ಬಂದಿಯಾದ ಗುರುಮೂರ್ತಿ ಹಾಗೂ ರುದ್ರೇಶ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಅಲ್ಲಿ ಇದ್ದ ವಯೋವೃದ್ಧರು ತಮ್ಮ ಹೆಸರು ಪೀತಾಂಬರಪ್ಪ ವಿಭೂತಿ ತಂದೆ ನಿಂಗಪ್ಪ ಎಂದು ಮಾತ್ರ ತಿಳಿಸಿ, ಊರು ಹಾಗೂ ಕುಟುಂಬದ ಬಗ್ಗೆ ಮಾಹಿತಿ ನೀಡಲು ಸಾಧ್ಯವಾಗಿರಲಿಲ್ಲ.

ನಂತರ ಅವರನ್ನು ದಾವಣಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಜನಶಕ್ತಿ ಸ್ವಯಂಸೇವಾ ಸಂಸ್ಥೆಗೆ ಸುರಕ್ಷಿತವಾಗಿ ಒಪ್ಪಿಸಲಾಯಿತು. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯ ಸಿಪಿಐ ಶಿಲ್ಪ ವೈ ಎಸ್ ಅವರು ರಾಣೇಬೆನ್ನೂರು ಪೊಲೀಸರಿಗೆ ಮಾಹಿತಿ ನೀಡಿದ್ದು. ಬಳಿಕ ರಾಣೇಬೆನ್ನೂರು ಠಾಣೆಯ ಪೊಲೀಸ್ ಸಿಬ್ಬಂದಿ ಪೂಜಾರ್ ಮಾಹಿತಿ ಸಂಗ್ರಹಿಸಿ, ವೃದ್ಧರ ಮಗಳು ಶಿಲ್ಪ (35) ಅವರನ್ನು ಪತ್ತೆಹಚ್ಚಿ ಠಾಣೆಗೆ ಕರೆಸಿ ಪರಿಶೀಲನೆ ನಡೆಸಿ ವೃದ್ಧರನ್ನು ಅವರ ಅಭಿರಕ್ಷೆಗೆ ಒಪ್ಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ದಾವಣಗೆರೆ ಜನತೆಯ ನಿರೀಕ್ಷೆಗಳೇನು? ಮುಖಂಡರು ಹೇಳುವುದೇನು?

ಮೂರು ದಿನಗಳಿಂದ ಅನಾಮಧೇಯವಾಗಿ ಇದ್ದ ವಯೋವೃದ್ಧರನ್ನು ಪತ್ತೆಹಚ್ಚಿ ಕುಟುಂಬಕ್ಕೆ ಸೇರಿಸುವಲ್ಲಿ ಯಶಸ್ವಿಯಾದ ವಿದ್ಯಾನಗರ ಠಾಣೆಯ ಸಿಪಿಐ ಶಿಲ್ಪ ವೈ ಎಸ್, 112 ಸಿಬ್ಬಂದಿ ಗುರುಮೂರ್ತಿ, ರುದ್ರೇಶ್ ಹಾಗೂ ರಾಣೇಬೆನ್ನೂರು ಪೊಲೀಸ್ ಸಿಬ್ಬಂದಿ ಪೂಜಾರ್ ಪೊಲೀಸ್ ಅಧೀಕ್ಷಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...

ಜಿ ರಾಮ್‌ ಜಿ ಅಲ್ಲಿ ʼರಾಮʼನ ಹೆಸರಿದ್ದರೆ ಆರ್‌ಎಸ್‌ಎಸ್‌ ಕಚೇರಿ ಕಸ ಗುಡಿಸುತ್ತೇನೆ: ವಿ.ಎಸ್‌ ಉಗ್ರಪ್ಪ

“ಗಾಂಧಿ ಮತ್ತು ನೆಹರೂ ವಿಚಾರಗಳ ಮೇಲೆ ನೇರವಾಗಿ ದಾಳಿ ನಡೆಯುತ್ತಿದೆ. ಮನರೇಗಾದಲ್ಲಿದ್ದ...