ಸಂಸತ್ ಭವನ ಉದ್ಘಾಟನೆ ರಾಷ್ಟ್ರಪತಿ ಮಾಡಬೇಕು, ಪ್ರಧಾನಿಯಲ್ಲ; ವಿಪಕ್ಷಗಳ ಟೀಕೆ

Date:

ಹೊಸ ಸಂಸತ್ ಭವನ ನಿರ್ಮಾಣ ಪ್ರಧಾನಿಯವರ ಖಾಸಗಿ ಸ್ನೇಹಿತರ ಹಣದಿಂದ ನಡೆದಿಲ್ಲ, ಇದು ಸಾರ್ವಜನಿಕ ಹಣ ಬಳಸಿದ ಸರ್ಕಾರಿ ಯೋಜನೆಯಾಗಿರುವ ಕಾರಣ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಘನತೆ ಉಳಿಸಿಕೊಳ್ಳಬೇಕು ಎಂದು ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸಿವೆ.

ದೇಶದ ಹೊಸ ಸಂಸತ್ ಭವನ ಪ್ರಧಾನ ಮಂತ್ರಿ ಅಥವಾ ಬಿಜೆಪಿಯ ಸ್ವಂತ ಯೋಜನೆಯಲ್ಲ, ಅದು ಸರ್ಕಾರದ ಯೋಜನೆಯಾಗಿರುವ ಕಾರಣ ರಾಷ್ಟ್ರಪತಿಯವರೇ ಅದನ್ನು ಉದ್ಘಾಟಿಸಬೇಕು ಎನ್ನುವ ವಿಪಕ್ಷಗಳ ವಾದವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ (ಮೇ 21) ಬೆಂಬಲಿಸಿದ್ದಾರೆ.

ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಬಗ್ಗೆ ಟ್ವಿಟರ್‌ನಲ್ಲಿ ಟೀಕಿಸಿರುವ ರಾಹುಲ್ ಗಾಂಧಿ, “ಹೊಸ ಸಂಸತ್ ಭವನ ಉದ್ಘಾಟನೆ ರಾಷ್ಟ್ರಪತಿಯವರು ಮಾಡಬೇಕೇ ವಿನಾ ಪ್ರಧಾನಿಯಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ನರೇಂದ್ರ ಮೋದಿ ಮೇ 28ರಂದು ಹೊಸ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ಲೋಕಸಭೆಯ ಕಾರ್ಯಾಲಯ ಗುರುವಾರ ಘೋಷಿಸಿತ್ತು. “ಆತ್ಮನಿರ್ಭರ ಭಾರತದ ನಿರ್ಮಾಣವನ್ನು ಸೂಚಿಸುವ ಹೊಸ ಸಂಸತ್ ಭವನದ ನಿರ್ಮಾಣ ಪೂರ್ಣಗೊಂಡಿದೆ” ಎಂದು ಕಾರ್ಯಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು.

ವಿವಾದಾತ್ಮಕ ಹಿಂದುತ್ವವಾದಿ ನಾಯಕ ವಿ ಡಿ ಸಾವರ್ಕರ್ ಜನ್ಮದಿನಾಚಣೆ ಅಂಗವಾಗಿ ಮೇ 28ರಂದು ಬಿಜೆಪಿ ಸರ್ಕಾರ ಸಂಸತ್ ಭವನವನ್ನು ಉದ್ಘಾಟಿಸುತ್ತಿರುವುದು ದೇಶದ ಸಂಸ್ಥಾಪಕರಿಗೆ ತೋರಿದ ಅತಿದೊಡ್ಡ ಅಗೌರವ ಎಂದು ಕಾಂಗ್ರೆಸ್ ಇದಕ್ಕೆ ಮೊದಲು ಟೀಕಿಸಿತ್ತು. “ನಮ್ಮ ದೇಶದ ಸಂಸ್ಥಾಪಕರಿಗೆ ದೊಡ್ಡ ಅವಹೇಳನವಾಗಿದೆ. ಗಾಂಧಿ, ನೆಹರು, ಪಟೇಲ್, ಬೋಸ್ ಮೊದಲಾಗಿ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ತಿರಸ್ಕರಿಸಲಾಗಿದೆ. ಡಾ ಅಂಬೇಡ್ಕರ್‌ ಅವರನ್ನು ಸ್ಪಷ್ಟವಾಗಿ ನಿರಾಕರಿಸಲಾಗಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ ಮಾಡಿದ್ದರು.

ಇತರ ವಿಪಕ್ಷಗಳೂ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರಿಗೆ ಆಹ್ವಾನ ನೀಡದೆ ಅವಹೇಳನ ಮಾಡಿರುವ ಬಗ್ಗೆ ಟೀಕಿಸಿದ್ದವು. ಆರ್‌ಜೆಡಿ ನಾಯಕ ಮನೋಜ್ ಕುಮಾರ್ ಟ್ವೀಟ್ ಮಾಡಿ, “ಗೌರವಾನ್ವಿತ ರಾಷ್ಟ್ರಪತಿಯವರು ಸಂಸದ್ ಭವನ ಉದ್ಘಾಟಿಸಬೇಕಲ್ಲವೆ? ಅದಕ್ಕಿಂತ ಹೆಚ್ಚೇನನ್ನೂ ಹೇಳಲು ಬಯಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ?: ಕೇಜ್ರಿವಾಲ್ ನಿಯಂತ್ರಿಸಲು ‘ಸುಪ್ರೀಂ’ ಆದೇಶ ಧಿಕ್ಕರಿಸಿ ಸುಗ್ರೀವಾಜ್ಞೆ ಹೊರಡಿಸಿದ ಮೋದಿ ಸರ್ಕಾರ

ಸಿಪಿಐ ನಾಯಕ ಡಿ ರಾಜ ಅವರೂ, “ಸ್ವಯಂ ಇಮೇಜ್ ಕುರಿತ ಹುಚ್ಚು, ಕ್ಯಾಮರಾಗಳ ಮುಂದೆ ಪೋಸ್ ಕೊಡುವಾಗ ಘನತೆ ಬಿಡುವುದು ಮತ್ತು ನಿಯಮಗಳನ್ನು ತೊರೆಯುವುದು ಮೋದಿಯವರಿಗೆ ಹೊಸತೇನಲ್ಲ. ಪ್ರಧಾನಿ ರಾಷ್ಟ್ರದ ಶಾಸಕಾಂಗದ ಮುಖ್ಯಸ್ಥರು ಮತ್ತು ಸಂಸತ್ತು ಶಾಸನಸಭೆಯ ಅಂಗ. ಹೀಗಿರುವಾಗ ರಾಷ್ಟ್ರದ ಮುಖ್ಯಸ್ಥರಾಗಿರುವ ದ್ರೌಪದಿ ಮುರ್ಮು ಅವರು ಹೊಸ ಸಂಸತ್ತನ್ನು ಉದ್ಘಾಟಿಸುವುದು ಸೂಕ್ತವೆನಿಸುತ್ತಿತ್ತು” ಎಂದು ಟ್ವೀಟ್ ಮಾಡಿದ್ದರು.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವಾಸಿ ಅವರೂ ಟ್ವೀಟ್ ಮಾಡಿ, “ಪ್ರಧಾನಿ ಶಾಸನಸಭೆಯ ಮುಖ್ಯಸ್ಥರೇ ವಿನಾ ಆಡಳಿತವಲ್ಲ. ನಮ್ಮಲ್ಲಿ ಅಧಿಕಾರದ ಸ್ಪಷ್ಟ ಪ್ರತ್ಯೇಕತೆಯಿದೆ. ಗೌರವಾನ್ವಿತ ಸ್ಪೀಕರ್ ಮತ್ತು ರಾಜ್ಯಸಭೆಯ ಅಧ್ಯಕ್ಷರು ಸಂಸತ್ ಭವನ ಉದ್ಘಾಟಿಸಬೇಕು. ಇದನ್ನು ಸಾರ್ವಜನಿಕ ಹಣದಿಂದ ನಿರ್ಮಿಸಲಾಗಿದೆ. ಪ್ರಧಾನಿಯವರು ತಮ್ಮ ಸ್ನೇಹಿತರ ಖಾಸಗಿ ಹಣದಿಂದ ಸಂಸತ್ ಭವನ ನಿರ್ಮಿಸಿದಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...