ಕಾಂಗ್ರೆಸ್ ಹಿರಿಯ ಮುಖಂಡಜಿ.ವಿ.ಬಾಬುರೆಡ್ಡಿ ಅಭಿಮಾನಿಗಳಿಂದ ಅನ್ನದಾನ ಹಾಗೂ ನುಡಿನಮನ ಕಾರ್ಯಕ್ರಮ

Date:

ಬಾಗೇಪಲ್ಲಿ:- ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ನ ಹಿರಿಯ ಮುಖಂಡ ಜಿ.ವಿ.ಬಾಬುರೆಡ್ಡಿ ಅವರಿಗೆ ತಾಲ್ಲೂಕು ಕಾಂಗ್ರೆಸ್ ಪಕ್ಷ ಹಾಗೂ ಜಿ.ವಿ.ಬಾಬುರೆಡ್ಡಿ ಅಭಿಮಾನಿಗಳಿಂದ ಅನ್ನದಾನ ಹಾಗೂ ನುಡಿನಮನ ಕಾರ್ಯಕ್ರಮ ಡಿ.ವಿ.ಜಿ.ರಸ್ತೆಯ ಪುರಸಭೆ ಮುಂದೆ ಆಯೋಜಿಸಲಾಗಿತ್ತು.

ಪುರಸಭೆ ಮುಂದೆ ಜಿ.ವಿ.ಬಾಬುರೆಡ್ಡಿ ನುಡಿನಮನ ಕಾರ್ಯಕ್ರಮದಲ್ಲಿ ಅಗಲಿದ ನಾಯಕ ಜಿ.ವಿ.ಬಾಬುರೆಡ್ಡಿ ಅವರ ಭಾವಚಿತ್ರಕ್ಕೆ ಗೌರಿಬಿದನೂರು ತಾಲ್ಲೂಕಿನ ಮಾಜಿ ಶಾಸಕ ಶಿವಶಂಕರ ರೆಡ್ಡಿ, ರಾಪ್ತಾಡು ಕ್ಷೇತ್ರದ ಮಾಜಿ ಶಾಸಕ ತೋಪುದುರ್ತಿ ಕೆ.ಪ್ರಕಾಶ್‌ರೆಡ್ಡಿ,ಪುರಸಭೆ ಅದ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷೆ ಸುಜಾತ ನರಸಿಂಹ ನಾಯ್ಡು, ನರಸಿಂಹ ನಾಯ್ಡು,ಪ್ರಭಾಕರ ರೆಡ್ಡಿ ಪುರಸಭೆ ಸದಸ್ಯರಾದ ಶ್ರೀನಿವಾಸ್ ರೆಡ್ಡಿ, ಜಬೀವುಲಾ, ಕೆ.ಟಿ.ವೀರಾಂಜನೇಯಲು,ಕೆ.ವಿ.ಟ್ರಸ್ಟ್ ನಾಗಭೂಷಣ, ರಾಮಕೃಷ್ಣಪ್ಪ ಹಾಗೂ ಇತರೆ ಮುಖಂಡರು ಫುಷ್ಪಾರ್ಚನೆ ಮಾಡುವ ಮೂಲಕ ಶೃದ್ದಾಂಜಲಿ ಸಲ್ಲಿಸಿದರು.

ಈ ವೇಳೆ ಗೌರಿಬಿದನೂರು ತಾಲೂಕಿನ ಮಾಜಿ ಶಾಸಕ ಶಿವಶಂಕರ ರೆಡ್ಡಿ ಮಾತನಾಡಿ ಬಾಗೇಪಲ್ಲಿ ತಾಲೂಕಿನಲ್ಲಿ ಅನೇಕ ರಂಗಗಳಲ್ಲಿ ಉತ್ತಮ ಸೇವೆ ಮಾಡಿರುವ ಬಾಬು ರೆಡ್ಡಿ ಅವರು ಅಪರೂಪದ ರಾಜಕಾರಣಿ, ಬಹುಶಃ ಎಲ್ಲರ ಜೊತೆ ಬೆರೆಯುವ ಹಾಗೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಅಭಿವೃದ್ಧಿ ಹೆಚ್ಚು ಹೊತ್ತನ್ನು ನೀಡಿದ್ದಾರೆ ವಿಶೇಷವಾಗಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಅವಿಭಾಜಿತ ಕೋಲಾರ ಜಿಲ್ಲೆಯು ಹೋರಾಟದ ಕ್ಷೇತ್ರವಾಗಿದೆ ಜಿ. ವಿ ಶ್ರೀರಾಮರೆಡ್ಡಿ, ಅಪಿಸ್ವಾಮಿ ರೆಡ್ಡಿ ಹಾಗೂ ಜಿ.ವಿ.ಬಾಬುರೆಡ್ಡಿ ಹೋರಾಟಗಳ ಮೂಲಕವೇ ಬೆಳಕಿಗೆ ಬಂದಿರುವುದು ನಾವು ನೋಡಬಹುದು
ಕಾಂಗ್ರೆನ ಹಿರಿಯ ಮುಖಂಡರಾದ ಆರ್.ಎಲ್.ಜಾಲಪ್ಪ, ವಿ.ಕೃಷ್ಣರಾವ್, ಬಿ.ಎನ್.ವೆಂಕಟಸ್ವಾಮಿ ಅವರ ಹಾಗೂ ನನ್ನ ಅವರ ಒಡನಾಡಿಯಾಗಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದರು. ಪಟ್ಟಣದ ಶಿರಿಡಿಸಾಯಿ ಸೇವಾನಾಥ್ ಟ್ರಸ್ಟ್ನ ಅಧ್ಯಕ್ಷರಾಗಿದ್ದರು ಎಂದು ಹೇಳಿದರು.

ಎತ್ತಿನಹೊಳೆ ನೀರು ಗೋದಾವರಿಯಿಂದ 18 ಟಿಎಂಸಿ ಕರ್ನಾಟಕಕ್ಕೆ ನೀಡಬೇಕು ಎಂದು ಅಗ್ರಿಮೆಂಟ್ ಇದೆ ಆದರೆ ಈಗ ಕೃಷ್ಣಾ ನದಿಗೆ ಗೋದಾವರಿ ನದಿಗೆ ಸೇರಿಸಲಾಗಿದೆ ಆದ್ದರಿಂದ ಎರಡು ರಾಜ್ಯಗಳ ಒಪ್ಪಂದ ಹಾಗೂ ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನೀರನ್ನು ತರಬೇಕಾಗಿದೆ. ಈ ಭಾಗಕ್ಕೆ ನೀರು ತರಳು ಪ್ರಯತ್ನ ಮಾಡುತ್ತಿದ್ದಾರೆ ಯಾವುದೇ ಪಕ್ಷದ ನಾಯಕರಾಗಿರಬಹುದು ಎಲ್ಲರೂ ಸೇರಿ ಪ್ರಯತ್ನ ಪಡುತ್ತಿದ್ದಾರೆ ಏನು ರಾಜ್ಯಗಳ ಒಂದು ಒಪ್ಪಂದದಂತೆ 15 ಟಿಎಂಸಿಯಲ್ಲಿ ಅಥವಾ 5 ಟಿಎಂಸಿ ಇನ್ನು ಹೆಚ್ಚಿಗೆ ಗೌರಿಬಿದನೂರು ಬಾಗೇಪಲ್ಲಿ ಈ ಭಾಗಗಳಿಗೆ ನೀರು ಬಂದರೆ ರೈತರಿಗೆ ಅನುಕೂಲವಾಗುತ್ತದೆ. ರಾಜಕೀಯ ಇಚ್ಛಾಸಕ್ತಿ ಇರಬೇಕು ಹಾಗೂ ಪಕ್ಷಾತೀತವಾಗಿ ಎಲ್ಲರ ಪ್ರಯತ್ನ ಮಾಡಿದರೇ ನೀರನ್ನು ತರಬಹುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಈ ವೇಳೆ ರಾಪ್ತಾಡು ಕ್ಷೇತ್ರದ ಮಾಜಿ ಶಾಸಕ ತೋಪುದುರ್ತಿ ಕೆ.ಪ್ರಕಾಶ್‌ರೆಡ್ಡಿ ಮಾತನಾಡಿ ಈ ಭಾಗದ ಜನರಿಗೋಸ್ಕರ ಕೆಲಸವನ್ನು ಮಾಡಿದಂತಹ ವ್ಯಕ್ತಿ ರಾಜಕೀಯವಾಗಿ ಹಾಗೂ ಪ್ರತಿಯೊಬ್ಬರನ್ನು ಸಹ ಗೌರವದಿಂದ ನೋಡುತ್ತಿದ್ದರು. ಜಿ.ವಿ ಬಾಬು ರೆಡ್ಡಿ ರವರು ಬಾಗೇಪಲ್ಲಿ ಪಟ್ಟಣದಲ್ಲಿ ಇಲ್ಲೇ ಇದ್ದು ಓದಿ ಹಲವಾರು ಪರಿಚಯ ವ್ಯಕ್ತಿಗಳು ಹಾಗೂ ಸ್ನೇಹ ಸಂಬಂಧವನ್ನು ಬೆಳೆಸಿದ್ದಾರೆ ಅದೇ ರೀತಿಯಲ್ಲಿ ನಾನು ಸಹ ಎಲ್ಲರ ಜೊತೆ ಸ್ನೇಹ ಸಂಬಂಧದಿಂದ ಇರುತ್ತೇನೆ ಎಂದು ತಿಳಿಸಿದರು. ಎತ್ತಿನಹೊಳೆ ನೀರು ಬರಲು ಒಬ್ಬ ವ್ಯಕ್ತಿಯ ಕೈಯಲ್ಲಿಲ್ಲ ಒಟ್ಟಾರೆ ಸರ್ಕಾರದ ಹಾಗೂ ಅನೇಕ ವ್ಯಕ್ತಿಗಳು ಕೆಲಸ ಮಾಡಲಾಗುತ್ತಿದೆ ಬಾಗೆಪಲ್ಲಿ ಶಾಸಕ ಮೂರು ಬಾರಿ ಗೆದ್ದು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ ಕರ್ನಾಟಕ ಹಾಗೂ ಆಂದ್ರಪ್ರದೇಶದ ಹಾಗೂ ಕೇಂದ್ರ ಸರ್ಕಾರ ನೇತೃತ್ವದಲ್ಲಿ ಕೃಷ್ಣಾ ನದಿ ನೀರು ಹರಿಸಲು ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ…? ಹೊನ್ನೇನಹಳ್ಳಿ ಪಿಡಿಒ ಹರೀಶ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಕೆ.ಆರ್.ಎಸ್ ಸಂಘಟನೆಯಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅದ್ಯಕ್ಷ ಕೇಶವರೆಡ್ಡಿ,ಎಡಿ.ಎಟಿ.ಎಸ್.ರಾಮ ಎಸ್ಟೀವ್,ಮಾಚನಪಲ್ಲಿ ನಾರಾಯಣ ಸ್ವಾಮಿ, ಕೊತ್ತಕೋಟೆ ನಾಗರಾಜು, ಮಲ್ಲಿಕಾರ್ಜುನ, ಹಾಗೂ ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...