ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ ಅವಕಾಶ ಕೊಡಿ: ಡಾ ಕೆ ನಾಗರಾಜ್ ಮನವಿ

Date:

ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ, ಜಯಶೀಲರನ್ನಾಗಿ ಮಾಡಿದರೆ ಶಿಕ್ಷಕರು ಮತ್ತು ಪದವೀಧರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ಧ್ವನಿಯಾಗಿ ಕೆಲಸ ಮಾಡುತ್ತೇನೆ ಒಂದು ಅವಕಾಶ ನೀಡಿ ಎಂದು ಜೆಡಿಯು ಪಕ್ಷದ ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ.ನಾಗರಾಜ್ ಮನವಿ ಮಾಡಿದರು.

ಜಿಲ್ಲೆಯಾದ್ಯಂತ ಕಾಲೇಜುಗಳಿಗೆ ಶನಿವಾರ ಭೇಟಿ ನೀಡಿ ಆಗ್ನೇಯ ಪದವೀಧರ ಚುನಾವಣೆಗೆ ಸಂಬಂಧಿಸಿದಂತೆ ನೋಂದಣಿ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು ಈ ಭಾಗದಲ್ಲಿ ಸಮಸ್ಯೆಗಳು ಹೆಚ್ಚಾಗಿವೆ ವಿಧಾನಸೌಧದಲ್ಲಿ ಪದವೀಧರ ಸಮುದಾಯವು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಮರ್ಥರ ಕೊರತೆ ಇದೆ ಈ ಬಾರಿ ನನಗೆ ಅವಕಾಶ ನೀಡಿ ಬೆಂಬಲಿಸಿದರೆ ನಿಮ್ಮಗಳ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಸುಮಾರು 15 ವರ್ಷಗಳಿಂದ ಶಿಕ್ಷಕರು ಮತ್ತು ಪದವೀಧರರ ಅನೇಕ ಸಮಸ್ಯೆಗಳ ಧ್ವನಿಯಾಗಿ ಬಂದಿದ್ದೇನೆ ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರ ಹೋರಾಟದಲ್ಲಿ ಜೊತೆಯಾಗಿದ್ದೇನೆ ರಾಜ್ಯದಲ್ಲಿ ಸುಮಾರು 2.80 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಪದವೀಧರರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ದುಡಿಯುವ ಕೈಗಳಿಗೆ ಉದ್ಯೋಗ ಇಲ್ಲದಂತಾಗಿದೆ. ಇದನ್ನು ಹೋಗಲಾಡಿಸಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಜೆಡಿಯು ಪಕ್ಷದ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಿದರೆ ಖಂಡಿತವಾಗಿ ನಿಮ್ಮ ಋಣವನ್ನು ತೀರಿಸುವ ಕೆಲಸವನ್ನು ಮಾಡುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ 2026 ರ ಪದವೀಧರ ಚುನಾವಣೆಯಲ್ಲಿ ಮತ ಚಲಾಯಿಸಬೇಕಾದರೆ ಪದವಿ ಪೂರ್ಣಗೊಳಿಸಿರುವ ಪದವೀಧರರು ತಮ್ಮ ವ್ಯಾಪ್ತಿಯಲ್ಲಿನ ತಹಶಿಲ್ದಾರ್ ಕಚೇರಿಯ ಚುನಾವಣಾ ಶಾಖೆಯಲ್ಲಿ ಅರ್ಜಿ ನಮೂನೆ ಪಡೆದು ಮತದಾರರಾಗಿ ನೋಂದಣಿ ಮಾಡಿಸಿಕೊಳ್ಳಬೇಕು.ಇದಕ್ಕಾಗಿ ಜೆಡಿಯು ಪಕ್ಷದ ವತಿಯಿಂದ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಪ್ರತಿಯೊಬ್ಬ ಪದವೀಧರರು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಎರಡು ಫೋಟೋ ಜೊತೆಗೆ ಗೆಜಿಟೆಡ್ ಅಧಿಕಾರಿಯ ದೃಢೀಕರಣ ಪ್ರತಿಗಳೊಂದಿಗೆ ನ.6 2025ರ ಒಳಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..? ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಜನ ಸ್ಪಂದನ ಕಾರ್ಯಕ್ರಮ

ಈ ಸಂದರ್ಭದಲ್ಲಿ ಡಾ.ಸಹನಾ, ಗ್ರಾಪಂ ಮಾಜಿ ಸದಸ್ಯ ನಂಜುಂಡಪ್ಪ, ಮಾಜಿ ನಗರಸಭಾ ಸದಸ್ಯ ಸುಬ್ರಮಣಿ, ನಿವೃತ್ತ ಮುಖ್ಯೋಪಾಧ್ಯಾಯ ದೊಡ್ಡ ವಿರಯ್ಯ, ಜೆಡಿಯು ಯುವ ಘಟಕದ ಜಿಲ್ಲಾ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಯಾರಭ್, ಮುಖಂಡರಾದ ನಾಗರಾಜ್, ಶೈಲೇಶ್, ಟಿ.ಸಿ ಮುನಿರಾಜು, ಲೋಹಿತ್ ಗೌಡ, ಮಹೇಶ್ ಗೌಡ, ಚೇತನ್ ಗೌಡ, ಡಾ.ಚೇತನ್, ಹರೀಶ್ ಗೌಡ, ಮೋಹನ್ ಗೌಡ, ಭಾರತಿ, ಸ್ವಾತಿ, ಸಂಜನ, ವಕೀಲರಾದ ಜಗನ್ನಾಥ್, ಹರೀಶ್ ಗೌಡ, ಶಿವಣ್ಣ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...