ಗುಜರಾತ್‌ | ಗರ್ಬಾ ನೃತ್ಯ: 24 ಗಂಟೆಗಳಲ್ಲಿ 10 ಮಂದಿ ಹೃದಯಾಘಾತದಿಂದ ಸಾವು; ಹದಿಹರೆಯದವರೇ ಹೆಚ್ಚು!

Date:

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ನವರಾತ್ರಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪ್ರದರ್ಶಿಸಲಾಗುವ ಗರ್ಬಾ ನೃತ್ಯದ ವೇಳೆ ಕನಿಷ್ಠ 10 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತಪಟ್ಟವರ ಪೈಕಿ ತರುಣರಿಂದ ಹಿಡಿದು ಮಧ್ಯ ವಯಸ್ಸಿನವರೇ ಇದರಲ್ಲಿ ಹೆಚ್ಚಿನವರು ಎಂದು ವರದಿಯಾಗಿದೆ.

ಬರೋಡಾದ ದಭೋಯಿಯಲ್ಲಿ 13 ವರ್ಷದ ಬಾಲಕ ಅಸುನೀಗಿದ್ದರೆ, ಅಹಮದಾಬಾದ್‌ನಲ್ಲಿ ಶುಕ್ರವಾರ 24 ವರ್ಷದ ಯುವಕ ಗರ್ಬಾ ಪ್ರದರ್ಶಿಸುವಾಗ ಹಠಾತ್ತನೆ ಕುಸಿದು ಬಿದ್ದಿದ್ದಾನೆ. ಅದೇ ರೀತಿ ಕಪಾಡ್ವಂಜ್‌ನಲ್ಲಿ 17 ವರ್ಷದ ಬಾಲಕ ಕೂಡ ಗರ್ಬಾ ನರ್ತನದ ವೇಳೆ ಕುಸಿದುಬಿದ್ದು ಸಾವಿಗೀಡಾಗಿದ್ದಾನೆ. ಹಿಂದಿನ ದಿನ ಕೂಡ ರಾಜ್ಯದ ವಿವಿಧೆಡೆ ಇದೇ ರೀತಿಯ ಘಟನೆಗಳು ವರದಿಯಾಗಿರುವುದಾಗಿ ಗುಜರಾತ್‌ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

heart attack

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವರಾತ್ರಿಯ ಮೊದಲ ಆರು ದಿನಗಳಲ್ಲಿ 108 ತುರ್ತು ಆಂಬುಲೆನ್ಸ್ ಸೇವೆಗೆ ಹೃದಯ ಸಂಬಂಧಿ ಸಮಸ್ಯೆಗಳಿಗಾಗಿ 521 ಕರೆಗಳು ಬಂದಿದ್ದವು. ಅಲ್ಲದೆ, ಉಸಿರಾಟ ಸಮಸ್ಯೆ ಕುರಿತು 609 ಕರೆಗಳು ಬಂದಿದ್ದವು. ಈ ಕರೆಗಳು ಗರ್ಬಾ ನೃತ್ಯ ನಡೆಯುವ ಸಮಯವಾಗಿರುವ ಸಂಜೆ 6 ರಿಂದ ನಸುಕಿನ 2 ಗಂಟೆ ನಡುವೆ ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಈ ಆಘಾತಕಾರಿ ಬೆಳವಣಿಗೆಯು ಗುಜರಾತ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗರ್ಬಾ ನೃತ್ಯ ಆಯೋಜಕರಿಗೆ ಸೂಚನೆ ನೀಡಿದೆ.

ಗರ್ಬಾ ನಡೆಯುವ ಸ್ಥಳಗಳ ಸಮೀಪದಲ್ಲಿನ ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ (ಸಿಜಿಎಚ್) ರಾಜ್ಯ ಸರ್ಕಾರ ಸೂಚನೆ ಹೊರಡಿಸಿದ್ದು, ಹೈ ಅಲರ್ಟ್‌ನಿಂದ ಇರುವಂತೆ ಮನವಿ ಮಾಡಿದೆ.

ಯಾವುದೇ ತುರ್ತು ಸನ್ನಿವೇಶ ಎದುರಾದರೂ, ರೋಗಿಗಳನ್ನು ಕಾರ್ಯಕ್ರಮ ಸ್ಥಳದಿಂದ ತ್ವರಿತವಾಗಿ ಕರೆದುಕೊಂಡು ಹೋಗಲು ಆಂಬುಲೆನ್ಸ್‌ಗಳು ಸುಗಮವಾಗಿ ಬರಲು ಅನುಕೂಲವಾಗುವಂತೆ ಕಾರಿಡಾರ್‌ಗಳನ್ನು ನಿರ್ಮಿಸಲು ಗರ್ಬಾ ಆಯೋಜಕರಿಗೆ ಹಾಗೂ ಪೊಲೀಸ್ ಇಲಾಖೆಗೂ ಸೂಚಿಸಿದೆ.

ಈ ನಡುವೆ ಗರ್ಬಾ ಆಯೋಜಕರು ನೃತ್ಯ ಪ್ರದರ್ಶನಗಳಲ್ಲಿ ಭಾಗಿಯಾಗುವ ಎಲ್ಲರ ಸುರಕ್ಷತೆಗಾಗಿ ವೈದ್ಯರು ಹಾಗೂ ಆಂಬುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸುತ್ತಿದ್ದಾರೆ. ತಮ್ಮ ಸಿಬ್ಬಂದಿಗೆ ಸಿಪಿಆರ್ ನೀಡುವ ತರಬೇತಿ ಕೊಡಿಸುವಂತೆ ಹಾಗೂ ಭಾಗಿಯಾಗುವವರಿಗೆ ಸಾಕಷ್ಟು ನೀರು ಲಭ್ಯವಾಗುವಂತೆ ನೋಡಿಕೊಳ್ಳಲು ಆಯೋಜಕರಿಗೆ ಸೂಚನೆ ನೀಡಲಾಗಿದೆ. ಈ ವರ್ಷದ ನವರಾತ್ರಿ ಹಬ್ಬ ಆರಂಭಕ್ಕೂ ಮುನ್ನ, ಗರ್ಬಾ ಅಭ್ಯಾಸದ ವೇಳೆ ಗುಜರಾತ್‌ನಲ್ಲಿ ಮೂವರು ಹೃದಯಾಘಾತದಿಂದ ಮತಪಟ್ಟಿದ್ದ ಬಗ್ಗೆಯೂ ವರದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...