ಉದ್ಯಮಿ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ: ತೆಲಂಗಾಣ ಮೂಲದ 19 ವರ್ಷದ ಗಣೇಶ್ ಬಂಧನ

Date:

ರಿಲಾಯನ್ಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ, ದೇಶದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ಭೇದಿಸಿರುವ ಮುಂಬೈ ಪೊಲೀಸರು, ತೆಲಂಗಾಣದಲ್ಲಿ 19 ವರ್ಷದ ಯುವಕನೋರ್ವನನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಗಾಮ್‌ದೇವಿ ಠಾಣೆ ಪೊಲೀಸರು 19 ವರ್ಷದ ಯುವಕ ಗಣೇಶ್ ರಮೇಶ್ ವನಪರ್ಧಿ ಎಂಬಾತನನ್ನು ಇಂದು ಮುಂಜಾನೆ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಯುವಕನಿಗೆ ನ್ಯಾಯಾಲಯವು ನ.8ರವೆರೆಗೆ ಪೊಲೀಸ್ ಕಸ್ಟಡಿಯನ್ನು ವಿಧಿಸಿದೆ.

ಅಂಬಾನಿಗೆ 400 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟು ಇ- ಮೇಲ್‌ ಮೂಲಕ ಬೆದರಿಕೆ ಹಾಕಲಾಗಿತ್ತು. ಇ-ಮೇಲ್‌ನ್ನು ಕಡೆಗಣಿಸಿದರೆ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಉಲ್ಲೇಖಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖೇಶ್ ಅಂಬಾನಿ ಅ. 31 ಮತ್ತು ನ.1ರಂದು ಎರಡು ಬೆದರಿಕೆ ಇಮೇಲ್‌ಗಳನ್ನು ಸ್ವೀಕರಿಸಿದ್ದಾರೆ. ಹಿಂದಿನ ಇಮೇಲ್‌ಗಳನ್ನು ನಿರ್ಲಕ್ಷಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು.

‘ಅಂಬಾನಿಯವರಿಗೆ ಎಷ್ಟೇ ಸುರಕ್ಷತೆ ಇದ್ದರೂ ನಮ್ಮ ಒಬ್ಬ ಸ್ನೈಪರ್(ಗುರಿ ಇಟ್ಟು ಶೂಟ್ ಮಾಡುವ ಶೂಟರ್) ಸಾಕು. ನಮ್ಮ ಇ-ಮೇಲ್ ಅನ್ನು ಪೊಲೀಸರಿಗೆ ಪತ್ತೆ ಹಚ್ಚುವುದಕ್ಕೂ ಸಾಧ್ಯವಿಲ್ಲ. 400 ಕೋಟಿ ನೀಡಬೇಕು. ಪೊಲೀಸರು ನನ್ನನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಸಾಧ್ಯವಿಲ್ಲ’ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನು ಓದಿದ್ದೀರಾ? ಇಸ್ರೇಲ್‌ಗೆ ಯುದ್ಧ ಸಾಮಗ್ರಿ ನೆರವಿನ ಅಮೆರಿಕ ಹಡಗು ತಡೆದು ನಿಲ್ಲಿಸಿ ಪ್ರತಿಭಟನೆ

ಕಳೆದ ಶುಕ್ರವಾರ ರಾತ್ರಿ ಕಳುಹಿಸಿದ ಮೊದಲ ಇ- ಮೇಲ್‌ನಲ್ಲಿ ಬೆಲ್ಜಿಯಂ ಕಾರ್ಪೊರೇಟ್ ವಿಳಾಸವನ್ನು ಬಳಸಿಕೊಂಡು ಶಾದಾಬ್ ಖಾನ್ ಎಂದು ಹೇಳಿಕೊಂಡ ವ್ಯಕ್ತಿ 20 ಕೋಟಿ ನೀಡದಿದ್ದರೆ ನಿನ್ನನ್ನು ಸಾಯಿಸುತ್ತೇವೆ, ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳು ನಮ್ಮಲ್ಲಿದ್ದಾರೆ ಎಂದು ಇಮೇಲ್ ಬೆದರಿಕೆ ಹಾಕಿದ್ದರು.

ಅದೇ ಇ- ಮೇಲ್ ಐಡಿಯಿಂದ ಶನಿವಾರ ಸಂಜೆ ಎರಡನೇ ಬೆದರಿಕೆ ಕಳುಹಿಸಲಾಗಿದ್ದು, ನೀವು ನಮ್ಮ ಇ-ಮೇಲ್‌ಗೆ ಪ್ರತಿಕ್ರಿಯಿಸಲಿಲ್ಲ, ಆದಕಾರಣ ಈಗ ನೀವು ನಮಗೆ 200 ಕೋಟಿ ರೂ. ನೀಡಬೇಕು. ನೀವು ಹಣವನ್ನು ನೀಡದಿದ್ದರೆ, ನಿಮ್ಮ ಮರಣದಂಡನೆಗೆ ಸಹಿ ಹಾಕಲಾಗುತ್ತದೆ ಎಂದು ಹೇಳಿಕೆಯಲ್ಲಿ ಬರೆಯಲಾಗಿತ್ತು.

ಇದನ್ನು ಓದಿದ್ದೀರಾ? ಎಷ್ಟೇ ಸುರಕ್ಷತೆ ಇರಲಿ, ನಮ್ಮ ಒಬ್ಬ ಶೂಟರ್ ಸಾಕು: ಉದ್ಯಮಿ ಮುಖೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ಮುಖೇಶ್ ಅಂಬಾನಿ ಈಗಾಗಲೇ ಕೇಂದ್ರ ಸರ್ಕಾರದಿಂದ ಝೆಡ್ ಪ್ಲಸ್ ಭದ್ರತೆಯನ್ನು ನೀಡಲಾಗಿದೆ. ಬೆದರಿಕೆ ಇ- ಮೇಲ್‌ ಹಿನ್ನೆಲೆ ಮುಖೇಶ್ ಅಂಬಾನಿಗೆ ಮತ್ತಷ್ಟು ಭದ್ರತೆ ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...