ಸಿಕ್ಕಿಂನಲ್ಲಿ ಮೇಘಸ್ಫೋಟ : 23 ಸೇನಾ ಸಿಬ್ಬಂದಿ ನಾಪತ್ತೆ

Date:

ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಇದರ ಪರಿಣಾಮ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನಾಪತ್ತೆಯಾಗಿರುವ ಯೋಧರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಸೇನೆಯ ಪೂರ್ವ ಕಮಾಂಡ್‌ ಹೇಳಿಕೆ ನೀಡಿದ್ದು, ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದಾಗಿ ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸಂಸ್ಥೆಗಳಿಗೆ ಹಾನಿಯಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನೀರಿನ ಮಟ್ಟವು 15-20 ಅಡಿ ಎತ್ತರದವರೆಗೆ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಇದು ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲುಗಡೆ ಮಾಡಲಾಗಿದ್ದ ಸೇನಾ ವಾಹನಗಳಿಗೆ ಹಾನಿಯುಂಟು ಮಾಡಿದೆ. ಘಟನೆಯಿಂದಾಗಿ 23 ಸಿಬ್ಬಂದಿ ಕಾಣೆಯಾಗಿದ್ದಾರೆ ಮತ್ತು ಕೆಲವು ವಾಹನಗಳು ಮುಳುಗಿವೆ. ಕೆಸರಿನ ಅಡಿಯಲ್ಲಿ ಸಿಲುಕಿರುವವರಿಗೆ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ಹೇಳಿಕೆಯಲ್ಲಿ ಭಾರತೀಯ ಸೇನೆ ತಿಳಿಸಿದೆ.

ಸಿಕ್ಕಿಂನಲ್ಲಿ ಮಂಗಳವಾರ ರಾತ್ರಿಯಿಡೀ ಭಾರೀ ಮಳೆಯಾದ ಪರಿಣಾಮ ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಬಳಿ ಮೇಘಸ್ಫೋಟ ಉಂಟಾದ ಪರಿಣಾಮ, ಸರೋವರವು ಉಕ್ಕಿ ಹರಿದಿದೆ. ಅಲ್ಲದೇ, ಇದರಿಂದಾಗಿ ತೀಸ್ತಾ ನದಿಯಲ್ಲಿ ನೀರಿನ ಮಟ್ಟವೀ ದಿಢೀರಾಗಿ ಹೆಚ್ಚಳಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ.

ಬಾಂಗ್ಲಾದೇಶವನ್ನು ಪ್ರವೇಶಿಸುವ ಮೊದಲು ತೀಸ್ತಾ ನದಿಯು ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮೂಲಕ ಹರಿದು ಹೋಗುತ್ತದೆ.

ಮೇಘಸ್ಫೋಟದ ಬಳಿಕ ಸಿಕ್ಕಿಂನ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ. ನದಿಯು ಉಕ್ಕಿ ಹರಿಯುತ್ತಿರುವ ಹಾಗೂ ರಸ್ತೆಗಳು ಕೊಚ್ಚಿಕೊಂಡು ಹೋಗುತ್ತಿರುವ ಭಯಾನಕ ದೃಶ್ಯಗಳನ್ನು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದಾರೆ.

“ಮೇಘಸ್ಫೋಟದಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ತುಂಬಾ ಹಾನಿಯಾಗಿದೆ. ಸಿಂಗ್ಟಮ್ನಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ಘಟನೆ ನಡೆದ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಿಳಿಸಿದ್ದಾರೆ.

ಈ ನಡುವೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ‘ಗಜೋಲ್ಡೋಬಾ, ಡೊಮೊಹಾನಿ, ಮೆಖಲಿಗಂಜ್ ಮತ್ತು ಘಿಶ್‌ನಂತಹ ತಗ್ಗು ಪ್ರದೇಶಗಳಲ್ಲಿರುವ ಜನರು ಜಾಗರೂಕರಾಗಿರಿ” ಎಂದು ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...