2ಬಿ ಮೀಸಲಾತಿ ರದ್ದು; ಕಾನೂನು ಹೋರಾಟಕ್ಕೆ ಸಜ್ಜಾದ ಕರ್ನಾಟಕದ ಮುಸ್ಲಿಂ ಮುಖಂಡರು

Date:

  • ಮುಸ್ಲಿಮರು ಮತ್ತು ಲಿಂಗಾಯತ-ಒಕ್ಕಲಿಗ ಸಮುದಾಯದ ಮಧ್ಯೆ ವೈಷಮ್ಯ ಹುಟ್ಟಿಸಲು ಬಿಜೆಪಿ ಯತ್ನ
  • ಬೆಂಗಳೂರಿನಲ್ಲಿ ನಡೆದ ಮುಸ್ಲಿಂ ಮುಖಂಡರ ಸಭೆಯಲ್ಲಿ ತೀರ್ಮಾನ

ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಸಂವಿಧಾನಬದ್ಧವಾಗಿ ನೀಡಿರುವ ಶೇಕಡಾ 4ರ ಮೀಸಲಾತಿಯನ್ನು ಏಕಾಏಕಿ ರದ್ದು ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮುಸ್ಲಿಂ ದ್ವೇಷವನ್ನು ಬಹಿರಂಗಪಡಿಸಿದ್ದಾರೆ. ರಾಜ್ಯ ಸರ್ಕಾರ ಈ ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕದ ನಾನಾ ಮುಸ್ಲಿಂ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ.

ಕರ್ನಾಟಕ ಮುಸ್ಲಿಂ ಯೂನಿಟಿ ಹೆಸರಿನಲ್ಲಿ ಬೆಂಗಳೂರಿನಲ್ಲಿ ಇಂದು ಸಂಜೆ ಸಭೆ ನಡೆಸಿದ ಮುಖಂಡರು, ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ ಕಳೆದ 60 ವರ್ಷಗಳಲ್ಲಿ ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ. ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ ಶೇಕಡಾ 4 ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ. ಇದನ್ನು ಏಕಾಏಕಿ ರದ್ದು ಪಡಿಸಿರುವುದು ಸಂವಿಧಾನವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಹಿರಿಯ ಪತ್ರಕರ್ತ, ಕರ್ನಾಟಕ ಮುಸ್ಲಿಂ ಯೂನಿಟಿಯ ಸಲಹೆಗಾರ ಬಿ ಎಂ ಹನೀಫ್, ಚುನಾವಣೆ ಹತ್ತಿರ ಬಂದಿರುವ ಸಮಯದಲ್ಲಿ ಮುಸ್ಲಿಮರು ಮತ್ತು ಲಿಂಗಾಯತ-ಒಕ್ಕಲಿಗ ಸಮುದಾಯದ ಮಧ್ಯೆ ವೈಷಮ್ಯ ಹುಟ್ಟಿಸಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಈ ಮೂಲಕ ರಾಜಕೀಯ ದುರ್ಲಾಭ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಸಂಚು ಹೂಡಿದ್ದಾರೆ. ಈ ಸಂಚಿಗೆ ಮುಸ್ಲಿಮರು ಬಲಿಯಾಗಬಾರದು. ಸಂಯಮದಿಂದ ವರ್ತಿಸಬೇಕು. ಯಾವುದೇ ಬೀದಿ ಹೋರಾಟಕ್ಕೆ ಇಳಿಯದೆ ಈ ಕ್ರಮದ ವಿರುದ್ಧ ಕಾನೂನು ಹೋರಾಟವನ್ನು ಕೈಗೆತ್ತಿಕೊಳ್ಳಬೇಕು. ಕರ್ನಾಟಕ ಮುಸ್ಲಿಂ ಯೂನಿಟಿ ಕಾನೂನು ತಜ್ಞರ ಜೊತೆಗೆ ಈಗಾಗಲೆ ಸಮಾಲೋಚನೆ ನಡೆಸುತ್ತಿದ್ದು ಕಾನೂನು ಹೋರಾಟವನ್ನು ಕೈಗೆತ್ತಿಕೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಯಪ್ರಕಾಶ್ ಹೆಗ್ಡೆ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಶಿಫಾರಸ್ಸಿನ ಅನ್ವಯ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಅವರನ್ನು ಮುಂದುವರಿದ ವರ್ಗ ಎಂದು ಪರಿಗಣಿಸಿ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (EWS) ಸೇರಿಸಿ ಮೀಸಲಾತಿ ಕೊಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ. ಜಯಪ್ರಾಶ್‌ ಹೆಗ್ಡೆ ಆಯೋಗವು ಈ ಕುರಿತು ಯಾವ ಸಮೀಕ್ಷೆಯನ್ನೂ ಮಾಡದೆ ಹೇಗೆ ನಿರ್ಧಾರ ಕೈಗೊಂಡಿದೆ? ಜಯಪ್ರಕಾಶ್‌ ಹೆಗ್ಡೆ ಆಯೋಗವು ರಹಸ್ಯ ಸಮೀಕ್ಷೆ ಏನಾದರೂ ಮಾಡಿದೆಯೆ? ಹಾಗಿದ್ದರೆ ಆ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಕರ್ನಾಟಕ ಮುಸ್ಲಿಂ ಯೂನಿಟಿಯು ಒತ್ತಾಯಿಸಿದೆ” ಎಂದು ತಿಳಿಸಿದ್ದಾರೆ.

ಮುಸ್ಲಿಮರ ಮೀಸಲಾತಿಯನ್ನು ಸಂವಿಧಾನಬದ್ಧವಾಗಿ ರಕ್ಷಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗುವುದು. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಸಲಹೆಯನ್ನೂ ಪಡೆದು ಮುಂದುವರಿಯಲಾಗುವುದು. ಸಮುದಾಯ ಯಾವುದೇ ಭಾವಾವೇಶಕ್ಕೆ ಒಳಗಾಗದೆ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಲು ಯತ್ನಿಸಬೇಕು ಎಂದು ಮುಸ್ಲಿಂ ಯೂನಿಟಿ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...