ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ

Date:

ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ ಘಟನೆ ಹರಿಯಾಣದ ಸಿರ್ಸಾ ನಗರದಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯ ನೀಡುತ್ತಿರುವ ಸಿರ್ಸಾ ನಗರದ ಚೌಧರಿ ದೇವಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಅಮಾನತುಗೊಳಿಸಬೇಕು ಹಾಗೂ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಬೇಕು ಎಂದು ಪತ್ರದಲ್ಲಿ ವಿದ್ಯಾರ್ಥಿನಿಯರು ಬೇಡಿಕೆಯಿಟ್ಟಿದ್ದಾರೆ.

ಚೌಧರಿ ದೇವಿ ವಿವಿಯ ಉಪಕುಲಪತಿ ಡಾ. ಅಜ್ಮಲ್ ಸಿಂಗ್ ಮಲಿಕ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ಗೃಹ ಸಚಿವ ಅನಿಲ್ ವಿಜ್ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಹಿರಿಯ ರಾಜ್ಯ ಸರ್ಕಾದ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೂ ಪತ್ರವನ್ನು ರವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಪ್ರಾಧ್ಯಾಪಕರು ಕೊಳಕು ಹಾಗೂ ಅಶ್ಲೀಲ ಕೃತ್ಯಗಳನ್ನು ವೆಸಗಿದ್ದಾರೆ. ಅಲ್ಲದೆ ಈ ಪ್ರಾಧ್ಯಾಪಕರು ಸ್ನಾನದ ಕೊಠಡಿಗೆ ಕರೆದೋಯ್ದು ತಮ್ಮ ಖಾಸಗಿ ಭಾಗಗಳನ್ನು ಸ್ಪರ್ಶಿಸುವುದಲ್ಲದೆ ನಮ್ಮೊಂದಿಗೆ ಅಶ್ಲೀಲ ಪದ ಪ್ರಯೋಗ ಮಾಡುತ್ತಾರೆ. ನಾವು ಈ ಬಗ್ಗೆ ಪ್ರತಿಭಟಿಸಿದಾಗ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಈ ಅಮಾನುಷ ಕೃತ್ಯವು ಹಲವು ತಿಂಗಳುಗಳಿಂದ ನಡೆಯುತ್ತಿದ್ದು, ಸ್ವತಃ ಉಪಕುಲಪತಿಗಳು ಲೈಂಗಿಕ ಕಿರುಕುಳ ನೀಡುವ ಪ್ರಾಧ್ಯಾಪಕರನ್ನು ರಕ್ಷಿಸುತ್ತಿದ್ದಾರೆ. ಪ್ರಾಧ್ಯಾಪಕರಿಗೆ ರಾಜಕೀಯ ಪ್ರಭಾವವಿರುವ ಕಾರಣ ನಮ್ಮನ್ನು ಕಾಲೇಜಿನಿಂದ ಉಚ್ಚಾಟಿಸುವುದಾಗಿ ಬೆದರಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದಲ್ಲದೆ ಉಪಕುಲಪತಿಗಳು ವಿದ್ಯಾರ್ಥಿನಿಯರಿಗೆ ಉತ್ತಮ ಹಾಗೂ ಪ್ರಾಯೋಗಿಕ ಅಂಕಗಳನ್ನು ನೀಡುವ ಮೂಲಕ ಆರೋಪಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಶ್ವವಿದ್ಯಾನಿಲಯವು ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ತನ್ನದೇ ಆದ ಸಮಿತಿಯನ್ನು ಹೊಂದಿದೆ. ಇದು ಗಂಭೀರ ಆರೋಪವಾಗಿದೆ. ಪತ್ರದಲ್ಲಿ ಯಾವುದೇ ಹೆಸರಿಲ್ಲ ಆದರೆ ನಾವು ಇದನ್ನು ತನಿಖೆ ಮಾಡುತ್ತೇವೆ. ನಂತರವಷ್ಟೇ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರನ್ನು ಬಿಡಲಾಗುವುದಿಲ್ಲ. ಸಿಸಿ ಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ನೀಡಲಾಗಿದೆ. ಪತ್ರದ ಸಾರಾಂಶದ ಪ್ರಕಾರ ಸಿಸಿ ಟಿವಿ ದೃಶ್ಯಗಳನ್ನು ಅಳಿಸಲಾಗಿದೆ ಎನ್ನಲಾಗಿದೆ” ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ ರಾಜೇಶ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...