ಹಿರಿಯ ಬಾಲಿವುಡ್‌ ನಟ ನಿತೇಶ್‌ ಪಾಂಡೆ ನಿಧನ

Date:

ನಿತೇಶ್‌ ಪಾಂಡೆಗೆ ಹೃದಯಾಘಾತವಾಗಿರಬಹುದು ಎಂದ ಪೊಲೀಸರು

ನಟನಿಗೆ ಹೃದಯ ಸಂಬಂಧಿ ಸಮಸ್ಯೆ ಇರಲಿಲ್ಲವೆಂದ ಸಂಬಂಧಿಗಳು

ಬಾಲಿವುಡ್‌ನ ಹಿರಿಯ ನಟ ನಿತೇಶ್‌ ಪಾಂಡೆ ಬುಧವಾರ ಖಾಸಗಿ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 50 ವರ್ಷದ ನಿತೇಶ್‌ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿತೇಶ್‌ ಮಹಾರಾಷ್ಟ್ರದ ನಾಸಿಕ ಜಿಲ್ಲೆಯ ಇಗಟ್‌ಪುರಿಯಲ್ಲಿ ಸಿನಿಮಾ ಶೂಟಿಂಗ್‌ ಸಿನಿಮಾ ತೊಡಗಿಕೊಂಡಿದ್ದರು. ಶೂಟಿಂಗ್‌ಗಾಗಿ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಅವರು ಬುಧವಾರ ಬೆಳಗ್ಗೆ ಅದೇ ಹೋಟೆಲ್‌ ರೂಮಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಹೃದಯಾಘಾತದಿಂದ ನಿತೇಶ್‌ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಿತೇಶ್‌ ವಾಸ್ತವ್ಯ ಹೂಡಿದ್ದ ಹೋಟೆಲ್‌ನ ಸಿಬ್ಬಂದಿ ಮತ್ತು ಚಿತ್ರತಂಡದವರ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆಯ ವರದಿ ಬಂದ ನಂತರವೇ ನಟನ ಸಾವಿಗೆ ಕಾರಣ ಏನೆಂಬುದು ಬಹಿರಂಗವಾಗಲಿದೆ.

ನಿತೇಶ್‌ ಅವರ ಸಾವಿನ ಸುದ್ದಿಯನ್ನು ಖಚಿತಪಡಿಸಿರುವ ಅವರ ಸಂಬಂಧಿ ಸಿದ್ಧಾರ್ಥ್‌ ನಾಗರ್‌, “ನಿತೇಶ್‌ ನಿಧನದ ಸುದ್ದಿಯಿಂದ ನನ್ನ ಸಹೋದರಿ ಅರ್ಪಿತಾ (ನಿತೇಶ್‌ ಪತ್ನಿ) ಅಘಾತಕ್ಕೊಳಗಾಗಿದ್ದಾರೆ. ಅವರಿಗೆ ಹೃದಯ ಸಂಬಂಧಿ ಸಮಸ್ಯೆಗಳು ಇರಲಿಲ್ಲ” ಎಂದಿದ್ದಾರೆ. ಬಾಲಿವುಡ್‌ನ ಹಲವು ನಟ, ನಟಿಯರು ಕೂಡ ಹಿರಿಯ ನಟನ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಿಳಾ ಕುಸ್ತಿಪಟುಗಳು ರಸ್ತೆಗಿಳಿಯಲು ಮೋದಿ ಕಾರಣ : ಕಿಶೋರ್‌ ಕುಮಾರ್‌

ರಂಗಭೂಮಿ ಹಿನ್ನೆಲೆಯ ನಿತೇಶ್‌, 1995ರಲ್ಲಿ ಹಿಂದಿ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ತೇಜಸ್‌ನಲ್ಲಿ ಗೂಢಾಚಾರಿಯ ಪಾತ್ರದಲ್ಲಿ ನಟಿಸುವ ಮೂಲಕ ಹಿಂದಿ ಚಿತ್ರರಂಗ ಪ್ರವೇಶಿಸಿದರು. ಆಮಿರ್‌ ಖಾನ್‌ ನಟನೆಯ ʼಬಾಜಿʼ, ʼಖೋಸ್ಲಾ ಕಾ ಗೋಸ್ಲಾʼ, ʼಓಂ ಶಾಂತಿ ಓಂʼ, ದಬಾಂಗ್‌-2, ʼಬದಾಯಿ ದೋʼ ಸೇರಿಂದತೆ ಹಲವು ಚಿತ್ರಗಳು ಮತ್ತು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...