ಕೇರಳ | ಪತ್ರಕರ್ತೆಯೊಂದಿಗೆ ಅನುಚಿತ ವರ್ತನೆ; ಕ್ಷಮೆ ಯಾಚಿಸಿದ ನಟ, ಬಿಜೆಪಿ ಮುಖಂಡ ಸುರೇಶ್‌ ಗೋಪಿ

Date:

ಕೇರಳದ ಬಿಜೆಪಿ ಮುಖಂಡ ಹಾಗೂ ನಟ ಸುರೇಶ್‌ ಗೋಪಿ, ಕೋಯಿಕ್ಕೋಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಪತ್ರಕರ್ತೆಯೊಬ್ಬರ ಭುಜಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಘಟನೆ ಶುಕ್ರವಾರ ನಡೆದಿದೆ.

ಸುರೇಶ್ ಗೋಪಿ ಮಹಿಳಾ ಪತ್ರಕರ್ತೆಯ ಹೆಗಲನ್ನು ಎರಡೆರಡು ಬಾರಿ ಅನುಚಿತವಾಗಿ ಮುಟ್ಟುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿಡಿಯೋ ವೈರಲಾಗಿ, ಇದು ವಿವಾದವಾಗುತ್ತಿದ್ದಂತೆಯೇ ಫೇಸ್‌ಬುಕ್ ಪೋಸ್ಟ್ ಮೂಲಕ ಸುರೇಶ್ ಕ್ಷಮೆ ಯಾಚಿಸಿದ್ದಾರೆ.

ಆಗಿದ್ದೇನು?
ಶುಕ್ರವಾರ ಸಂಜೆ (ಅ.27) ಕೋಯಿಕ್ಕೋಡ್‌ನಲ್ಲಿ ಮಾಧ್ಯಮಗೋಷ್ಠಿ ಇತ್ತು. ಆ ವೇಳೆ, ಸುರೇಶ್ ಗೋಪಿ ಅವರಿಗೆ ‘ಮೀಡಿಯಾ ವನ್ ಚಾನೆಲ್‌’ನ ಮಹಿಳಾ ಪತ್ರಕರ್ತೆ ಶಿದಾ ಜಗತ್ ಪ್ರಶ್ನೆಯೊಂದನ್ನು ಕೇಳಿದ್ದರು. ಆ ಪ್ರಶ್ನೆಗೆ ಉತ್ತರಿಸುತ್ತಲೇ ಪತ್ರಕರ್ತೆಯ ಭುಜದ ಮೇಲೆ ಸುರೇಶ್ ಗೋಪಿ ಕೈ ಹಾಕಿದ್ದಾರೆ.

ಮೊದಲ ಬಾರಿ ಹೆಗಲ ಮೇಲೆ ಕೈ ಹಾಕುವಾಗ ಪತ್ರಕರ್ತೆ ಹಿಂದಕ್ಕೆ ಸರಿದಿದ್ದಾರೆ. ಆದಾಗ್ಯೂ, ಎರಡನೇ ಬಾರಿ ಮತ್ತೊಮ್ಮೆ ಸುರೇಶ್‌ ಗೋಪಿ ಹೆಗಲಿಗೆ ಕೈ ಹಾಕಿದ್ದು, ಈ ವೇಳೆ ಪತ್ರಕರ್ತೆ, ಸುರೇಶ್‌ ಗೋಪಿಯ ಕೈಯನ್ನು ದೂರ ಸರಿಸಿದ್ದಾರೆ.

ಪತ್ರಕರ್ತೆ ಎರಡೆರಡು ಬಾರಿ ದೂರ ಸರಿಸಿದರೂ ಕೂಡ ಸುರೇಶ್ ಗೋಪಿ ತಮ್ಮ ಈ ವರ್ತನೆಯನ್ನು ಮುಂದುವರಿಸಿದ್ದಾರೆ. ವಿಡಿಯೋದಲ್ಲಿ ಬಿಜೆಪಿ ಮುಖಂಡನ ಈ ವರ್ತನೆ ಸ್ಪಷ್ಟವಾಗಿ ಕಂಡಿದೆ. ಆ ಬಳಿಕ ಈ ವಿಡಿಯೋ ಎಲ್ಲ ಮಾಧ್ಯಮಗಳು ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿತ್ತು.

suresh gopi media

ಸುರೇಶ್ ಗೋಪಿಯ ಈ ನಡೆಯನ್ನು ಹಲವು ಮಹಿಳಾ ಸಂಘಟನೆಗಳು ಹಾಗೂ ರಾಜಕೀಯ ನೇತಾರರು ಖಂಡಿಸಿದ್ದಾರೆ. ಪತ್ರಕರ್ತೆ ಈ ಸಂಬಂಧ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. ‘ಮೀಡಿಯಾ ವನ್ ಚಾನೆಲ್‌’ ಕೂಡ ಕಾನೂನು ಕ್ರಮ ಸೇರಿದಂತೆ ಮುಂದಿನ ಎಲ್ಲ ಹೆಜ್ಜೆಗಳಿಗೆ ತಮ್ಮ ಬೆಂಬಲ ನೀಡುವುದಾಗಿ ತಿಳಿಸಿದೆ.

ಕ್ಷಮೆಯಾಚನೆಗೆ ಒತ್ತಾಯಿಸಿದ್ದ ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ
ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಗೆ ಸಂಬಂಧಿಸಿ ಸುರೇಶ್ ಗೋಪಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಒತ್ತಾಯಿಸಿತ್ತು.

ಈ ಬಗ್ಗೆ ಹೇಳಿಕೆ ಪ್ರಕಟಿಸಿದ್ದ ಕೆಯುಡಬ್ಲ್ಯುಜೆ ಹೇಳಿಕೆಯಲ್ಲಿ ಬಿಜೆಪಿ ನಾಯಕನ ಈ ವರ್ತನೆ ‘ಉದ್ಯೋಗಿ ಮಹಿಳೆಯರಿಗೆ ಮಾಡಿದ ಅವಮಾನ. ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭ, ಪತ್ರಕರ್ತೆಯ ಜೊತೆ ಅನುಚಿತವಾಗಿ ವರ್ತಿಸಿದ ಸುರೇಶ್ ಗೋಪಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು, ಜೊತೆಗೆ ಇತರ ಸೂಕ್ತ ಕಾನೂನು ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ತಿಳಿಸಿತ್ತು.

ಫೇಸ್‌ಬುಕ್‌ನಲ್ಲಿ ಕ್ಷಮೆಯಾಚಿಸಿದ ಸುರೇಶ್ ಗೋಪಿ
ಪತ್ರಕರ್ತೆ ಕಾನೂನು ಕ್ರಮ ಜರುಗಿಸಲು ಮುಂದಾದ ನಡುವೆಯೇ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ಸುರೇಶ್ ಗೋಪಿ, ಕ್ಷಮೆಯಾಚಿಸಿದ್ದಾರೆ.

‘ನಾನು ಎಂದಿಗೂ ಸಾರ್ವಜನಿಕವಾಗಿಯೂ, ಖಾಸಗಿಯಾಗಿಯೂ ಅಸಭ್ಯವಾಗಿ ವರ್ತಿಸಿದ್ದಿಲ್ಲ. ಪತ್ರಕರ್ತೆಯನ್ನು ಪ್ರೀತಿಯಿಂದ ಮುಟ್ಟಿದ್ದೆ. ಆದರೆ, ಆಕೆಗೆ ಏನನ್ನಿಸಿದೆಯೋ ಅದನ್ನು ನಾವು ಒಪ್ಪಬೇಕು. ಆಕೆಗೆ ಯಾವುದೇ ರೀತಿಯ ನೋವಾಗಿದ್ದರೆ ಅಥವಾ ಮಾನಸಿಕ ತೊಂದರೆಯಾಗಿದ್ದರೆ ಕ್ಷಮೆ ಯಾಚಿಸುತ್ತೇನೆ’ ಎಂದು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕ್ಷಮೆಯಾಚನೆ ಬಗ್ಗೆ ಪ್ರತಿಕ್ರಿಯಿಸಿರುವ ಪತ್ರಕರ್ತೆ ಶಿದಾ ಜಗತ್, ‘ತಾನು ಮಾಡಿದ್ದು ತಪ್ಪು ಎಂಬ ಅರಿವು ಅವರಿಗಿರಬೇಕು. ಒಬ್ಬರ ದೇಹವನ್ನು ಅವರ ಅನುಮತಿ ಇಲ್ಲದೇ ಮುಟ್ಟು ತಪ್ಪು. ನನಗೆ ಅದು ಅನುಚಿತವಾಗಿ ವರ್ತಿಸಿದ ರೀತಿಯೇ ಅನಿಸಿತು. ನನಗೆ ಅವರ ನಡವಳಿಕೆ ಸರಿ ಇಲ್ಲ ಎಂದು ತೋರಿದ ಕಾರಣಕ್ಕಾಗಿಯೇ ನಾನು ಅವರ ಕೈಯನ್ನು ದೂರ ಸರಿಸಿದ್ದೆ. ಹಾಗಾಗಿ, ಈ ಘಟನೆಯ ಕೋಯಿಕ್ಕೋಡ್ ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...