‘ಫುಲೆ’ ವಿವಾದ | ಬಿಜೆಪಿ-ಆರ್‌ಎಸ್‌ಎಸ್ ದಲಿತ-ಬಹುಜನ ಇತಿಹಾಸವನ್ನು ಅಳಿಸಿಹಾಕಲು ಬಯಸಿದೆ: ರಾಹುಲ್ ಗಾಂಧಿ

Date:

‘ಪುಲೆ’ ಚಿತ್ರದ ವಿವಾದದ ಬಗ್ಗೆ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ-ಆರ್‌ಎಸ್‌ಎಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಾತಿ ತಾರತಮ್ಯ ಮತ್ತು ಅನ್ಯಾಯದ ನಿಜವಾದ ಸತ್ಯ ಮುನ್ನೆಲೆಗೆ ಬರದಂತೆ ಅವರು (ಬಿಜೆಪಿ, ಆರ್‌ಎಸ್‌ಎಸ್‌) ಪ್ರತಿ ಹಂತದಲ್ಲೂ ದಲಿತ-ಬಹುಜನ ಇತಿಹಾಸವನ್ನು ಅಳಿಸಿಹಾಕಲು ಬಯಸಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.

‘ಫುಲೆ’ ಸಿನಿಮಾ ಸಮಾಜ ಸುಧಾರಕರಾದ ಜ್ಯೋತಿರಾವ್ ಗೋವಿಂದರಾವ್ ಫುಲೆ ಮತ್ತು ಅವರ ಪತ್ನಿ ಸಾವಿತ್ರಿಬಾಯಿ ಫುಲೆ ಅವರ ಜೀವನವನ್ನು ಆಧರಿಸಿದ ಸಿನಿಮಾವಾಗಿದೆ. ಈ ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಆದರೆ ಚಿತ್ರದ ನಿರ್ದೇಶಕ ಅನಂತ್ ಮಹಾದೇವನ್, “ಬ್ರಾಹ್ಮಣ ಸಮುದಾಯದಿಂದ ಬಂದ ಆಕ್ಷೇಪಣೆಗಳಿಂದಾಗಿ ಇದು ವಿಳಂಬವಾಗಿದೆ ಮತ್ತು ಸೆನ್ಸಾರ್ ಮಂಡಳಿ ತಿದ್ದುಪಡಿಗಳನ್ನು ಸೂಚಿಸಿದ್ದರಿಂದ ಅಲ್ಲ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಜ್ಯೋತಿಬಾ ಜನ್ಮದಿನ | ಬ್ರಾಹ್ಮಣಶಾಹಿ ವಿರುದ್ಧ ಹೋರಾಟ ನಡೆಸಿದವರು ಮಹಾತ್ಮ ಫುಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಒಂದೆಡೆ, ಬಿಜೆಪಿ-ಆರ್‌ಎಸ್‌ಎಸ್ ನಾಯಕರು ಫುಲೆ ಅವರಿಗೆ ಮೇಲ್ನೋಟಕ್ಕೆ ಗೌರವ ಸಲ್ಲಿಸುತ್ತಾರೆ. ಮತ್ತೊಂದೆಡೆ, ಅವರು ಫುಲೆ ಅವರ ಜೀವನದ ಮೇಲೆ ನಿರ್ಮಿಸಲಾದ ಚಿತ್ರವನ್ನು ಸೆನ್ಸಾರ್ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಮಹಾತ್ಮ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ತಮ್ಮ ಇಡೀ ಜೀವನವನ್ನು ಜಾತಿವಾದದ ವಿರುದ್ಧದ ಹೋರಾಟಕ್ಕೆ ಮುಡಿಪಾಗಿಟ್ಟರು. ಆದರೆ ಸರ್ಕಾರ ಆ ಹೋರಾಟ ಮತ್ತು ಅದರ ಐತಿಹಾಸಿಕ ಸಂಗತಿಗಳು ತೆರೆಯ ಮೇಲೆ ಬರುವುದನ್ನು ಬಯಸುವುದಿಲ್ಲ” ಎಂದು ಆರೋಪಿಸಿದ್ದಾರೆ.

ಪ್ರತೀಕ್ ಗಾಂಧಿ ಜ್ಯೋತಿಬಾ ಫುಲೆಯಾದರೆ, ಪತ್ರಲೇಖಾ ಸಾವಿತ್ರಿಬಾಯಿ ಜ್ಯೋತಿಬಾ ಫುಲೆಯಾಗಿ ನಟಿಸಿರುವ ‘ಫುಲೆ’ ಸಿನಿಮಾ ಶುಕ್ರವಾರ ಬಿಡುಗಡೆಯಾಗಬೇಕಿತ್ತು. ಆದರೆ ಏಪ್ರಿಲ್ 25 ರಂದು ಚಿತ್ರಮಂದಿರಗಳಿಗೆ ಬರಲಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಏಪ್ರಿಲ್ 7 ರಂದು ನಿರ್ಮಾಪಕರಿಗೆ ‘ಯು’ ಪ್ರಮಾಣಪತ್ರವನ್ನು ನೀಡಿದೆ. ಆದರೆ ಸಿನಿಮಾದಲ್ಲಿ ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿದ್ದಾರೆ. ಏಪ್ರಿಲ್ 10 ರಂದು ಟ್ರೇಲರ್ ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬ್ರಾಹ್ಮಣ ಸಮುದಾಯದ ಕೆಲವರು ತಮ್ಮನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂದು ಹೇಳಿ ಆಕ್ಷೇಪಣೆ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಮೂಲದ ಸಂಘಟನೆ ಹಿಂದೂ ಮಹಾಸಂಘದ ಅಧ್ಯಕ್ಷ ಆನಂದ್ ದಾವೆ ಟ್ರೇಲರ್ ವೀಕ್ಷಿಸಿದ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಬ್ರಾಹ್ಮಣ ಸಮುದಾಯದ ಬಗ್ಗೆ ಅಷ್ಟು ಕೆಟ್ಟದಾಗಿ ತೋರಿಸಿರುವುದು ಅನ್ಯಾಯ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...