ಮಾಲೆಗಾಂವ್‌ ಪ್ರಕರಣ | ವಿಚಾರಣೆಗೆ ಬಾರದಿದ್ದರೆ ಕ್ರಮ; ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್‌ಗೆ ಕೋರ್ಟ್‌ ಎಚ್ಚರಿಕೆ

Date:

“ಒಂದೋ ವಿಚಾರಣೆಗೆ ಹಾಜರಾಗಿ, ಇಲ್ಲವೇ ಸೂಕ್ತ ಕ್ರಮ ಎದುರಿಸಲು ಸಿದ್ಧರಾಗಿ”…ಹೀಗಂತ ಹೇಳಿದ್ದು ರಾಷ್ಟ್ರೀಯ ತನಿಖಾ ದಳ ಎನ್‌ಐಎ ವಿಶೇಷ ನ್ಯಾಯಾಲಯ. 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡುವಂತೆ ಎನ್‌ಐಎ ವಿಶೇಷ ನ್ಯಾಯಾಲಯ ತಿಳಿಸಿತ್ತು. ಆದರೆ, ಫೆಬ್ರವರಿ 22ರಂದು ವೈದ್ಯಕೀಯ ಕಾರಣಗಳಿಗಾಗಿ ದಿನಕ್ಕೆ ವಿನಾಯಿತಿ ನೀಡುವಂತೆ ಪ್ರಜ್ಞಾ ಠಾಕೂರ್ ಅವರ ಮನವಿ ಮಾಡಿದ್ದರು.

ಈ ಮನವಿಯನ್ನು ಪುರಸ್ಕರಿಸಿದ್ದ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಕೆ ಲಹೋಟಿ ಅವರು, “ಮಂಗಳವಾರ(ಫೆ.27)ದಿಂದ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಬೇಕು. ಒಂದು ವೇಳೆ ಇದಕ್ಕೆ ತಪ್ಪಿದಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯವು ಆರೋಪಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದೆ. ಆದರೆ, ಪ್ರಮುಖ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ನಿರಂತರವಾಗಿ ವೈದ್ಯಕೀಯ ಕಾರಣವೊಡ್ಡಿ, ನ್ಯಾಯಾಲಯಕ್ಕೆ ಹಾಜರಾಗುವುದರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಆದರೂ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಲೇ ಇದ್ದಾರೆ.

ಈಗ ಇದೇ ಕಾರಣವನ್ನು ಉಲ್ಲೇಖಿಸಿ ಮತ್ತೆ ಅರ್ಜಿ ಸಲ್ಲಿಸಿದ್ದನ್ನು ವಿಚಾರಣೆ ನಡೆಸಿದ ವೇಳೆ ನ್ಯಾಯಾಧೀಶ ಎಕೆ ಲಹೋಟಿ, “ಫೆಬ್ರವರಿ 27ರಿಂದ ತಪ್ಪದೆ ನ್ಯಾಯಾಲಯಕ್ಕೆ ಬರಬೇಕು. ಒಂದು ವೇಳೆ ಬಾರದೇ ಇದ್ದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಸದ್ಯ ಭೋಪಾಲ್‌ನ ಸಂಸದೆಯೂ ಆಗಿರುವ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಎಚ್ಚರಿಕೆ ನೀಡಿದ್ದಾರೆ.

“ಆರೋಪಿಗಳು ಮುಂಬೈನಲ್ಲಿಯೇ ಇರಬೇಕೆಂದು ಹೇಳುತ್ತಿಲ್ಲ. ಒಂದು ವೇಳೆ ಅನಾರೋಗ್ಯವಿದ್ದರೆ ಅವರು ಮುಂಬೈನಲ್ಲೂ ಔಷಧಿಗಳನ್ನು ಪಡೆಯಬಹುದು” ಎಂದು ನ್ಯಾಯಾಲಯವು ತಿಳಿಸಿದೆ.

ಏನಿದು ಪ್ರಕರಣ?

ಸೆಪ್ಟೆಂಬರ್ 29, 2008 ರಂದು ಉತ್ತರ ಮಹಾರಾಷ್ಟ್ರದ ಮುಂಬೈನಿಂದ ಸುಮಾರು 200 ಕಿಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಸ್ಫೋಟಕ ಸಾಧನವನ್ನು ಇಡಲಾಗಿತ್ತು. ಇದು ಸ್ಫೋಟಗೊಂಡಾಗ ಆರು ಜನರು ಸಾವನ್ನಪ್ಪಿದ್ದರು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

2011ರಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸುವ ಮೊದಲು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ತನಿಖೆ ನಡೆಸುತ್ತಿತ್ತು.

ಡಿಸೆಂಬರ್ 2018ರಿಂದ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈವರೆಗೆ 323ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಎಲ್ಲರ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ. ಸದ್ಯದ ಮಟ್ಟಿಗೆ ಸರ್ಕಾರಿ ಪರ ವಕೀಲರ ಸಾಕ್ಷ್ಯ ಸಂಗ್ರಹ ಮುಕ್ತಾಯಗೊಂಡಿದ್ದು, ಆರೋಪಿಗಳು ಈ ಸಾಕ್ಷ್ಯಗಳ ವಿರುದ್ಧವಾಗಿ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿದೆ.

ಈ ಪ್ರಕರಣದಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್, ನಿವೃತ್ತ ಮೇಜರ್ ರಮೇಶ್ ಉಪಾಧ್ಯ, ಅಜಯ್ ರಹೀರ್‌ಕರ್, ಸುಧಾಕರ್ ಚತುರ್ವೇದಿ, ಸುಧಾಕರ್ ದ್ವಿವೇದಿ ಹಾಗೂ ಸಮೀರ್ ಕುಲಕರ್ಣಿ ಆರೋಪಿಗಳಾಗಿದ್ದು, ಎಲ್ಲರ ವಿರುದ್ಧ ಐಪಿಸಿ ಹಾಗೂ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...