ಬಾಗಲಕೋಟ | ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ: ಸಚಿವ ತಿಮ್ಮಾಪುರ

Date:

ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ. ಬಾಗಲಕೋಟ ಜಿಲ್ಲೆಯ ಮುಧೋಳ ನಗರಕ್ಕೆ ಹೈಟೆಕ್ ಶೌಚಾಲಯ ನಿರ್ಮಿಸಲು ಸಚಿವ ಆರ್.ಬಿ. ತಿಮ್ಮಾಪುರ ಘೋಷಣೆ ಮಾಡಿದ್ದಾರೆ.

ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಜಯಂತಿಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಧೋಳ ನಗರದ ವಿವಿಧ ವಾರ್ಡ್‌ಗಳಲ್ಲಿ 39 ಹೈಟೆಕ್ ಶೌಚಾಲಯಗಳನ್ನು ನಿರ್ಮಿಸುವ ಯೋಜನೆ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ ಅಂದಾಜು 7 ಕೋಟಿ 31 ಲಕ್ಷ ವೆಚ್ಚದಲ್ಲಿ ನೈರ್ಮಲ್ಯ ಸೌಲಭ್ಯಗಳನ್ನು ಸುಧಾರಿಸಲು ಮತ್ತು ನಗರದ ನಿವಾಸಿಗಳಿಗೆ ಸ್ವಚ್ಛ, ಆರೋಗ್ಯಕರ ಪರಿಸರಕ್ಕೆ ಸದಾ ಬದ್ದನಾಗಿರುವೆ ಎಂದರು.

ಮಹಾತ್ಮಾ ಗಾಂಧೀಜಿಯವರ ಪರಂಪರೆ ಇಂದಿಗೂ ಭಾರತೀಯರಿಗೆ ಸ್ಫೂರ್ತಿ ನೀಡುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯ ಶತಮಾನೋತ್ಸವದ ಆಚರಣೆಯು ಸಾಕ್ಷಿಯಾಗಿದೆ.  ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಐತಿಹಾಸಿಕ ಅಧಿವೇಶನವು ಬೆಳಗಾವಿಯೊಂದಿಗಿನ ಅವರ ಸಂಪರ್ಕಕ್ಕೆ ನಾಂದಿ ಹಾಡಿತು. ಅವರ ಸ್ಮರಣೆಯನ್ನು ಗೌರವಿಸಲು, ಅಹಿಂಸಾತ್ಮಕ ಪ್ರತಿರೋಧದ ಶಕ್ತಿಯ ಬಗ್ಗೆ ಅಮೂಲ್ಯವಾದ ಪಾಠಗಳನ್ನು ಯುವ ಪೀಳಿಗೆ ಕಲಿಯಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿನ ಪೀಳಿಗೆಗೆ ವಿಶೇಷವಾಗಿ ಯುವಕರ ನಡುವಿನ ಧರ್ಮ ಧರ್ಮಗಳ ಮಧ್ಯೆ, ಜಾತಿ ವಿಷಬೀಜ ಬಿತ್ತಿವ ಮೂಲಕ ದ್ವೇಷ ಮತ್ತು ಒಡಕಗಳ ನಿವಾರಣೆಗೆ ಗಾಂಧಿಯವರ ಮಾರ್ಗದರ್ಶನದ ಅವಶ್ಯಕತೆ ಇದೆ. ಗಾಂಧಿಯವರ ಮೌಲ್ಯಗಳನ್ನು ಉತ್ತೇಜಿಸುವಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ನಗರದ ಅಭಿವೃದ್ಧಿಗಾಗಿ ಯಾವುದೇ ರಾಜಕೀಯ ಮಾಡದೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನಗರದ ನಿವಾಸಿಗಳಿಗೆ ಯಾವುದೇ ಅಡೆತಡೆ ಆಗದಂತೆ ವ್ಯಾಪಾರಕ್ಕೆ ಸರಳಿತವಾಗಿ ಅಲ್ಲಲ್ಲಿ ಪಾರ್ಕಿಂಗ್ ವ್ಯವಸ್ಥೆ, ನಾಲ್ಕು ದಿಕ್ಕುಗಳ ಕಡೆ ಸ್ಮಶಾನದ ವ್ಯವಸ್ಥೆಮಾಡಲು  ಸ್ಥಳ ಹುಡುಕಾಟದಲ್ಲಿ ಅಧಿಕಾರಗಳಿಗೆ ಸೂಚಿಸಿದ್ದೇನೆ. ಆದಷ್ಟು ಬೇಗ ಜನತೆಗೆ ಅನುಕೂಲವಾಗುವಂತೆ ಎಲ್ಲ ವ್ಯವಸ್ಥೆಯನ್ನು ಮಾಡುವುದಾಗಿ ಸಚಿವ ತಿಮ್ಮಾಪೂರ  ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...