ಉತ್ತರ ಪ್ರದೇಶ | ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಗೋಹತ್ಯೆ ಮಾಡಿಸಿ ಸಿಕ್ಕಿಬಿದ್ದ ಬಜರಂಗದಳದ ಮುಖಂಡರು!

Date:

  • ಸಂಘಪರಿವಾರದ ಸಂಪೂರ್ಣ ಷಡ್ಯಂತ್ರ ಬಯಲಿಗೆಳೆದ ಮೊರಾದಾಬಾದ್ ಪೊಲೀಸರು
  • ಬಜರಂಗದಳ ಜಿಲ್ಲಾಧ್ಯಕ್ಷನ ಸಹಿತ ಒಟ್ಟು ನಾಲ್ವರ ಬಂಧನ

ಉತ್ತರ ಪ್ರದೇಶದ ಮೊರಾದಾಬಾದ್‌ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸುವುದಕ್ಕೆ ಹಾಗೂ ಪೊಲೀಸ್ ಅಧಿಕಾರಿಯೋರ್ವರನ್ನು ಹುದ್ದೆಯಿಂದ ಕಿತ್ತೊಗೆಯುವ ಷಡ್ಯಂತ್ರಗೈದಿದ್ದ ಬಜರಂಗದಳದ ಮುಖಂಡರು, ವ್ಯವಸ್ಥಿತವಾಗಿ ಗೋಹತ್ಯೆಗೈದು ಸಿಕ್ಕಿಬಿದ್ದಿರುವ ವಿಚಿತ್ರ ಘಟನೆ ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ ಮುಖಂಡರ ಸಹಿತ ಒಟ್ಟು ನಾಲ್ವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಬಂಧಿತರನ್ನು ಮೊರಾದಾಬಾದ್ ಬಜರಂಗದಳದ ಜಿಲ್ಲಾ ಮುಖ್ಯಸ್ಥ ಸುಮಿತ್ ವಿಷ್ಣೋಯ್ ಅಲಿಯಾಸ್ ಮೋನು ಬಜರಂಗಿ, ರಮನ್ ಚೌಧರಿ, ರಾಜೀವ್ ಚೌಧರಿ ಹಾಗೂ ಇವರೊಂದಿಗೆ ಸಹಕರಿಸಿದ್ದ ಸ್ಥಳೀಯ ಶಹಾಬುದ್ದೀನ್ ಎಂಬಾತನನ್ನು ಬಂಧಿಸಿರುವುದಾಗಿ ಮೊರಾದಾಬಾದ್ ಎಸ್‌ಎಸ್‌ಪಿ ಹೇಮರಾಜ್ ಮೀನಾ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಷಡ್ಯಂತ್ರವನ್ನು ಇಂಚಿಂಚಾಗಿ ವಿವರಿಸಿರುವ ಹೇಮರಾಜ್ ಮೀನಾ, “ಪೊಲೀಸ್ ಠಾಣೆಯ ಉಸ್ತುವಾರಿಯನ್ನು ತೆಗೆದುಹಾಕುವ ಉದ್ದೇಶದಿಂದ ಈ ಗ್ಯಾಂಗ್ 15 ದಿನಗಳಲ್ಲಿ ಎರಡು ಸ್ಥಳಗಳಲ್ಲಿ ಗೋಹತ್ಯೆ ಮಾಡಿದೆ. ಬಳಿಕ ಪೊಲೀಸರ ಮೇಲೆ ಆರೋಪಿಗಳನ್ನು ಬಂಧಿಸಿ ಎಂದು ಒತ್ತಾಯಿಸಿ ಒತ್ತಡ ಹೇರಲು ಬೆಂಬಲಿಗರೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ್ದರು. ಸದ್ಯ ಪ್ರಕರಣವನ್ನು ಭೇದಿಸಿದಾಗ ಎಲ್ಲ ಷಡ್ಯಂತ್ರಗಳು ಬಯಲಿಗೆ ಬಂದಿದೆ. ನಾಲ್ವರನ್ನು ಬಂಧಿಸಿದ್ದೇವೆ. ಮತ್ತೊಂದೆಡೆ, ಆರೋಪಿಗಳೊಂದಿಗೆ ಶಾಮೀಲಾಗಿದ್ದ ಛಜಲತ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ‌ರ್ ನರೇಂದ್ರ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಇಲಾಖೆ ತನಿಖೆಗೂ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಬಜರಂಗದಳ ಮಾಡಿದ್ದ ಷಡ್ಯಂತ್ರ ಏನು?
ಬಜರಂಗದಳದ ಮುಖಂಡರು, ಮುಸ್ಲಿಂ ವ್ಯಕ್ತಿಯೋರ್ವನ ಮೇಲಿದ್ದ ಹಳೆಯ ವೈಷ್ಯಮ್ಯ ಹಾಗೂ ಛಜಲತ್ ಪೊಲೀಸ್ ಠಾಣೆಯ ಉಸ್ತುವಾರಿಯನ್ನು ಹುದ್ದೆಯಿಂದ ತೆಗೆದುಹಾಕುವ ಷಡ್ಯಂತ್ರ ಹೂಡಿದ್ದರು. ಇದಕ್ಕಾಗಿ ಆರೋಪಿ ಶಹಾಬುದ್ದೀನ್‌ ಎಂಬಾತನನ್ನು ಸಂಪರ್ಕಿಸಿದ್ದಾರೆ. ಅಲ್ಲದೇ, ಎರಡು ಸಾವಿರ ರೂ. ಹಣ ನೀಡಿ ಜ.16ರಂದು ಗೋಹತ್ಯೆ ಮಾಡುವಂತೆ ನಿರ್ದೇಶನ ನೀಡಿದ್ದರು.

ಅದರಂತೆ ನಡೆದುಕೊಂಡ ಆರೋಪಿ ಶಹಾಬುದ್ದೀನ್‌, ಗೋಹತ್ಯೆ ನಡೆಸಿದ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಸ್ಥಳಕ್ಕೆ ಭೇಟಿ ನೀಡಿದ್ದ ಬಜರಂಗದಳದ ಮುಖಂಡರು, ಸತ್ತು ಬಿದ್ದಿದ್ದ ಗೋವುಗಳ ಫೋಟೋಗಳನ್ನು ತೆಗೆದು ಸೋಷಿಯಲ್ ಮೀಡಿಯಾಗಳಲ್ಲಿ ಹರಿಯಬಿಟ್ಟಿದ್ದರು.

ಛಜಲತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ಗೋಹತ್ಯೆಯಾಗುತ್ತಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಗಲ್ಲಿಗೇರಿಸುವಂತೆ ಬಜರಂಗದಳದ ಮುಖಂಡರು ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದ್ದರು. ಠಾಣೆಯ ಉಸ್ತುವಾರಿ ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಠಾಣೆಯ ಎದುರಿನಲ್ಲಿ ಪ್ರತಿಭಟನೆ ಕೂಡ ನಡೆಸಿ, ಹುದ್ದೆಯಿಂದ ತೆಗೆಯುವಂತೆ ಒತ್ತಡ ಹಾಕಿದ್ದರು.

ಆದರೆ, ಪ್ರತಿಭಟನೆ ನಡೆಸಿದರೂ ಕೂಡ ಪೊಲೀಸ್ ಇಲಾಖೆ ಅಧಿಕಾರಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಮತ್ತೆ ಇದೇ ರೀತಿಯ ಕೃತ್ಯವನ್ನು ಜನವರಿ 28ರಂದು ಎಸಗಿದ್ದಾರೆ. ಜೊತೆಗೆ, ಪ್ರಕರಣದಲ್ಲಿ ಸಿಲುಕಿಸಲು ಬಯಸಿದ್ದ ಮಕ್ಸೂದ್ ಎಂಬಾತನ ಫೋಟೋ, ಪರ್ಸ್‌ ಅನ್ನು ಕೂಡ ಅಲ್ಲಿ ಎಸೆಯುವಂತೆ ಬಜರಂಗದಳದ ಮುಖಂಡರು ಆರೋಪಿ ಶಹಾಬುದ್ದೀನ್‌ನಿಗೆ ಸೂಚಿಸಿದ್ದರು.

Moradabad

ಬಳಿಕ ಜ.28 ರಾತ್ರಿ ಚೇತ್ರಂಪುರ ಗ್ರಾಮದ ಕಾಡಿನಲ್ಲಿ ರಾತ್ರಿ ಗೋಹತ್ಯೆ ನಡೆದಿರುವುದಾಗಿ ಆರೋಪಿಸಿದ ಬಜರಂಗದಳದ ಮುಖಂಡರು, ಘಟನಾ ಸ್ಥಳದಿಂದಲೇ ಲೈವ್ ವಿಡಿಯೋ ಮಾಡಿದ್ದರು. ಬಳಿಕ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳನ್ನು ಆಗ್ರಹಿಸಿದ್ದರು. ಮಾಹಿತಿಯನ್ನರಿತ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಕ್ಸೂದ್ ಎಂಬಾತನ ಫೋಟೋ, ಪರ್ಸ್‌ ಪತ್ತೆಯಾಗಿದೆ.

ಬಳಿಕ ಮಕ್ಸೂದ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ತನಿಖೆ ನಡೆಸಿದಾಗ, ಹಳೆಯ ವೈಷಮ್ಯ ಇರುವುದರಿಂದ ನನ್ನನ್ನು ಸಿಲುಕಿಸಲು ಷಡ್ಯಂತ್ರ ಮಾಡಿರಬಹುದು ಎಂದು ಮಾಹಿತಿ ನೀಡಿದ್ದರು. ವೈಷಮ್ಯದ ಹಿನ್ನೆಲೆಯನ್ನು ಅರಿತ ಪೊಲೀಸರು, ಮೊಬೈಲ್ ಲೊಕೇಶನ್ ಆಧಾರದ ಮೇಲೆ ಶಹಾಬುದ್ದೀನ್‌ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ತನಿಖೆಯ ವೇಳೆ ಶಹಾಬುದ್ದೀನ್‌ ಎಲ್ಲ ವಿವರಗಳನ್ನು ತಿಳಿಸಿದ್ದಾನೆ. ಈ ವೇಳೆ ಬಜರಂಗದಳದ ಮುಖಂಡರ ಷಡ್ಯಂತ್ರ ಬಯಲಾಗಿದೆ.

ಬಜರಂಗದಳದ ಮುಖಂಡರ ನಡೆಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ ರಚಿಸಿದ್ದ ಪೊಲೀಸರು, ವಶಕ್ಕೆ ಪಡೆದು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದಾರೆ.

“ಬಜರಂಗದಳದ ಮುಖಂಡರ ಸೂಚನೆಯ ಮೇರೆಗೆ ಜನವರಿ 28ರಂದು ರಾತ್ರಿ ಆರೋಪಿಗಳಲ್ಲೋರ್ವನಾದ ಶಹಾಬುದ್ದೀನ್ ಎಂಬಾತ ಮತ್ತೊಬ್ಬ ಸಹಚರ ಜಮ್‌ಶೆಡ್ ಎಂಬಾತನ ಜತೆಗೂಡಿ ಚೇತ್ರಂಪುರ ಗ್ರಾಮದ ಕಮಲಾದೇವಿ ಎಂಬುವವರ ಮನೆಯ ಹೊರಗೆ ಕಟ್ಟಿ ಹಾಕಲಾಗಿದ್ದ ಹಸುವನ್ನು ಕಳವು ಮಾಡಿದ್ದ. ಇದಾದ ಬಳಿಕ ಇಬ್ಬರೂ ಕಾಡಿಗೆ ಹೋಗಿ ಕೊಂದು ಹಾಕಿ, ಅಲ್ಲಿಂದ ತೆರಳಿದ್ದ. ಆ ಬಳಿಕ ಬಜರಂಗದಳದವರಿಗೆ ಮಾಹಿತಿ ನೀಡಿದ್ದ” ಎಂದು ಮೊರಾದಾಬಾದ್ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಬಜರಂಗದಳ ಜಿಲ್ಲಾಧ್ಯಕ್ಷ ಸುಮಿತ್ ವಿಷ್ಣೋಯ್ ಸೇರಿದಂತೆ ಈವರೆಗೆ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಎಲ್ಲರನ್ನೂ ಜೈಲಿಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಮೊರಾದಾಬಾದ್ ಎಸ್‌ಎಸ್‌ಪಿ ತಿಳಿಸಿದ್ದಾರೆ.

ಆರೋಪಿಗಳೊಂದಿಗೆ ಶಾಮೀಲಾಗಿದ್ದ ಪೊಲೀಸ್ ಇನ್ಸ್‌ ಪೆಕ್ಟರ್
ವಿಶೇಷ ಪೊಲೀಸರ ತನಿಖೆಯ ವೇಳೆ ಛಜಲತ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ‌ರ್ ನರೇಂದ್ರ ಕುಮಾರ್ ಅವರು ಆರೋಪಿಗಳೊಂದಿಗೆ ಸಹಕರಿಸಿರುವುದು ಬಯಲಾಗಿದೆ.

“ಇನ್ಸ್ ಪೆಕ್ಟರ್ ಕೂಡ ಆರೋಪಿಗಳನ್ನು ಭೇಟಿಯಾಗಿರುವುದು ಬೆಳಕಿಗೆ ಬಂದಿದೆ. ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಆರೋಪಿಗಳ ಕಾಲ್ ರೆಕಾರ್ಡ್‌ನಲ್ಲಿ ಸಬ್ ಇನ್ಸ್‌ಪೆಕ್ಟ‌ರ್ ಅವರ ಮೊಬೈಲ್ ನಂಬರ್ ಸಂಖ್ಯೆ ಕಾಣಿಸಿಕೊಂಡ ಬಳಿಕ ತನಿಖೆ ನಡೆಸಿದೆವು. ಈ ವೇಳೆ ಸಬ್ ಇನ್ಸ್‌ಪೆಕ್ಟ‌ರ್ ಆರೋಪಿಗಳೊಂದಿಗೆ ಶಾಮೀಲಾಗಿರುವುದು ಕಂಡುಬಂದಿದೆ. ಪೊಲೀಸರ ಪ್ರತಿಯೊಂದು ನಡೆಯ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನರೇಂದ್ರ ಕುಮಾ‌ರ್ ಅವರನ್ನು ಅಮಾನತು ಮಾಡಲಾಗಿದೆ. ಇಲಾಖಾ ತನಿಖೆಗೂ ಆದೇಶಿಸಲಾಗಿದೆ” ಎಂದು ಎಸ್‌ಎಸ್‌ಪಿ ಹೇಮರಾಜ್ ಮೀನಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...