ಬೆಂಗಳೂರು | ಒಳಮೀಸಲಾತಿ ಜಾರಿ : ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲು ಹಂದಿಜೋಗೀಸ್ ಸಂಘ ಆಗ್ರಹ

Date:

ಒಳಮೀಸಲಾತಿ ಹಂಚಿಕೆ ಮಾಡುವಾಗ ಹೆಚ್ಚು ಹಿಂದುಳಿದ ಪರಿಶಿಷ್ಟ ಜಾತಿಯ ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಬೇಕು ಎಂದು ಹೈಕೋರ್ಟ್ ವಕೀಲ ಹೆಚ್.ವಿ.ಮಂಜುನಾಥ್ ತಿಳಿಸಿದರು.

ಬೆಂಗಳೂರಿನ ಕಾನಿಷ್ಕ ಹೋಟೆಲ್ ನಲ್ಲಿ ಅಖಿಲ ಕರ್ನಾಟಕ ಹಂದಿಜೋಗಿಸ್ ಸಂಘ ದಿಂದ ಆಯೋಜಿಸಿದ್ದ ಒಳಮೀಸಲಾತಿ ಚರ್ಚೆಯ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಜಾತಿಗೆ ಪ್ರಾತಿನಿಧ್ಯದ ಕೊರತೆ ಇದ್ದಲ್ಲಿ ಆ ಸಮುದಾಯ ಹಿಂದುಳಿದಿದೆ ಎಂದರ್ಥ, ಪರಿಶಿಷ್ಟ ಜಾತಿಯ ಒಳಗೇ ಅತಿ ಹಿಂದುಳಿದ ಜಾತಿಗಳಿಗೆ ಒಳಮೀಸಲಾತಿ ಜಾರಿಯಾದಲ್ಲಿ ಅತಿ ಹಿಂದುಳಿದ ಪರಿಶಿಷ್ಟ ಜಾತಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮೀಸಲಾತಿಯು ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕವಾಗಿ ನ್ಯಾಯ ದೊರಕಿಸಬೇಕೆಂಬುದಾಗಿದ್ದು, ಪರಿಶಿಷ್ಟ ಜಾತಿಯಲ್ಲೇ ಅತಿ ಹಿಂದುಳಿದಿರುವ ಜಾತಿಗಳಿಗೆ ನ್ಯಾಯ ಒದಗಿಸಬೇಕಾಗಿರುವುದರಿಂದ ಒಳಮೀಸಲಾತಿ ಜಾರಿ ಅಗತ್ಯವಿದ್ದು, ರಾಜ್ಯ ಸರ್ಕಾರಗಳೇ ಒಳಮೀಸಲಾತಿ ಕಲ್ಪಿಸುವ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಬಂದಿದ್ದು, ಒಳಮೀಸಲಾತಿಗೆ ಜಾರಿಗಿದ್ದ ಅಡ್ಡಿ ಆತಂಕಗಳು ದೂರವಾಗಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಳಮೀಸಲಾತಿ ಜಾರಿ ಸಂದರ್ಭದಲ್ಲಿ ಜಾರಿ ಮಾಡಲು ಪರಿಶಿಷ್ಟ ಜಾತಿಯ ಸಮೀಕ್ಷೆಗೆ ಸರ್ಕಾರ ಸೂಚಿಸಿದಲ್ಲಿ ಜಾತಿಯ ಜನಸಂಖ್ಯೆಯ ಆಧಾರದ ಮೇಲೆ ಒಳ ಮೀಸಲಾತಿಯನ್ನು ವರ್ಗೀಕರಣ ಮಾಡುವುದರಿಂದ ಹಂದಿಜೋಗಿ ಜನಾಂಗದವರು ತಮ್ಮ ಜಾತಿಯನ್ನು ಹಂದಿಜೋಗಿ ಎಂದು ಬರೆಸಿದಾಗ ಜಾತಿಯ ನಿಖರ ಸಂಖ್ಯೆ ಗೊತ್ತಾಗಲಿದ್ದು, ಒಳಮೀಸಲಾತಿ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ನಮ್ಮ ಪಾಲಿನ ಒಳಮೀಸಲಾತಿ ಪಡೆಯಲು ನಾವೆ ಹೋರಾಟ ನಡೆಸಬೇಕು, ಅರಿವು ಮೂಡಿಸುವ ಅಗತ್ಯವಿದ್ದು, ಹಂದಿಜೋಗಿ ಜನಾಂಗವು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ತೀವ್ರ ಹಿಂದುಳಿದಿದೆ ಈ ಹಿನ್ನೆಲೆಯಲ್ಲಿ ಜನಾಂಗದ ಜನಸಂಖ್ಯೆ ಯ ಅಂಕಿ ಅಂಶಗಳ ಆಧಾರದ ಮೇಲೆ ಒಳಮೀಸಲಾತಿ ವರ್ಗೀಕರಣ ವಾಗುತ್ತದೆ ಎಂದು ಹೇಳಿದರು.

ಒಳಮೀಸಲಾತಿ ಜಾರಿಗೆ ನಡೆಯುವ ಗಣತಿ ಸಂದರ್ಭದಲ್ಲಿ ಹಂದಿಜೋಗಿ ಸಮಾಜದವರು ತಪ್ಪದೇ ಹಂದಿಜೋಗಿ ಎಂದು ಜಾತಿ ಕಾಲಂನಲ್ಲಿ ಬರೆಸಬೇಕೆಂದು ತಿಳಿಸಿದರು.

ಇತ್ತೀಚೆಗೆ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವ ಹೆಚ್ಚಿದ್ದು, ಸರ್ಕಾರವು ಜಾತಿ ಪ್ರಮಾಣ ನೀಡುವವರಿಗೆ ಸರ್ಕಾರ ತರಬೇತಿ ನೀಡುವುದು ಅಗತ್ಯವಿದೆ, ಆಗ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟಲು ಸಾಧ್ಯ ಎಂದು ಹೇಳಿದರು.

ಸಭೆಯಲ್ಲಿ ಅಖಿಲ ಕರ್ನಾಟಕ ಹಂದಿಜೋಗಿಸ್ ಸಂಘದ ಅಧ್ಯಕ್ಷ ರಾಜೇಂದ್ರಕುಮಾರ್, ಕಾರ್ಯದರ್ಶಿ ಮಂಡ್ಯ ರಾಜು, ಜನಾಂಗದ ಮುಖಂಡರಾದ ಎಂ.ವಿ.ಗೋವಿಂದರಾಜು, ಪಿಳ್ಳಣ್ಣ, ಯಲ್ಲಪ್ಪ, ಶಿಕ್ಷಕ ಯಲ್ಲಯ್ಯ, ಜನಾಂಗದ ಮುಖಂಡ ಎಂ.ವಿ.ಗೋವಿಂದರಾಜು, ಪಿಳ್ಳಣ್ಣ, ಯಲ್ಲಪ್ಪ, ಶಿಕ್ಷಕ ಯಲ್ಲಯ್ಯ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...