ಬೆಳಗಾವಿ : ತಮ್ಮನಿಗೆ ಹೃದಯಾಘಾತದ ಸುದ್ದಿ ಕೇಳಿ ಅಣ್ಣನಿಗೂ ಹೃದಯಾಘಾತ : ಇಬ್ಬರೂ ಸಾವು

Date:

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ ನಡೆದ ಹೃದಯ ಕಲುಕುವ ಘಟನೆ ಊರನ್ನೇ ಶೋಕಸಾಗರಕ್ಕೆ ತಳ್ಳಿದೆ. ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಸಹೋದರರು ಹೃದಯಾಘಾತದಿಂದ ಮೃತಪಟ್ಟಿದ್ದಾರ

ಎಸ್‌.ಎಲ್‌.ಸಿ. ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಹೃದಯಾಘಾತ ಉಂಟಾಗಿ ಅಸ್ವಸ್ಥರಾಗಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅವರ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿ ಊರಿನಲ್ಲಿ ಹರಡಿತು.

ಈ ಸುದ್ದಿಯನ್ನು ಕೇಳಿದ ಅಣ್ಣ ಬಸವರಾಜ ಬಾಗನ್ನವರ (24) ತೀವ್ರ ಆಘಾತಕ್ಕೆ ಒಳಗಾಗಿ ಅಚಾನಕ್ ಕುಸಿದು ಬಿದ್ದರು. ಅವರನ್ನು ಕೂಡ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸತೀಶ ಮೃತಪಟ್ಟಿದ್ದಾನೆ ಎಂಬ ಸುದ್ದಿ ಕೇಳಿಬಂದಿತು. ಅದೇ ಕ್ಷಣದಲ್ಲಿ ಬಸವರಾಜಗೂ ಹೃದಯಾಘಾತ ಉಂಟಾಗಿ ಪ್ರಾಣ ಕಳೆದುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಪತಿ ಮತ್ತು ಮೈದುನ ಇಬ್ಬರ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ಪವಿತ್ರಾ (20) ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲೆಯಾಗಿದ್ದಾರೆ. ಆಕೆ ತುಂಬು ಗರ್ಭಿಣಿಯಾಗಿದ್ದು, ಈಗ ಚೇತರಿಕೆ ಕಾಣುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇಬ್ಬರು ಗಂಡು ಮಕ್ಕಳ ಕಣ್ಮುಂದೆ ಸಾವನ್ನಪ್ಪಿದ ಪರಿಣಾಮ ತಂದೆ–ತಾಯಿ ಶೋಕದ ಸಾಗರದಲ್ಲಿ ಮುಳುಗಿದ್ದಾರೆ. ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದರೆ, ಬಸವರಾಜ ಸ್ಥಳೀಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ಸಹೋದರರ ಅಕಾಲಿಕ ಮರಣದಿಂದ ಕಪರಟ್ಟಿ ಗ್ರಾಮದಲ್ಲಿ ಅಳಲು, ಶೋಕ, ನಂಬಲಾರದ ವಾತಾವರಣ ನಿರ್ಮಾಣವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...