ಬೆಳಗಾವಿ | ʼಕನ್ನಡ ಸಂಶೋಧನಾ ಲೋಕಕ್ಕೆ ಬಹುಶಿಸ್ತೀಯ ಅಧ್ಯಯನ ಮಾದರಿ ನೀಡಿದವರು ಡಾ.ಶಂಬಾ ಜೋಶಿʼ

Date:

ಕನ್ನಡ ಸಂಸ್ಕೃತಿ, ಭಾರತೀಯ ಸಂಸ್ಕೃತಿ ಹಾಗೂ ಜಾಗತಿಕ ಸಂಸ್ಕೃತಿಗಳ ಹಲವು ಜ್ಞಾನಶಿಸ್ತುಗಳನ್ನು ಆಧರಿಸಿ ಸಂಶೋಧನೆಗಿಳಿದ ಶಂಬಾ ಅವರು ಕನ್ನಡ ಸಂಶೋಧನಾ ಲೋಕಕ್ಕೆ ಬಹುಶಿಸ್ತೀಯ ಅಧ್ಯಯನ ಮಾದರಿಯನ್ನು ನೀಡಿದವರು ಎಂದು ಪ್ರೊ. ಬಸವರಾಜ ಕಲ್ಗುಡಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಡಾ.ಶಂಬಾ ಜೋಶಿ ಅಧ್ಯಯನ ಪೀಠಗಳ ಸಹಯೋಗದೊಂದಿಗೆ, ಡಾ.ಶಂಬಾ ಜೋಶಿ, ಮರುಚಿಂತನೆ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶಂಬಾ ಅವರು ಕನ್ನಡ ಸಂಶೋಧನಾ ಲೋಕಕ್ಕೆ ಬಹುಶಿಸ್ತೀಯ ಮಾದರಿಯ ಅಧ್ಯಯನ ಕ್ರಮಕ್ಕೆ ಮೇಲ್ಪಂಕ್ತಿಯನ್ನು ಹಾಕಿದವರು. ಅವರ ಕುರಿತು ಅನೇಕ ನೆಲೆಗಳಲ್ಲಿ ಅಧ್ಯಯನಗಳು ನಡೆಯಬೇಕಿದೆ. ಪ್ರಸ್ತುತ ದಿನಗಳಲ್ಲಿ ಅವರ ಅಧ್ಯಯನಗಳ ಪ್ರಸ್ತುತತೆಯ ಅನಿವಾರ್ಯತೆಯ ಕುರಿತು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರಂಭವನ್ನು ಉದ್ಘಾಟಿಸಿದ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಿ.ವಿ. ಪರಮಶಿವಮೂರ್ತಿ, ಮಾನವಿಕ ವಿಜ್ಞಾನಗಳ ಸಂಶೋಧನೆಗೆ ಮೂಲಗಾಮಿ ಚಿಂತನೆಯ ಪರಿಕಲ್ಪನೆಯನ್ನು ಬೆಳಗಾವಿ ಜಿಲ್ಲೆಯವರಾದ ಡಾ. ಶಂಬಾ ಅವರೇ ಮೊದಲು ನಾಡಿಗೆ ನೀಡಿದರು. ಅಂದಿನಿಂದ ಬಹುಶಿಸ್ತೀಯ ಹಾಗೂ ಅಂತರ್‌ಶಿಸ್ತೀಯ ಮಾನವಿಕ ಅಧ್ಯಯನಗಳು ಹೊಸದಾಗಿ ಕಟ್ಟಿಕೊಳ್ಳತೊಡಗಿದವು. ಆ ಕಾರಣಕ್ಕಾಗಿ ಬೆಳಗಾವಿ ಜಿಲ್ಲೆಯ ಸಂಶೋಧನಾ ಪರಂಪರೆಯನ್ನು ಅಭಿನಂದಿಸಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರೊ. ಎಸ್.ಎಂ. ಗಂಗಾಧರಯ್ಯ ಅವರು ನಾಡಿನ ಶ್ರೇಷ್ಠ ಸಂಸ್ಕೃತಿ ಚಿಂತಕನ ಕುರಿತು ಹೊಸದಾಗಿ ಅಧ್ಯಯನಗಳು ಕಟ್ಟಿಕೊಳ್ಳಬೇಕಾಗಿದೆ. ಡಾ. ಶಂಬಾ ಅವರು ಬೆಳಗಾವಿ ಜಿಲ್ಲೆಯ ತವರಿನವರಾದರೂ ಬೆಳಗಾವಿ ಜಿಲ್ಲೆಯ ಜನತೆಗೆ ಡಾ. ಶಂಬಾ ಅವರ ವಿಚಾರಧಾರೆಗಳು ತಲುಪುವಲ್ಲಿ ಸಫಲವಾಗಿಲ್ಲ. ಈಗ ಆ ಕಾರ್ಯವನ್ನು ಕನ್ನಡ ಅಧ್ಯಯನ ಸಂಸ್ಥೆಯು ಕೈಗೆತ್ತಿಕೊಂಡಿದೆ ಎಂದರು.

ವಿಚಾರ ಸಂಕಿರಣದಲ್ಲಿ ಡಾ. ಶಂಬಾ: ಸ್ಥಳನಾಮಗಳ ಪರಿಕಲ್ಪನೆಯ ಅಧ್ಯಯನಗಳು ಹಾಗೂ ಕರ್ನಾಟಕ ಸಂಸ್ಕೃತಿಯ ಪೂರ್ವ ಪೀಠಿಕೆ ಮತ್ತು ಕನ್ನಡತ್ವದ ಪ್ರಾಚೀನ ಶೋಧಗಳು ಎನ್ನುವ ಪ್ರಬಂಧಗಳು ಮಂಡನೆಯಾದವು.

ಡಾ. ಎಸ್.ಎಸ್. ಅಂಗಡಿ, ಡಾ. ಜಿ.ವಿ. ರಾಜಣ್ಣ, ಡಾ. ಕೆ.ರಾಮರೆಡ್ಡಿ, ಡಾ. ವಿ.ಎಸ್. ಮಾಳಿ, ಡಾ. ವಾಯ್.ಎಂ. ಯಾಕೊಳ್ಳಿ, ದೀಪಕ ಕೃಷ್ಣ ಆಲೂರು ಅಧ್ಯಯನ ಪೀಠದ ಸಂಚಾಲಕರಾದ ಪ್ರೊ. ವಿರೂಪಾಕ್ಷಿ ಪೂಜಾರಹಳ್ಳಿ, ಡಾ. ಶೋಭಾ ನಾಯಕ ಈ ಗೋಷ್ಠಿಗಳಲ್ಲಿ ಪಾಲ್ಗೊಂಡಿದ್ದರು.

ಡಾ. ಚಲುವರಾಜು ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರೊ. ಗುಂಡಣ್ಣ ಕಲಬುರ್ಗಿ ಅವರು ಉಪಸ್ಥಿತರಿದ್ದರು. ವಿವಿಧ ಗೋಷ್ಠಿಗಳನ್ನು ಡಾ. ಗಜಾನನ ನಾಯ್ಕ, ಡಾ. ಮಹೇಶ ಗಾಜಪ್ಪನವರ, ಡಾ. ಪಿ. ನಾಗರಾಜ, ಡಾ. ಹನುಮಂತಪ್ಪ ಸಂಜೀವಣ್ಣನವರ ನಡೆಸಿಕೊಟ್ಟರು. ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳ ಅಧ್ಯಾಪಕರುಗಳು, ಸ್ನಾತಕೋತ್ತರ ವಿಭಾಗಗಗಳ ಅಧ್ಯಾಪಕರುಗಳು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...