ಭೀಮಾ ಕೋರೆಗಾಂವ್ ಪ್ರಕರಣ | ಹೋರಾಟಗಾರ ಮಹೇಶ್ ರಾವತ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು

Date:

  • 2018ರ ಜೂನ್‌ನಲ್ಲಿ ಬಂಧಿಸಲ್ಪಟ್ಟಿದ್ದ ಹೋರಾಟಗಾರ ಮಹೇಶ್ ರಾವುತ್‌
  • ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜಾಮೀನು ಪಡೆದ ಆರನೇ ವ್ಯಕ್ತಿ ರಾವತ್

2018ರ ಭೀಮಾ ಕೋರೆಗಾಂವ್ ಗಲಭೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಹೋರಾಟಗಾರ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಪ್ರಾಧಿಕಾರ (ಎನ್‌ಐಎ) ಕಾಲಾವಕಾಶ ಕೋರಿದ ನಂತರ ನ್ಯಾಯಾಲಯವು ಜಾಮೀನು ಆದೇಶಕ್ಕೆ ಒಂದು ವಾರಗಳ ಕಾಲ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜಾಮೀನು ಪಡೆದ ಆರನೇ ವ್ಯಕ್ತಿ ರಾವತ್ ಆಗಿದ್ದು, ಈ ಮೊದಲು ಸುಧಾ ಭಾರದ್ವಾಜ್, ವರವರ ರಾವ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಜಾಮೀನು ಪಡೆದವರು. ಈ ಪೈಕಿ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನೀಡಲಾಗಿತ್ತು.

ಸುಪ್ರೀಂ ಕೋರ್ಟ್ ಆದೇಶದ ನಂತರ ಮತ್ತೊಬ್ಬ ಆರೋಪಿ ಸ್ಥಾನದಲ್ಲಿರುವ ಗೌತಮ್ ನವ್ಲಾಖಾ ಅವರನ್ನು ಜೈಲಿನಲ್ಲಿಡುವ ಬದಲು ಗೃಹಬಂಧನದಲ್ಲಿ ಇರಿಸಲಾಗಿದೆ.

ಈ ಪ್ರಕರಣದಲ್ಲಿ ರಾವತ್ ಅವರನ್ನು2018ರ ಜೂನ್‌ನಲ್ಲಿ ಬಂಧಿಸಲಾಗಿತ್ತು. ಎನ್‌ಐಎ ವಿಶೇಷ ನ್ಯಾಯಾಲಯವು ನವೆಂಬರ್ 2021ರಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ರಾವತ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮಿಹಿರ್ ದೇಸಾಯಿ ಮತ್ತು ವಕೀಲ ವಿಜಯ್ ಹಿರೇಮಠ ಅವರು ಸಹ ಆರೋಪಿಗಳಾದ ಆನಂದ್ ತೇಲ್ತುಂಬ್ಡೆ, ಅರುಣ್ ಫೆರೇರಾ ಮತ್ತು ವೆರ್ನಾನ್ ಗೊನ್ಸಾಲ್ವಿಸ್ ಅವರಂತೆಯೇ ಸಮಾನತೆಯ ಆಧಾರದ ಮೇಲೆ ಅವರಿಗೆ ಜಾಮೀನು ನೀಡಬೇಕೆಂದು ವಿನಂತಿಸಿದರು.

ರಾವತ್ ಅವರು ಈಗಾಗಲೇ 5 ವರ್ಷಗಳ ಕಾಲ ಜೈಲಿನಲ್ಲಿದ್ದಾರೆ ಮತ್ತು ವಿಚಾರಣೆ ಇನ್ನೂ ಪ್ರಾರಂಭವಾಗದ ಕಾರಣ ಬಿಡುಗಡೆಗೆ ಅರ್ಹರು ಎಂದು ಅವರು ವಾದಿಸಿದರು.

ರಾವತ್ ಅವರ ಮೇಲಿರುವ ಆರೋಪಗಳು ಬಹಳ ಗಂಭೀರವಾದದ್ದು. ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ವಿರುದ್ಧವಾಗಿದೆ. ಹಾಗಾಗಿ ಜಾಮೀನು ನೀಡದಂತೆ ಎನ್‌ಐಎ ಪರ ವಕೀಲ ಸಂದೇಶ್ ಪಾಟೀಲ್ ಅವರೊಂದಿಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ದೇವಾಂಗ್ ವ್ಯಾಸ್ ವಿರೋಧಿಸಿದರು. ಆದರೆ ಇದನ್ನು ಪುರಸ್ಕರಿಸದ ನ್ಯಾಯಾಲಯವು, ಜಾಮೀನು ಮಂಜೂರು ಮಾಡಿದೆ.

ಅದಾಗಿಯೂ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಒಂದು ವಾರಗಳ ಕಾಲ ಎನ್‌ಐಎಗೆ ಅವಕಾಶ ನೀಡಿದ್ದು, ಜಾಮೀನು ಆದೇಶಕ್ಕೆ ಒಂದು ವಾರಗಳ ಕಾಲ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...