ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು, ಆಸ್ಪತ್ರೆಯ ಕೆಲ ಪುರುಷ ಸಿಬ್ಬಂದಿಗಳ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.
ಬ್ರಿಮ್ಸ್ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಿಲೋಫರ್ ಅವರನ್ನು ಸೋಮವಾರ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.
ಈ ಘಟನೆಯನ್ನು ಸಂಪೂರ್ಣ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರಿಗೆ ಸಚಿವರು ಸೂಚಿಸಿದರು.
ಮಹಿಳಾ ಸಿಬ್ಬಂದಿಗಳ ಸುರಕ್ಷತೆ ಹಾಗೂ ಗೌರವದ ವಿಚಾರದಲ್ಲಿ ಯಾವುದೇ ನಿರ್ಲಕ್ಷ ಸಹಿಸಲಾಗದು. ಬ್ರಿಮ್ಸ್ನ ಎಲ್ಲಾ ಸಿಬ್ಬಂದಿಗಳಿಗೆ ಸಕಾಲಕ್ಕೆ ಸಂಬಳ ಪಾವತಿಸುವಂತೆ ನಿರ್ದೇಶಕಿ ಶಾಂತಲಾ ಕೌಜಲಗಿ ಅವರಿಗೆ ಖಡಕ್ ಸೂಚನೆ ನೀಡಿದರು.
ಇದನ್ನೂ ಓದಿ : ಕರ್ನಾಟಕದಲ್ಲೊಂದು ‘ಮಿನಿ ಇರಾನ್’- ಖೊಮೈನಿ ಜೊತೆ ಅಲಿಪುರಕ್ಕಿರುವ ನಂಟೇನು?
ಈ ಸಂದರ್ಭದಲ್ಲಿ ಬ್ರಿಮ್ಸ್ ನಿರ್ದೇಶಕಿ ಡಾ.ಶಾಂತಲಾ ಕೌಜಲಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬ್ರಿಮ್ಸ್ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.





