ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಾಂತ್ಯಗಳನ್ನು ಒಗ್ಗೂಡಿಸಿ ಏಕೀಕರಣದ ಮೂಲಕ ಅಖಂಡ ರಾಷ್ಟ್ರ ಕಟ್ಟಿದ ಧೀಮಂತ ನಾಯಕ ಎಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅಧ್ಯಯನ ಕೇಂದ್ರದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹೇಳಿದರು.
ಭಾಲ್ಕಿ ಪಟ್ಟಣದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಧ್ಯಯನ ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಕಾರ್ಯಕ್ರಮದಲ್ಲಿ
ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.
‘ಪಟೇಲ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀಮಂತ ನಾಯಕರು. ಅವರು ದೇಶದ ರಕ್ಷಣಾ ವ್ಯವಸ್ಥೆ ಬಲಪಡಿಸುವ ಮತ್ತು ದೇಶ ಒಗ್ಗೂಡಿಸುವ ಕನಸ್ಸು ಕಂಡಿದ್ದರು. ಅಧಿಕಾರ ವಿಕೇಂದ್ರೀಕರಣ, ಧಾರ್ಮಿಕ ಸಮಾನತೆ ಪಾಲಿಸುವಲ್ಲಿ ಮುಂಚೂಣಿಯಲ್ಲಿದ್ದರು. ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅನುಸರಿಸಿ ಸದೃಢ ರಾಷ್ಟ್ರ
ನಿರ್ಮಾಣಕ್ಕೆ ಕೈ ಜೋಡಿಸಬೇಕು’ ಎಂದು ತಿಳಿಸಿದರು.
ಮರಾಠಾ ಸಮಾಜದ ಹಿರಿಯ ಮುಖಂಡ ಕಿಶನರಾವ ಪಾಟೀಲ್ ಇಂಚೂರಕರ್ ಅವರು ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಇದನ್ನೂ ಓದಿ : ಬೀದರ್ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ : ಸಚಿವ ಈಶ್ವರ ಖಂಡ್ರೆ
ಈ ಸಂದರ್ಭದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ವಿವಿಧ ಸಂಘಟನೆಗಳ ಪ್ರಮುಖರಾದ ಜೈರಾಜ ಕೊಳ್ಳಾ, ಸಂಗಮೇಶ ಗುಮ್ಮೆ, ಚಂದು ಸಂಪಂಗೆ, ಸಂತೋಷ ಹಡಪದ, ಶಿವಪುತ್ರ ದಾಬಶೆಟ್ಟೆ, ಸಂಗಮೇಶ ಗುಮ್ಮೆ, ವಿಜಯ ವಾರದ, ವಿಠಲರಾವ ಮೇತ್ರೆ, ಶಿವಾಜಿ ಕಾಲೇಜಿನ ಪ್ರಾಚಾರ್ಯ ನೀಲಕಂಠ ಕಾಳೆ, ಮೀನಾಕ್ಷಿ ಕಾಳೆ ಸೇರಿದಂತೆ ಎನ್ಸಿಸಿ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.





