ಬಿಪೊರ್‌ಜಾಯ್ ಭೀತಿ | ತಾತ್ಕಾಲಿಕ ಶಿಬಿರಗಳಿಗೆ 37,800 ಮಂದಿಯ ಸ್ಥಳಾಂತರ

Date:

ಬಿಪೊರ್‌ಜಾಯ್ ಚಂಡಮಾರುತದ ಭೀತಿಯ ಹಿನ್ನಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಬುಧವಾರ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪರಿಶೀಲನಾ ಸಭೆ ನಡೆಸಿದ್ದಾರೆ.

ಗುಜರಾತ್‌ನ ಜಖೌ ಬಂದರು ಸಮೀಪದಲ್ಲಿ ಇದೇ 15ರಂದು(ಗುರುವಾರ) ಪ್ರಬಲ ಚಂಡಮಾರುತ ಬಿಪೊರ್‌ಜಾಯ್‌, ಸುಮಾರು 110 ಕಿಮೀ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಕರಾವಳಿ ಪ್ರದೇಶಗಳ ವ್ಯಾಪ್ತಿಯಲ್ಲಿನ ಜನರನ್ನು ಸ್ಥಳಾಂತರಿಸುವ ಕಾರ್ಯ ಭರದಿಂದ ಸಾಗಿದೆ.

37,800 ಮಂದಿಯ ಸ್ಥಳಾಂತರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿ ಹೆಚ್ಚಿನ ಹಾನಿಯಾಗುವ ಭೀತಿ ಎದುರಿಸುತ್ತಿರುವ ಕಚ್‌, ದೇವಭೂಮಿ ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳು ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿನ ಕರಾವಳಿ ಪ್ರದೇಶಗಳ 10 ಕಿ.ಮೀ. ವ್ಯಾಪ್ತಿಯಲ್ಲಿನ  37,800 ಮಂದಿಯನ್ನು ಈಗಾಗಲೇ ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಾದ್ಯಂತ ಬಿರುಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ. ಅತಿ ತೀವ್ರತೆಯ ಚಂಡಮಾರುತವಾಗಿ ಮಾರ್ಪಾಡಾಗಿರುವ ಬಿಪೊರ್‌ಜಾಯ್‌ ಉತ್ತರ-ಈಶಾನ್ಯಕ್ಕೆ ಚಲಿಸುತ್ತಿದೆ. ಗುಜರಾತ್‌ನ ಸೌರಾಷ್ಟ್ರ ಮತ್ತು ಕಛ್‌ ಹಾಗೂ ಪಾಕಿಸ್ತಾನದ ಕರಾಚಿ ಕರಾವಳಿಯನ್ನು 125-150 ಕಿ.ಮೀ. ವೇಗದೊಂದಿಗೆ ಹಾದು ಹೋಗಲಿದೆ. ಗುರುವಾರ ಸಂಜೆ, ಗುಜರಾತ್‌ನ ಜಖೌ ಬಂದರಿನ ಸಮೀಪವೇ ಬಿಪೊರ್‌ಜಾಯ್ ಚಂಡಮಾರುತವು ಸುಮಾರು 110 ಕಿಮೀ ವೇಗದಲ್ಲಿ ಅಪ್ಪಳಿಸುವ ನಿರೀಕ್ಷೆಯಿದೆ. ಈ ಚಂಡಮಾರುತವು ಭಾರೀ ಪ್ರಮಾಣದಲ್ಲಿ ಹಾನಿ ಉಂಟುಮಾಡಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಶಾಲೆಗಳು ಬಂದ್

ಗುಜರಾತ್‌ನ ಐದು ಹೆಚ್ಚು ಪೀಡಿತ ಜಿಲ್ಲೆಗಳಾದ ಕಚ್, ಪೋರಬಂದರ್, ಅಮ್ರೇಲಿ, ಗಿರ್ ಸೋಮನಾಥ್, ದ್ವಾರಕಾದಲ್ಲಿ ಎರಡು ದಿನಗಳ ಕಾಲ ಶಾಲೆಗಳನ್ನು ಮುಚ್ಚಲಾಗಿದೆ. ಬುಧವಾರ ನಡೆಯಬೇಕಿದ್ದ ಗುಜರಾತ್ ಸರ್ಕಾರದ ಕ್ಯಾಬಿನೆಟ್ ಸಭೆಯನ್ನು ರದ್ದುಗೊಳಿಸಲಾಗಿದ್ದು, ಎಲ್ಲಾ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಉಳಿಯುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...