ಬಿಜೆಪಿ ಒಂದು ವಿಷಸರ್ಪ, ಎಐಎಡಿಎಂಕೆ ಕಸದ ರಾಶಿ: ಉದಯನಿಧಿ ಸ್ಟಾಲಿನ್

Date:

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿ ಬಲಪಂಥೀಯರ ಕೋಪಕ್ಕೆ ಗುರಿಯಾಗಿದ್ದ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಈಗ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಬಿಜೆಪಿ ಒಂದು ವಿಷ ಸರ್ಪ’ ಎಂದಿರುವ ಅವರು, ‘ಅದನ್ನು ತಮಿಳುನಾಡಿನಿಂದ ಹೊರಗೆ ಅಟ್ಟಬೇಕಿದೆ’ ಎಂದಿದ್ದಾರೆ.

ಕಡಲೂರಿನಲ್ಲಿ ಡಿಎಂಕೆ ಶಾಸಕ ಸಭಾ ರಾಜೇಂದ್ರನ್ ಅವರ ಮನೆಯ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಅವರು, ತಮಿಳುನಾಡಿನಲ್ಲಿ ಬಿಜೆಪಿ ಮಿತ್ರಪಕ್ಷವಾದ ಎಐಎಡಿಎಂಕೆಯನ್ನೂ ಟೀಕಿಸಿದ್ದಾರೆ. ‘ಎಐಎಡಿಎಂಕೆ ವಿಷಸರ್ಪಕ್ಕೆ ಆಶ್ರಯ ನೀಡಿರುವ ಒಂದು ಕಸದ ರಾಶಿ’ ಎಂದು ಅವರು ವಿಶ್ಲೇಷಿಸಿದ್ದಾರೆ. ‘ಕಸವನ್ನು ಕೂಡ ತೊಲಗಿಸಬೇಕಿದೆ’ ಎಂದು ಅವರು ಕರೆ ನೀಡಿದ್ದಾರೆ.

‘ಕಸದಲ್ಲಿ ಆಶ್ರಯ ಪಡೆದಿರುವ ಸರ್ಪ ನಮ್ಮ ಮನೆಗಳಿಗೆ ನುಗ್ಗುತ್ತಿದೆ. ಹಾವನ್ನು ಇಲ್ಲವಾಗಿಸಬೇಕೆಂದರೆ, ಮೊದಲು ಕಸ ಇಲ್ಲದಂತೆ ನೋಡಿಕೊಳ್ಳಬೇಕು. ಹೀಗಾಗಿ ತಮಿಳುನಾಡಿನ ಜನ 2024ರಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆಯನ್ನು ಕಿತ್ತೊಗೆಯಬೇಕು’ ಎಂದು ಅವರು ಕರೆ ನೀಡಿದರು. ‘2021ರ ವಿಧಾನಸಭಾ ಚುನಾವಣೆಯಲ್ಲಿ ನಾವು ಅವರ ಗುಲಾಮರನ್ನು ಕಿತ್ತೊಗೆದಿದ್ದೇವೆ. 2024ರ ಲೋಕಸಭಾ ಚುನಾವಣೆಯಲ್ಲಿ ಅವರ ಧಣಿಗಳನ್ನೂ ಒದ್ದೋಡಿಸಬೇಕಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸನಾತನ ಧರ್ಮದ ಬಗ್ಗೆ ತಾವು ಮುಂದೆಯೂ ಮಾತನಾಡುತ್ತಲೇ ಇರುವುದಾಗಿ ಇದೇ ಸಂದರ್ಭದಲ್ಲಿ ಅವರು ತಿಳಿಸಿದರು. ‘ತಮಿಳುನಾಡಿನಲ್ಲಿ ಕಳೆದ 100 ವರ್ಷಗಳಿಂದ ಸನಾತನ ಧರ್ಮದ ವಿರುದ್ಧದ ಧ್ವನಿ ಕೇಳಿಬರುತ್ತಿದೆ. ಇನ್ನೂ 200 ವರ್ಷ ನಾವು ಅದನ್ನು ಮುಂದುವರೆಸುತ್ತೇವೆ’ ಎಂದು ಅವರು ನುಡಿದರು.

ಈ ಸುದ್ದಿ ಓದಿದ್ದೀರಾ: ಉದಯನಿಧಿ ಎಂಬ ಉದಯಸೂರ್ಯ!

‘ಸನಾತನ ಧರ್ಮದ ಬಗೆಗಿನ ಟೀಕೆಗಳು ಹೊಸದೇನಲ್ಲ’ ಎಂದ ಉದಯನಿಧಿ, ‘ಡಾ.ಬಿ.ಆರ್.ಅಂಬೇಡ್ಕರ್, ಪೆರಿಯಾರ್, ಕರುಣಾನಿಧಿ ಈ ಹಿಂದೆ ಅನೇಕ ಸಂದರ್ಭಗಳಲ್ಲಿ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಸನಾತನ ಧರ್ಮಕ್ಕೆ ಸಮರ್ಥ ವಿರೋಧ ವ್ಯಕ್ತವಾಗಿದ್ದರಿಂದಲೇ ಮಹಿಳೆಯರು ಹೊಸಿಲು ಬಿಟ್ಟು ಹೊರಬರುವಂತಾಯಿತು, ಸತಿ ಪದ್ಧತಿಯಂಥ ಅನಿಷ್ಟ ಆಚರಣೆಗಳು ಅಂತ್ಯಗೊಂಡವು. ಡಿಎಂಕೆ ಹುಟ್ಟಿಕೊಂಡದ್ದೇ ಅಂಥ ಅನಿಷ್ಟ ಆಚರಣೆಗಳ ವಿರೋಧದ ತಾತ್ವಿಕತೆಯ ಮೇಲೆ. ಆದರೆ, ಈಗ ಬಿಜೆಪಿಯು ನನ್ನ ಹೇಳಿಕೆಗಳನ್ನು ಸಂಪೂರ್ಣವಾಗಿ ತಿರುಚಿ, ನಾನು ಹೇಳದೇ ಇರುವುದನ್ನು ಪ್ರಚಾರ ಮಾಡುತ್ತಿದೆ’ ಎಂದು ಅವರು ಕಿಡಿ ಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...