Live Updates | ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸುವಾಗ ಎಡವಿದ ಜಯ್ ಶಾ; ಟ್ವಿಟರ್‌ನಲ್ಲಿ ಟ್ರೋಲ್

Date:

28 Sep 2023, 03:45 PM

ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸುವಾಗ ಎಡವಿದ ಜಯ್ ಶಾ; ಟ್ವಿಟರ್‌ನಲ್ಲಿ ಟ್ರೋಲ್

ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಸಾಲಿನ ಏಷ್ಯನ್‌ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್‌ನಲ್ಲಿ ಶ್ರೀಲಂಕಾವನ್ನು ಭಾರತೀಯ ಮಹಿಳಾ ತಂಡವು 19 ರನ್‌ಗಳಿಂದ ಸೋಲಿಸಿ, ಚಿನ್ನದ ಪದಕ ಗಳಿಸಿತ್ತು. ಹೀಗಾಗಿ, ಮಹಿಳಾ ತಂಡವನ್ನು ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಗ ಜಯ್ ಶಾ ಅಭಿನಂದನಾ ಭಾಷಣ ಮಾಡುವ ವೇಳೆ ಎಡವಿದ್ದು, ಈ ವಿಡಿಯೋ ಈಗ ಟ್ವಿಟರ್‌ನಲ್ಲಿ ಟ್ರೋಲ್‌ಗೆ ಕಾರಣವಾಗಿದೆ. ಸ್ಮೃತಿ ಮಂಧಾನಾ ಹೆಸರನ್ನು ಉಲ್ಲೇಖಿಸಿ ಅಭಿನಂದಿಸುವಾಗ ಎಡವಿದ್ದರು. ವಿಡಿಯೋ ಈಗ ವೈರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

28 Sep 2023, 03:00 PM

ಕರ್ನಾಟಕ ಬಂದ್ | ಸಾರಿಗೆ ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ನೂರಾರು ಕನ್ನಡಪರ ಸಂಘಟನೆಗಳು ಸೆ.29ರಂದು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ಆದರೆ ಈ ನಡುವೆ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಸಂಚಾರ ಇರಲಿದ್ದು, ನೌಕರರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

bmtc ksrtc 1

28 Sep 2023, 03:00 PM

ಸುಮಲತಾರಿಗೆ 2 ಗಂಟೆಯಲ್ಲಿ ಪ್ರಧಾನಿ ಭೇಟಿ ಸಿಗುವ ಅವಕಾಶ ಸಿಎಂಗೆ ಯಾಕಿಲ್ಲ? ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಕಾವೇರಿ ವಿಚಾರವಾಗಿ ಪ್ರಧಾನಿ ಭೇಟಿಗೆಂದು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಹಿತ ಕ್ಯಾಬಿನೆಟ್ ಸಚಿವರು ದೆಹಲಿಗೆ ಹೋಗಿ ನಾಲ್ಕು ದಿವಸ ಕಾದರೂ ಅವಕಾಶ ನೀಡಿಲ್ಲ. ಆದರೆ ಪ್ರಧಾನಿಗೆ ಪತ್ರ ಬರೆದ ಎರಡು ಗಂಟೆಯಲ್ಲಿ ಮಂಡ್ಯ ಸಂಸದೆ ಸುಮಲತಾರಿಗೆ ಅವಕಾಶ ಸಿಗುತ್ತದೆ. 10 ಗಂಟೆಗೆ ಪತ್ರ ಬರೆದರೆ 12 ಗಂಟೆಗೆ ಭೇಟಿಯಾಗಲು ಅವಕಾಶ ಸಿಗುತ್ತದೆ. ಅದಕ್ಕೆ ನಮಗೆ ಹೊಟ್ಟಿಕಿಚ್ಚಿಲ್ಲ. ಓರ್ವ ಸಿಎಂ, ಡಿಸಿಎಂಗೆ ಅವಮಾನ ಮಾಡ್ತೀರಿ. ವಿಪಕ್ಷ ನಾಯಕರಿಗೂ ಬೆಲೆ ಇಲ್ಲವೇ? ಎಂದು ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಪ್ರಶ್ನಿಸಿದ್ದಾರೆ.

ಎಂ ಲಕ್ಷ್ಮಣ್‌

28 Sep 2023, 11:20 PM

ಕಲಬುರಗಿ | ಭಗತ್ ಸಿಂಗ್ ಜನ್ಮದಿನದಂದು ಗಾಂಧಿ ಹಂತಕ ಗೋಡ್ಸೆ ಫೋಟೊ ಮೆರವಣಿಗೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ನಡೆದ ಭಗತ್ ಸಿಂಗ್ ಜನ್ಮದಿನದ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಗಾಂಧೀಜಿ ಹಂತಕ ನಾಥೂರಾಮ್ ಗೋಡ್ಸೆಯ ಫೋಟೊವನ್ನು ಮೆರವಣಿಗೆ ಮಾಡಲಾಗಿದೆ. ವೈಜೂ ಸಾಹುಕಾರ ಮುರಗಾನೂರ ಇವರ ಮುಂದಾಳತ್ವದಲ್ಲಿ ನಡೆದ ಮೆರವಣಿಗೆಯಲ್ಲಿ, ಭಗತ್ ಸಿಂಗ್, ರಾಣಿ ಚೆನ್ನಮ್ಮ, ಸರ್ದಾರ್ ವಲ್ಲಭಭಾಯಿ ಪಟೇಲ್ ಮುಂತಾದ ರಾಷ್ಟ್ರ ನಾಯಕರ ಫೋಟೊ ಜೊತೆಗೆ ಸಾವರ್ಕರ್ ಮತ್ತು ಗಾಂಧಿ ಹಂತಕ ಗೋಡ್ಸೆಯ ಫೋಟೋವನ್ನೂ ಮೆರವಣಿಗೆ ಮಾಡಲಾಗಿದೆ.

godse pic

28 Sep 2023, 11:00 PM

ಕರ್ನಾಟಕ ಬಂದ್: ಸಿನಿಮಾ ಬಿಡುಗಡೆ ಮುಂದೂಡಲು ನಿರ್ಮಾಪಕರ ಸಂಘ ಮನವಿ

ಕಾವೇರಿ ನೀರಿನ ವಿಚಾರವಾಗಿ ಕನ್ನಡಪರ ಸಂಘಟನೆಗಳು ನಾಳೆ(ಸೆ.29) ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

karnataka bund pic
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...